ಬಿಜೆಪಿ ಸಂಸದನಿಂದ ಅವಹೇಳನ: ಸ್ಪೀಕರ್‌ ವಿರುದ್ಧ ಸಿಡಿದೆದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

Date:

Advertisements
  • ಮರ್ಯಾದಾ ಪುರುಷ ಸ್ಪೀಕರ್ ಅವರೇ ಏನು ಕ್ರಮ ಕೈಗೊಳ್ಳುತ್ತೀರಿ? ಬಹಿರಂಗವಾಗಿಯೇ ಪ್ರಶ್ನಿಸಿದ ಸಂಸದೆ
  • ಸಂಸದ ದಾನಿಶ್ ಅಲಿಯನ್ನು ‘ಭಯೋತ್ಪಾದಕ’ ಎಂದು ಹೀಯಾಳಿಸಿದ್ದ ಬಿಜೆಪಿ ಸಂಸದ ರಮೇಶ್ ಬಿಧುರಿ

ಬಿಎಸ್‌ಪಿಯ ಮುಸ್ಲಿಂ ಸಂಸದ ದಾನಿಶ್ ಅಲಿಯನ್ನು ಬಿಜೆಪಿಯ ಸಂಸದ ರಮೇಶ್ ಬಿಧುರಿ ಸಂಸತ್ತಿನ ವಿಶೇಷ ಅಧಿವೇಶನದಲ್ಲೇ ‘ಭಯೋತ್ಪಾದಕ’ ಎಂದು ಕರೆದು, ಹೀಯಾಳಿಸಿರುವ ಘಟನೆ ದೇಶಾದ್ಯಂತ ವಿವಾದ ಎಬ್ಬಿಸಿದೆ.

ರಮೇಶ್ ಬಿಧುರಿಯ ಈ ಹೇಳಿಕೆಯ ಬಗ್ಗೆ ಸ್ಪೀಕರ್‌ ವಿರುದ್ಧ ಸಿಡಿದೆದ್ದಿರುವ ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ, “ಮರ್ಯಾದಾ ಪುರುಷ ಸ್ಪೀಕರ್ ಅವರೇ ಏನು ಕ್ರಮ ಕೈಗೊಳ್ಳುತ್ತೀರಿ?” ಎಂದು ಬಹಿರಂಗವಾಗಿಯೇ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಮರ್ಯಾದಾ ಪುರುಷ ಎಂದು ಉಲ್ಲೇಖಿಸಿದ್ದಾರೆ. ಇದಕ್ಕೆ ಸಮರ್ಥನೆ ನೀಡಿರುವ ಮಹುವಾ ಮೊಯಿತ್ರಾ, “ನಿಮ್ಮನ್ನು ಈ ರೀತಿ ಕರೆದಿದ್ದಕ್ಕಾಗಿ ನನ್ನ ವಿರುದ್ಧ ಏನು ಬೇಕಾದರೂ ಕ್ರಮ ತೆಗೆದುಕೊಳ್ಳಲಿಕ್ಕೆ ನೀವು ಹಿಂಜರಿಯಬೇಡಿ. ಯಾವುದೇ ಸಮಿತಿಗಳನ್ನು ರಚಿಸಿದರೂ ಅದನ್ನು ಎದುರಿಸಲು ನನಗೆ ಸಂತೋಷವಾಗುತ್ತದೆ. ಆದರೆ, ನಾನು ಇಲ್ಲಿ ಮತ್ತು ಈಗ ನಿಮ್ಮನ್ನು ಕೇಳುತ್ತಿದ್ದೇನೆ, ರಮೇಶ್ ಬಿಧುರಿ ವಿರುದ್ಧ ನೀವು ಯಾವ ಕ್ರಮವನ್ನು ತೆಗೆದುಕೊಳ್ಳುತ್ತಿದ್ದೀರಿ? ಹೇಳಿ” ಎಂದು ನೇರವಾಗಿ ಸವಾಲು ಹಾಕಿದ್ದಾರೆ.

Advertisements
ಓಂ ಬಿರ್ಲಾ
Om-Birla

ಈ ನಡುವೆ ಸಂಸದ ದಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ರಮೇಶ್ ಬಿಧುರಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ರಮೇಶ್ ಬಿಧುರಿ ಅವರಿಗೆ ಎಚ್ಚರಿಕೆ ನೀಡಿದ್ದು, ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

“ಇಂತಹ ವರ್ತನೆಯನ್ನು ಪುನರಾವರ್ತಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸ್ಪೀಕರ್ ಬಿಜೆಪಿ ಸಂಸದನಿಗೆ ಎಚ್ಚರಿಕೆ ನೀಡಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದಕ್ಕೆ ಕಿಡಿಯಾಗಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆ, “ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರದ್ದು ನಿಷ್ಪಕ್ಷಪಾತದ ನಿಜವಾದ ಮಾದರಿ. ರಮೇಶ್ ಬಿಧುರಿಗೆ ಮತ್ತೊಮ್ಮೆ ಹೀಗೆ ಮಾಡಬಾರದೆಂದು ಓಂ ಬಿರ್ಲಾ ಎಚ್ಚರಿಕೆ ಕೊಟ್ಟಿದ್ದಾರಂತೆ. ವಾಹ್, ಆದರೆ, ಬಿಜೆಪಿಯೇತರರಾದ ಅಧೀರ್ ರಂಜನ್ ಚೌಧರಿ & ಸಂಜಯ್‌ ಸಿಂಗ್ ಅವರನ್ನು ಕ್ಷುಲ್ಲಕ ಕಾರಣಕ್ಕೆ ಅಮಾನತು ಮಾಡಲಾಗುತ್ತದೆ‌. ಏನಾಯ್ತು ಸರ್, ಈಗ ಮರ್ಯಾದೆ, ಹಿರಿಮೆ ಎಲ್ಲ ಮರೆತು ಬಿಟ್ರಾ? ನಾಚಿಗೆಯಾಗ್ಬೇಕು” ಎಂದು ಸಂಸತ್‌ನಲ್ಲಿ ಬಿಜೆಪಿಗರ ಪಾಲಿಗೆ ಸಿಂಹಸ್ವಪ್ನವಾಗಿ ಗುರುತಿಸಿಕೊಂಡಿರುವ ಸಂಸದೆ ಮಹುವಾ ಮೊಯಿತ್ರಾ ಈ ಬಾರಿ ಲೋಕಸಭಾ ಸ್ಪೀಕರ್ ವಿರುದ್ಧವೇ ಬಹಿರಂಗವಾಗಿ ಸಿಡಿದೆದ್ದಿದ್ದಾರೆ.

ಬಿಜೆಪಿಯ ದೆಹಲಿ ಸಂಸದನಾಗಿರುವ ರಮೇಶ್ ಬಿಧುರಿ ಅವರು ಲೋಕಸಭೆಯಲ್ಲಿ ತಮ್ಮ ಮಾತಿನ ವೇಳೆ ಸಂಸತ್ತಿನ ಸಹೋದ್ಯೋಗಿ ಬಹುಜನ ಸಮಾಜ ಪಕ್ಷದ ದಾನಿಶ್ ಅಲಿ ಅವರನ್ನು “ಯೇ ಉಗ್ರವಾದಿ, ಯೇ ಆತಂಕ್ವಾದಿ, ಮುಲ್ಲಾ ಆತಂಕವಾದಿ, ಭರ್ವಾ (ವೇಶ್ಯಾವಾಟಿಕೆ ದಂಧೆ ನಡೆಸುವವ) ಮತ್ತು ಕತ್ವಾ (ಮುಂಜಿ ಮಾಡಿಸಿದವ)” ಎಂದು ಹಿಂದಿಯಲ್ಲಿ ಉಲ್ಲೇಖಿಸಿ, ಅವಮಾನಗೈದ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X