ತಮಿಳುನಾಡು ಚುನಾವಣೆ | ಬಿಜೆಪಿ – ಎಐಎಡಿಎಂಕೆ ಮೈತ್ರಿ: ಅಮಿತ್ ಶಾ ಘೋಷಣೆ

Date:

2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಜೊತೆಯಾಗಿ ಸ್ಪರ್ಧಿಸಲಿವೆ. ಎನ್‌ಡಿಎ ಮೈತ್ರಿಕೂಟದಡಿ ಚುನಾವಣೆ ಎದುರಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.

- Advertisement -

ಇತ್ತೀಚೆಗೆ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಸಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ. ನೇಮಕದ ಬಳಿಕ, ಎಐಎಡಿಎಂಕೆ ಮತ್ತು ಬಿಜೆಪಿ ನಾಯಕರು ಚೆನ್ನೈನಲ್ಲಿ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಮೈತ್ರಿಯ ಬಗ್ಗೆ ಅಮಿತ್ ಶಾ ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“2014ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು (ಬಿಜೆಪಿ-ಎಐಎಡಿಎಂಕೆ) ತಮಿಳುನಾಡಿನಲ್ಲಿ 30 ಸ್ಥಾನಗಳನ್ನು ಗೆದ್ದಿತ್ತು. ರಾಜ್ಯದಲ್ಲಿ ಸರ್ಕಾರ ರಚಿಸಿತ್ತು. ಈ ಬಾರಿಯೂ ಮೈತ್ರಿಯೊಂದಿಗೆ ಸ್ಪರ್ಧಿಸಲಿದೆ. ಮತ್ತೆ ಸರ್ಕಾರ ರಚಿಸಲಿದೆ” ಎಂದು ಅಮಿತ್ ಶಾ ಹೇಳಿದ್ದಾರೆ.

1998ರಿಂದಲೂ ತಮಿಳುನಾಡಿನಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯಲ್ಲಿವೆ. ಆದಾಗ್ಯೂ, ತಮಿಳುನಾಡಿನಲ್ಲಿ ಬಿಜೆಪಿ ತನ್ನ ನೆಲೆಯನ್ನು ಕಂಡುಕೊಳ್ಳಲು ಸಾಧ್ಯವಾಗಿಲ್ಲ. ನೆಲೆಗಾಗಿ ಬಿಜೆಪಿ ನಾನಾ ರೀತಿಯ ಕಸರತ್ತು ನಡೆಸುತ್ತಿದೆ. ಆದರೂ, ದ್ರಾವಿಡ ಹೋರಾಟದ ನೆಲೆಯಾಗಿರುವ ತಮಿಳುನಾಡು ಬಿಜೆಪಿಗೆ ಅವಕಾಶ ಕೊಡುತ್ತಿಲ್ಲ. ಕಳೆದ ವರ್ಷ (2024) ನಡೆದ ಲೋಕಸಭಾ ಚುನಾವಣೆಗೂ ಮುನ್ನ 2023ರ ಸೆಪ್ಟೆಂಬರ್‌ನಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಎಐಎಡಿಎಂಕೆ ಹೊರಬಂದಿತ್ತು. ಇದೀಗ, ಮತ್ತೆ ಎನ್‌ಡಿಎ ಭಾಗವಾಗಿದೆ.

ಇತ್ತೀಚಿನ ದಿನಗಳಲ್ಲಿ ಹಿಂದಿ ಹೇರಿಕೆ, ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಅನುದಾನ ತಡೆಯಂತಹ ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ತಮಿಳುನಾಡಿನಲ್ಲಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಹೀಗಾಗಿ, ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿ ನೆಲೆ ಕಂಡುಕೊಳ್ಳಲು ಸಾಧ್ಯವಿಲ್ಲ ಎಂಬ ಅಭಿಪ್ರಾಯಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೋಯ್ಡಾ ಬಳಿ ವಿದ್ಯಾರ್ಥಿಗಳಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

​ನೋಯ್ಡಾದ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಜಿಎನ್‌ಐಓಟಿ (GNIOT) ಕಾಲೇಜಿನ ಮುಂಭಾಗದಲ್ಲಿ...

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...