ತೆಲಂಗಾಣ: ಗೆಲುವಿನತ್ತ ಕೋಮುದ್ವೇಷ ಭಾಷಣಕಾರ ರಾಜಾ ಸಿಂಗ್‌

Date:

Advertisements

ಬಿಜೆಪಿಯಿಂದ ಉಚ್ಚಾಟಿತನಾಗಿ, ಮತ್ತೆ ಬಿಜೆಪಿಯ ಟಿಕೆಟ್ ಪಡೆದು ತೆಲಂಗಾಣದ ಗೋಶಾಮಹಲ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಾಸಕ ರಾಜಾ ಸಿಂಗ್‌ ಮತ್ತೊಮ್ಮೆ ಗೆಲುವು ಪಡೆಯುವತ್ತ ಮುನ್ನಡೆ ಸಾಧಿಸಿದ್ದಾರೆ.

13ನೇ ಸುತ್ತಿನ ಮತ ಎಣಿಕೆಯ ವೇಳೆಗೆ 25,000 ಮತಗಳ ಮುನ್ನಡೆಯನ್ನು ರಾಜಾ ಸಿಂಗ್ ಕಾಯ್ದುಕೊಂಡಿದ್ದಾರೆ. ಬಿಆರ್‌ಎಸ್ ಪಕ್ಷದ ನಂದಕಿಶೋರ್‌ ವ್ಯಾಸ್‌ ಎರಡನೇ ಸ್ಥಾನದಲ್ಲಿದ್ದರು.

ಪ್ರವಾದಿ ಮುಹಮ್ಮದ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ರಾಜಾ ಸಿಂಗ್ ಅವರನ್ನು 2022ರ ಆಗಸ್ಟ್‌ನಲ್ಲಿ ಅಮಾನತು ಮಾಡಲಾಗಿತ್ತು. ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿಯವರ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗಳನ್ನು ರಾಜಾ ಸಿಂಗ್ ಪುನರಾವರ್ತಿಸಿದ್ದರು. ಹೈದರಾಬಾದ್‌ನಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಗಳು ಭುಗಿಲೆದ್ದ ನಂತರ ಎಚ್ಚೆತ್ತುಕೊಂಡ ಬಿಜೆಪಿ, ಶಾಸಕ ರಾಜಾ ಸಿಂಗ್ ವಿರುದ್ಧ ಕ್ರಮ ಜರುಗಿಸಿತ್ತು.

Advertisements

ನೂಪುರ್‌ ಶರ್ಮಾ ನೀಡಿದ ಹೇಳಿಕೆ ಅರಬ್‌ ರಾಷ್ಟ್ರಗಳಲ್ಲಿ ಭಾರೀ ಸದ್ದು ಮಾಡಿತ್ತು. ಭಾರತದೊಂದಿಗಿನ ವ್ಯಾಪಾರ ವಹಿವಾಟುಗಳಿಗೆ ಮಾರಕವಾಗುವಂತಹ ಬೆಳವಣಿಗೆಗಳು ಆಗಿದ್ದವು.

“ಪಕ್ಷಕ್ಕೆ ಅಗೌರವ ತರುವ ಯಾವುದೇ ಕೆಲಸವನ್ನು ನಾನು ಮಾಡುವುದಿಲ್ಲ” ಎಂದು ರಾಜಾಸಿಂಗ್ ಬರೆದುಕೊಟ್ಟ ಬಳಿಕವೇ ಟಿಕೆಟ್ ನೀಡಲಾಗಿತ್ತು. ಹೈದ್ರಾಬಾದ್‌ ಲೋಕಸಭಾ ವ್ಯಾಪ್ತಿಯಲ್ಲಿ ಬರುವ 9 ವಿಧಾನಸಭಾ ಕ್ಷೇತ್ರಗಳ ಪೈಕಿ ಗೋಶಾಮಹಲ್ ಕೂಡ ಒಂದು.

ಪಕ್ಷದಿಂದ ಅಮಾನತುಗೊಳಿಸಿದ ನಂತರವೂ ರಾಜಾ ಸಿಂಗ್‌ ಮುಸ್ಲಿಮರ ವಿರುದ್ಧ ಹಲವಾರು ಬಾರಿ ದ್ವೇಷದ ಭಾಷಣಗಳನ್ನು ಮಾಡಿದ್ದರು.

“ಬುರ್ಖಾ ಧರಿಸುವ ಮಹಿಳೆಯರೊಂದಿಗೆ ಸ್ನೇಹ ಬೆಳೆಸಬೇಡಿ” ಎಂದು ಹಿಂದೂ ಮಹಿಳೆಯರನ್ನು ಉದ್ದೇಶಿಸಿ ಹೇಳಿಕೆ ನೀಡಿದ್ದರು.

“ಹಣೆಯ ಮೇಲೆ ತಿಲಕವನ್ನು ಹೊಂದಿರುವವರು ನನ್ನ ಸಹೋದರರು. ತಿಲಕವನ್ನು ಧರಿಸುವ ಜನರೊಂದಿಗೆ ಮಾತ್ರ ನಾನು ಸ್ನೇಹ ಬೆಳೆಸುತ್ತೇನೆ. ನಮ್ಮ ಸಹೋದರಿಯರೇ, ಬುರ್ಖಾ ಧರಿಸಿದ ಮಹಿಳೆಯರೊಂದಿಗೆ ಸ್ನೇಹ ಬೆಳೆಸಬೇಡಿ” ಎಂದು ಪ್ರಚೋದಿಸಿದ್ದರು.

ಮುಸ್ಲಿಂ ಪುರುಷರಷ್ಟೇ ಅಲ್ಲ, ಮಹಿಳೆಯರಿಂದಲೂ ಹಿಂದೂಗಳು ಅಪಾಯವನ್ನು ಎದುರಿಸುತ್ತಿದ್ದಾರೆ. ಒಂದು ಕಾಲದಲ್ಲಿ ನಾವು ಅಫ್ತಾಬ್‌ನಿಂದ ಅಪಾಯವನ್ನು ಎದುರಿಸಿದ್ದೇವೆ, ಆದರೆ ಈಗ ಆಯೇಷಾರಿಂದಲೂ ಅಪಾಯವಿದೆ. ಅಫ್ತಾಬ್‌ಗೆ [ಹಿಂದೂ ಮಹಿಳೆಯರನ್ನು] ಪರಿಚಯಿಸಿದ್ದು ಇದೇ ಆಯೇಷಾ ಎಂದಿದ್ದರು.

ಮಾರ್ಚ್‌ ತಿಂಗಳು ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ರಾಜಾ ಸಿಂಗ್  ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದರು. 2026ರ ವೇಳೆಗೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಲಾಗುವುದು ಎಂದು ತಿಳಿಸಿದ್ದರು.

ಮಹಾರಾಷ್ಟ್ರದ ಔರಂಗಾಬಾದ್ ನಗರಕ್ಕೆ ಛತ್ರಪತಿ ಸಂಭಾಜಿನಗರ ಎಂದು ಮರುನಾಮಕರಣ ಮಾಡುವುದನ್ನು ಬೆಂಬಲಿಸಲು ಆಯೋಜಿಸಲಾಗಿದ್ದ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಜಾ ಸಿಂಗ್‌, “ಲವ್ ಜಿಹಾದ್ ಪ್ರಕರಣಗಳು ಕಂಡುಬಂದರೆ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದರು.

ಭಾರತದಲ್ಲಿ 100 ಕೋಟಿ ಹಿಂದೂಗಳಿದ್ದಾರೆ. ಹಿಂದೂಗಳು ಜಿಹಾದ್ ಮಾಡಲು ಪ್ರಾರಂಭಿಸಿದರೆ, ನಿಮಗೆ [ಮುಸ್ಲಿಮರಿಗೆ] ಮದುವೆಯಾಗಲು ಹೆಣ್ಣುಗಳು ಸಿಗುವುದಿಲ್ಲ ಎಂದು ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದರು.

ಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಗೆ ನಿಂದನೀಯ ಪದಗಳನ್ನು ಬಳಸಿದ್ದರು. ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕರನ್ನು ನಾಯಿಗಳಿಗೆ ಹೋಲಿಸಿದ್ದರು.

ಮಹಾತ್ಮ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯ ಭಾವಚಿತ್ರ ಪ್ರದರ್ಶನ ಮತ್ತು ಅಖಂಡ ಭಾರತ ನಿರ್ಮಾಣಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ರಾಜಾ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X