ರಾಜಕೀಯಕ್ಕೆ ಕಾಲಿಟ್ಟ ತಮಿಳು ನಟ ದಳಪತಿ ವಿಜಯ್: ‘ತಮಿಳಗ ವೆಟ್ರಿ ಕಳಗಂ’ ಪಕ್ಷ ಘೋಷಣೆ

Date:

Advertisements

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಜೀವನ ಪ್ರವೇಶದ ಬಗ್ಗೆ ಘೋಷಣೆ ಮಾಡಿದ್ದಾರೆ.

ಅವರ ನೂತನ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ ಎಂದು ಹೆಸರನ್ನು ಘೋಷಿಸಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ, ರಾಜಕೀಯ ಪಕ್ಷದ ರಚನೆಗೆ ಒಪ್ಪಿಗೆ ನೀಡಿದ ಬಳಿಕ ಇಂದು ತಮ್ಮ ರಾಜಕೀಯ ಪಕ್ಷದ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ನಟ ವಿಜಯ್, ನಮ್ಮ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಅನ್ನು ನೋಂದಾಯಿಸಲು ಚುನಾವಣಾ ಆಯೋಗಕ್ಕೆ ಇಂದು ಅರ್ಜಿ ಸಲ್ಲಿಸುತ್ತಿದ್ದೇವೆ. ಮುಂಬರುವ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಮತ್ತು ಮೂಲಭೂತ ರಾಜಕೀಯ ಬದಲಾವಣೆ ತರುವುದು ನಮ್ಮ ಗುರಿಯಾಗಿದೆ” ಎಂದಿದ್ದಾರೆ.

Advertisements

2024ರಲ್ಲಿ ಸ್ಪರ್ಧೆಯಿಲ್ಲ

ಅದೇ ರೀತಿ ನಾವು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿ ಸಭೆಗಾಗಿ ನಾವು ಈ ನಿರ್ಧಾರವನ್ನು ಮಾಡಿದ್ದೇವೆ ಎಂದು ಕೂಡ ಇದೇ ವೇಳೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆಗೂ ಮುನ್ನ ರಾಜಕೀಯ ಪಾದಾರ್ಪಣೆಗೆ ಸಜ್ಜಾದ ನಟ ವಿಜಯ್

ಕೇರಳ ಮತ್ತು ಕರ್ನಾಟಕದಲ್ಲಿ ಅವರ ಬಲವಾದ ಮತ್ತು ಸಂಘಟಿತ ಅಭಿಮಾನಿಗಳನ್ನು ಗಮನಿಸಿದರೆ ಪಕ್ಷದ ವ್ಯಾಪ್ತಿಯು ತಮಿಳುನಾಡು ರಾಜ್ಯವನ್ನು ಮೀರಿ ವಿಸ್ತರಿಸುವ ಸಾಧ್ಯತೆ ಇದೆ ಎಂದು ನಟ ವಿಜಯ್ ಅವರ ಆಪ್ತರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಅಭಿಮಾನಿಗಳಿಂದ ಸಂಭ್ರಮಾಚರಣೆ

ನಟ ವಿಜಯ್ ರಾಜಕೀಯಕ್ಕೆ ಪ್ರವೇಶಿಸುತ್ತಿದ್ದಂತೆ ಮಧುರೈ, ಚೆನ್ನೈ ಸೇರಿದಂತೆ ವಿವಿಧ ಕಡೆಗಳಲ್ಲಿ ನಟ ವಿಜಯ್ ಬೆಂಬಲಿಗರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ವಿಜಯ್ ಅವರ ಫೋಟೋಗೆ ಪೂಜೆ ಸಲ್ಲಿಸಿ, ತೆಂಗಿನಕಾಯಿ ಒಡೆದು ಸಂಭ್ರಮಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X