ಸಿಎಂ ಸಂಪರ್ಕಿಸದೆ ಬಂಧಿತ ಸಚಿವರನ್ನು ವಜಾ ಮಾಡಿದ ತಮಿಳುನಾಡು ರಾಜ್ಯಪಾಲ

Date:

Advertisements

ವಿವಾದಾತ್ಮಕ ನಿರ್ಧಾರದಲ್ಲಿ ತಮಿಳುನಾಡು ರಾಜ್ಯಪಾಲ ಆರ್‌ ಎನ್ ರವಿ ಅವರು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರನ್ನು ಸಂಪರ್ಕಿಸದೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ.

ರಾಜ್ಯಪಾಲ ಆರ್‌ ಎನ್ ರವಿ ಅವರ ಏಕಪಕ್ಷೀಯ ನಿರ್ಧಾರದಿಂದ ತಮಿಳುನಾಡಿನ ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜೂನ್‌ 14ರಂದು ಉದ್ಯೋಗಕ್ಕಾಗಿ ಲಂಚ ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿದ್ದರು. ಪ್ರಸ್ತುತ ಜೈಲು ಸೇರಿರುವ ಮತ್ತು ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಬಾಲಾಜಿ ಅವರನ್ನು ಸ್ಟಾಲಿನ್ ಅವರು ಖಾತೆರಹಿತ ಸಚಿವರಾಗಿ ಉಳಿಸಿಕೊಂಡಿದ್ದರು. ಇದೀಗ ರಾಜ್ಯಪಾಲರು ಏಕಪಕ್ಷೀಯ ಕ್ರಮದಿಂದ ಸಚಿವ ಸ್ಥಾನದಿಂದ ವಜಾಗೊಳಿಸಿದ್ದಾರೆ.

Advertisements

“ಸಚಿವ ಸೆಂಥಿಲ್ ಬಾಲಾಜಿ ಅವರು ಉದ್ಯೋಗಕ್ಕಾಗಿ ಲಂಚ ತೆಗೆದುಕೊಳ್ಳುವುದು ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನಿಖೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ ಮತ್ತು ಕಾನೂನು ಮತ್ತು ನ್ಯಾಯದ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದ್ದಾರೆ” ಎಂದು ರಾಜ್ಯಪಾಲರು ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ರಾಜ್ಯಪಾಲ ಆರ್‌ ಎನ್ ರವಿ ಏಕಪಕ್ಷೀಯ ನಿರ್ಧಾರದಿಂದ ಆಕ್ರೋಶಗೊಂಡಿರುವ ತಮಿಳುನಾಡು ಸರ್ಕಾರ ಈ ಕ್ರಮವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಮಣಿಪುರ | ಸಂತ್ರಸ್ತ ಪರಿಹಾರ ಶಿಬಿರದಲ್ಲಿ ಮಕ್ಕಳೊಂದಿಗೆ ಆಹಾರ ಸೇವಿಸಿದ ರಾಹುಲ್‌ ಗಾಂಧಿ

ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟು ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಾಜಿ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ.

ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಬಂಧವು ಹಲವು ತಿಂಗಳುಗಳಿಂದ ಉದ್ವಿಗ್ನಗೊಂಡಿದೆ. ಸರ್ಕಾರದ ಹಲವಾರು ವಿಷಯಗಳ ಬಗ್ಗೆ ರಾಜ್ಯಪಾಲರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಖ್ಯವಾಗಿ, ರಾಜ್ಯ ವಿಧಾನಸಭೆಯು ಅಂಗೀಕರಿಸಿದ ಶಾಸನಕ್ಕೆ ರಾಜ್ಯಪಾಲರು ಒಪ್ಪಿಗೆ ನಿರಾಕರಿಸಿದರು. ರಾಜ್ಯಪಾಲರ ನಿರ್ಧಾರದ ಬಗ್ಗೆ ಡಿಎಂಕೆ ಕಳೆದ ವರ್ಷ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ಸಲ್ಲಿಸಿತ್ತು.

ಪಶ್ಚಿಮ ಬಂಗಾಳ, ತೆಲಂಗಾಣ, ಕೇರಳ, ನವದೆಹಲಿ ಸೇರಿದಂತೆ ಪ್ರತಿಪಕ್ಷಗಳು ಆಳ್ವಿಕೆ ನಡೆಸುವ ಇತರ ರಾಜ್ಯಗಳಲ್ಲಿ ಇದೇ ರೀತಿಯ ಘರ್ಷಣೆಗಳು ವರದಿಯಾಗಿವೆ. ಈ ಪ್ರಕರಣಗಳಲ್ಲಿ, ರಾಜ್ಯಪಾಲರು ಅಥವಾ ಲೆಫ್ಟಿನೆಂಟ್ ಗವರ್ನರ್‌ಗಳು ಪಕ್ಷಪಾತದ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಆಡಳಿತ ಪಕ್ಷಗಳು ಆರೋಪಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X