ತೆಲಂಗಾಣ | 12 ಬಿಆರ್‌ಎಸ್ ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆ

Date:

ಜುಲೈ ಎರಡನೇ ವಾರದಲ್ಲಿ ತೆಲಂಗಾಣ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಸಿದ್ದತೆ ನಡೆಸುತ್ತಿದೆ. ಇದಕ್ಕೂ ಮುನ್ನ 12 ಬಿಆರ್‌ಎಸ್‌ ಶಾಸಕರು ಕಾಂಗ್ರೆಸ್‌ಗೆ ಪಕ್ಷಾಂತರವಾಗುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಗೂ ಮುನ್ನ ಮೂವರು ಬಿಆರ್‌ಎಸ್‌ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದ ಆಡಳಿತಾರೂಢ ಕಾಂಗ್ರೆಸ್‌, ಇದೀಗ 12 ಶಾಸಕರ ಜೊತೆ ಚರ್ಚೆ ನಡೆಸುತ್ತಿದೆ ಎಂದು ವರದಿಯಾಗಿದೆ.

- Advertisement -

ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದ 17 ಸ್ಥಾನಗಳ ಪೈಕಿ ಎಂಟು ಸ್ಥಾನಗಳನ್ನು ಗೆದ್ದಿರುವ ಬಿಜೆಪಿಯಿಂದ ಬೆದರಿಕೆ ಇದೆ. ಅವರು ತೆಲಂಗಾಣದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಪತನಗೊಳಿಸುವ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಆರೋಪಿಸಿದ್ದಾರೆ. ಅಲ್ಲದೆ, ಮಾಜಿ ಸಚಿವರು ಸೇರಿದಂತೆ ಬಿಆರ್‌ಎಸ್‌ನ ಕೆಲವು ಶಾಸಕರು ತಮ್ಮ ವ್ಯಾಪಾರ-ವಹಿವಾಟುಗಳನ್ನು ರಕ್ಷಿಸಲು ಮತ್ತು ಕೇಂದ್ರೀಯ ಸಂಸ್ಥೆಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಬಿಜೆಪಿಗೆ ಸೇರುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ. ಈ ನಡುವೆ, ಕಾಂಗ್ರೆಸ್‌ ಆಪರೇಷನ್ ಆಕರ್ಷ್‌ಅನ್ನು ಆರಂಭಿಸಿದೆ ಎನ್ನಲಾಗಿದೆ. ದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ ತನ್ನದೇ ಧ್ವನಿಯನ್ನು ಕಾಪಾಡಿಕೊಂಡು, ಸ್ವತಂತ್ರವಾಗಿ ಯೋಚಿಸಿ, ಬದುಕಿನ ನೈಜ ಅನುಭವಗಳನ್ನು ಪ್ರಾಮಾಣಿಕವಾಗಿ ದಾಖಲಿಸುವ ಬರಹಗಾರರು ಎಷ್ಟು ಮುಖ್ಯರಾಗುತ್ತಾರೆ ಎಂಬುದಾಗಿದೆ. ತಂತ್ರಜ್ಞಾನ...

ಹಿಂದೂ ಕೋಡ್ ಬಿಲ್ ಹೋರಾಟಕ್ಕೆ 75 ವರ್ಷ: ಸಮಾನತೆಯ...

ಅಂಬೇಡ್ಕರ್ ಅವರ ದೃಷ್ಟಿಯಲ್ಲಿ ಹಿಂದೂ ಕೋಡ್ ಬಿಲ್ ಕೇವಲ ಮಹಿಳಾ ಹಕ್ಕುಗಳ ಮಸೂದೆಯಾಗಿರಲಿಲ್ಲ; ಅದು ಶತಮಾನಗಳಿಂದ ಬೇರೂರಿದ್ದ ಜಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಬಲ ಅಸ್ತ್ರವೂ ಆಗಿತ್ತು. ಜಾತಿ ವ್ಯವಸ್ಥೆಯು ಜೀವಂತವಾಗಿರುವುದೇ 'ಸಜಾತೀಯ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್...

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ ಅದು ಕೋಟ್ಯಂತರ ಜನರ ಬದುಕು. ಆ ಬದುಕಿನ ಮೇಲೆ ಯಾವುದೇ ಹೆಚ್ಚುವರಿ ಹೊರೆ ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ನಿಜವಾದ ಜವಾಬ್ದಾರಿ. ಒಂದು...

ಬಿಆರ್‌ಎಸ್‌ ವರಿಷ್ಠ ಕೆ ಚಂದ್ರಶೇಖರ್ ರಾವ್ ಅವರ ನಿರ್ದೇಶನದಂತೆ ಪ್ರಮುಖ ಬಿಆರ್‌ಎಸ್ ನಾಯಕರು ತಮ್ಮ ಶಾಸಕರ ನಿವಾಸಗಳಿಗೆ ಭೇಟಿ ನೀಡಿ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ಈವರೆಗೆ, ನಾಲ್ವರು ಶಾಸಕರೊಂದಿಗೆ ಮಾತನಾಡಿದ್ದು, ಮುಂದಿನ ಚುನಾವಣೆಯಲ್ಲಿ ಬಿಆರ್‌ಎಸ್ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಶಾಸಕರು ಕಳೆದ 10 ವರ್ಷಗಳಿಂದ ತಮ್ಮ ಕ್ಷೇತ್ರಗಳಿಗೆ ಸರ್ಕಾರದಿಂದ ಯಾವುದೇ ಹಣಕಾಸಿನ ನೆರವು ಪಡೆದಿಲ್ಲ ಎಂದು ಪ್ರತಿಕ್ರಿಯಸಿದ್ದಾರೆ ಎಂದು ವರದಿಯಾಗಿದೆ.

ಕೆಸಿಆರ್ ಕ್ಯಾಬಿನೆಟ್‌ನಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದ ಹಿರಿಯ ಬಿಆರ್‌ಎಸ್ ಶಾಸಕರೊಬ್ಬರು, ಪಕ್ಷದ ನಾಯಕತ್ವವು ಅವರ ಬೆಂಬಲಿಗರಿಗೆ ಯಾವುದೇ ನೆರವು ನೀಡಿಲ್ಲ. ಹೀಗಾಗಿ, ಕಾಂಗ್ರೆಸ್‌ ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಸಿಎಂ ಎ ರೇವಂತ್ ರೆಡ್ಡಿ ಅವರ ಆಪ್ತರಾಗಿರುವ ಪಕ್ಷದ ಮುಖಂಡರೊಬ್ಬರು ಬಿಆರ್‌ಎಸ್ ಶಾಸಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಆರ್‌ಎಸ್‌ 39 ಸ್ಥಾನಗಳನ್ನು ಗೆದ್ದಿತ್ತು. ಬಿಆರ್‌ಎಸ್ ಶಾಸಕರೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಉಪಚುನಾವಣೆಯಲ್ಲಿ ಆ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ಪಾಲಿಗೆ ಪಡೆದುಕೊಂಡಿತು. ಮೂವರು ಶಾಸಕರು ಈಗಾಗಲೇ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರೆ, ಇನ್ನೂ 12 ಮಂದಿ ಶೀಘ್ರದಲ್ಲೇ ಸೇರುವ ಸಾಧ್ಯತೆಯಿದೆ. ಪಕ್ಷಾಂತರಿಗಳ ಸಂಖ್ಯೆ ಒಟ್ಟು 15ಕ್ಕೆ ಏರಿಕೆಯಾಗಲಿದೆ. ಪಕ್ಷಾಂತರ ನಿಷೇಧ ಕಾಯ್ದೆಯ ನಿಯಮಗಳಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ಇನ್ನೂ 10 ಬಿಆರ್‌ಎಸ್‌ ಶಾಸಕರನ್ನು ಪಕ್ಷಕ್ಕೆ ಕರೆತರಬೇಕಾಗುತ್ತದೆ. ಅದನ್ನೂ ಮಾಡಲು ಪಕ್ಷವು ಚಿಂತಿಸಿದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Formula E Case: ಎಸಿಬಿ ನ್ಯಾಯಾಲಯಕ್ಕೆ ಕೆಟಿಆರ್ ಹಾಜರು; ‘ದುರುದ್ದೇಶಪೂರಿತ ಪ್ರಚಾರ’ ಎಂದು ವಾಗ್ದಾಳಿ

ಫಾರ್ಮುಲಾ ಇ ರೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಕಾರ್ಯಾಧ್ಯಕ್ಷ ಹಾಗೂ ತೆಲಂಗಾಣ...

ಪಂಜಾಬ್: ಬಿಜೆಪಿ ನಾಯಕ ರವನೀತ್ ಸಿಂಗ್ ಬೆಂಗಾವಲು ಪಡೆಯ ಮೇಲೆ ದಾಳಿ

ಪಂಜಾಬ್‌ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿಯ ಮಾದಕವಸ್ತು ವಿರೋಧಿ ಅಭಿಯಾನದಲ್ಲಿ ಪಾಲ್ಗೊಳ್ಳಲು ಪಠಾಣ್‌ಕೋಟ್‌ನತ್ತ ತೆರಳುತ್ತಿದ್ದ...

ರಾಜಸ್ಥಾನ ಸ್ಥಳೀಯ ಚುನಾವಣೆ: 86 ಗೆದ್ದರೂ ಮಿಷನ್-200 ಸಾಧಿಸಲು ಬಿಜೆಪಿ ಹರಸಾಹಸ; ‘ಆಪರೇಷನ್ ಲೋಟಸ್’ ಸದ್ದು!

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 200...

ಅಮೆರಿಕದ ಶೇ 100 ಸುಂಕದಿಂದ ಭಾರತದ ಆರ್ಥಿಕತೆಗೆ ಕಾದಿದೆ ಭಾರಿ ಆಪತ್ತು

ವಾಷಿಂಗ್ಟನ್‌ನಿಂದ ಹೊರಬಿದ್ದಿರುವ ಈ ನಿರ್ಧಾರ ಭಾರತದ ಆರ್ಥಿಕತೆಯ ಪಾಲಿಗೆ ಅಕ್ಷರಶಃ ಮರಣಶಾಸನವಾಗಿ...