ತೆಲಂಗಾಣ ಚುನಾವಣೆ | ಬಿಜೆಪಿ ಮೊದಲ ಪಟ್ಟಿ ಪ್ರಕಟ; 52 ಅಭ್ಯರ್ಥಿಗಳು ಘೋಷಣೆ

Date:

Advertisements

ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 52 ಅಭ್ಯರ್ಥಿಗಳನ್ನು ಘೋಷಿಸಿದ್ದು, ಅದರಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸಂಸದ ಬಂಡಿ ಸಂಜಯ್ ಕುಮಾರ್ ಸೇರಿದಂತೆ ಮೂವರು (ಧರ್ಮಪುರಿ ಅರವಿಂದ್ ಮತ್ತು ಸೋಯಮ್ ಬಾಪು ರಾವ್) ಸಂಸದರು ಕಣಕ್ಕಿಳಿದಿದ್ದಾರೆ. ಕ್ರಮವಾಗಿ ಕರೀಂನಗರ, ಕೊರಟ್ಲಾ ಮತ್ತು ಬೋತ್ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಮೂವರು ಸ್ಪರ್ಧಿಸಲಿದ್ದಾರೆ.

ಪ್ರವಾದಿ ವಿರುದ್ಧದ ಹೇಳಿಕೆ ನೀಡಿ ಕಳೆದ ವರ್ಷ ಅಮಾನತುಗೊಂಡಿದ್ದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್‌ ಅವರ ಅಮಾನತನ್ನು ಬಿಜೆಪಿ ಹಿಂಪಡೆದಿದೆ. ಅವರಿಗೆ ಗೋಶಾಮಹಲ್ ಕ್ಷೇತ್ರದ ಟಿಕೆಟ್ ನೀಡಿದೆ.

ಬಿಜೆಪಿಯ ರಾಜ್ಯ ಚುನಾವಣಾ ಸಮಿತಿ ಮುಖ್ಯಸ್ಥ, ಶಾಸಕ ಈಟೆಲ ರಾಜೇಂದರ್ ಅವರು ತಮ್ಮ ಹಾಲಿ ಕ್ಷೇತ್ರ ಹುಜೂರಾಬಾದ್ ಮತ್ತು ಗಜ್ವೇಲ್‌ನಿಂದ ಕಣಕ್ಕಿಳಿದಿದ್ದಾರೆ. ರಾಜೇಂದರ್ ಅವರು ಗಜ್ವೇಲ್‌ನಲ್ಲಿ ಮುಖ್ಯಮಂತ್ರಿ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್ ಅವರನ್ನು ಎದುರಿಸಲಿದ್ದಾರೆ. ಕೆಸಿಆರ್ ಕೂಡ ಮತ್ತೊಂದು ಕ್ಷೇತ್ರ ಕಾಮರೆಡ್ಡಿಯಿಂದ ಸ್ಪರ್ಧಿಸುತ್ತಿದ್ದಾರೆ.

Advertisements

ಬಂಡಿ ಸಂಜಯ್ ಕುಮಾರ್ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಕರೀಂನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಬಳಿಕ, 019ರ ಲೋಕಸಭಾ ಚುನಾವಣೆಯಲ್ಲಿ ಕರೀಂನಗರ ಲೋಕಸಭಾ ಕ್ಷೇತ್ರದಿಂದ ಗೆದ್ದು, ಲೋಕಸಭೆ ಪ್ರವೇಶಿಸಿದ್ದರು..

ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹನ್ನೆರಡು ಮಹಿಳಾ ಅಭ್ಯರ್ಥಿಗಳಿದ್ದಾರೆ. ಅವರಲ್ಲಿ ಬೆಳ್ಳಂಪಳ್ಳಿಯಿಂದ ಅಮರಜುಲ ಶ್ರೀದೇವಿ (ಎಸ್‌ಸಿ), ಜುಕ್ಕಲ್‌ನಿಂದ ಟಿ ಅರುಣಾ ತಾರಾ (ಎಸ್‌ಸಿ), ಬಾಳಕೊಂಡದಿಂದ ಅನ್ನಪೂರ್ಣಮ್ಮ ಆಲೇಟಿ, ಜಗ್ತಿಯಾಲ್‌ನಿಂದ ಬೋಗ ಶ್ರಾವಣಿ, ರಾಮಗುಂಡೆಂನಿಂದ ಕಂದುಲ ಸಂಧ್ಯಾ ರಾಣಿ, ಚೊಪ್ಪದಂಡಿಯಿಂದ ಬೋಡಿಗ ಶೋಭಾ (ಎಸ್‌ಸಿ), ಸಿರ್ಸಿಲ್ಲಾ, ಮೇಘಾದಿಂದ ರಾಣಿ ರುದ್ರಮ ರೆಡ್ಡಿ ಸೇರಿದ್ದಾರೆ. ಚಾರಿಮಿನಾರ್‌ನಿಂದ ರಾಣಿ, ನಾಗಾರ್ಜುನ ಸಾಗರದಿಂದ ಕಂಕನಾಳ ನಿವೇದಿತಾ ರೆಡ್ಡಿ, ಡೋರ್ನಕಲ್ (ಎಸ್‌ಟಿ) ನಿಂದ ಭೂಕ್ಯ ಸಂಗೀತಾ (ಎಸ್‌ಟಿ), ವಾರಂಗಲ್ ಪಶ್ಚಿಮದಿಂದ ರಾವ್ ಪದ್ಮ, ಮತ್ತು ಭೂಪಾಲಪಲ್ಲೆಯಿಂದ ಚಂದುಪಟ್ಲ ಕೀರ್ತಿ ರೆಡ್ಡಿ ಕಣಕ್ಕಿಳಿದಿದ್ದಾರೆ.

ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಪ್ರಾಮುಖ್ಯತೆ ನೀಡಿದೆ. ಈ 52 ಅಭ್ಯರ್ಥಿಗಳಲ್ಲಿ ಇಪ್ಪತ್ತು ಮಂದಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

“ಎಲ್ಲಾ ಮಹಿಳಾ ಅಭ್ಯರ್ಥಿಗಳು ಪಕ್ಷದ ದೀರ್ಘಕಾಲದ ಕಾರ್ಯಕರ್ತರು,” ಪಕ್ಷ ಹೇಳಿಕೊಂಡಿದೆ.

201 ರ ವಿಧಾನಸಭಾ ಚುನಾವಣೆಯಲ್ಲಿ, ತೆಲಂಗಾಣದ ಒಟ್ಟು 119 ಸ್ಥಾನಗಳಲ್ಲಿ ಬಿಜೆಪಿ ಕೇವಲ ಒಂದು ಸ್ಥಾನವನ್ನು ಮಾತ್ರ ಗೆದ್ದಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X