ಪಠ್ಯ ಪುಸ್ತಕಗಳು ರಾಜಕೀಯ ನಿಲುವು/ಹಿತಾಸಕ್ತಿಗಳಿಗೆ ಹೊರತಾಗಿರಲಿ

Date:

Advertisements
ರಾಜಕೀಯ ಪಕ್ಷಗಳು ತಮ್ಮ ವಿಚಾರಧಾರೆಗಳ ಪ್ರಚಾರಕ್ಕಾಗಿ ಪಠ್ಯಪುಸ್ತಕ ಪರಿಷ್ಕರಣೆ ಕಾರ್ಯಕ್ಕೆ ಮುಂದಾದರೆ, ಅದು ಎಲ್ಲಿಗೆ ಹೋಗುತ್ತದೆ? ಪಠ್ಯ ಪುಸ್ತಕಗಳ ಬಗ್ಗೆ ಇದ್ದ ಪಾವಿತ್ರ್ಯ ನಾಶವಾಗಿದೆ. 

ಪಠ್ಯ ಪುಸ್ತಕಗಳ ಪರಿಷ್ಕರಣ ಮೊದಲಿನಿಂದಲೂ ನಡೆಯುತ್ತಿತ್ತು. ಆದರೆ, ಸಾರ್ವತ್ರಿಕವಾಗಿ ಇಷ್ಟೊಂದು ವಾದ-ವಿವಾದ ಗಳಾಗುತ್ತಿರಲಿಲ್ಲ. ಅವೆಲ್ಲ ತಜ್ಞರ ವಲಯಕ್ಕೆ ಸೀಮಿತವಾಗಿರುತ್ತಿತ್ತು. ಇತ್ತೀಚಿನ ವರ್ಷಗಳಲ್ಲಿ ಸರ್ಕಾರಗಳು ಬದಲಾದಂತೆ ಪಠ್ಯಗಳನ್ನು ಪರಿಷ್ಕರಿಸುವ ಪ್ರವೃತ್ತಿ ಕಂಡುಬರುತ್ತಿದ್ದು, ಇದು ಮಕ್ಕಳಲ್ಲಿ ಆತಂಕವನ್ನು ಉಂಟುಮಾಡುವ ಮತ್ತು ಶಿಕ್ಷಕರನ್ನು ಗೊಂದಲಕ್ಕೀಡು ಮಾಡುವಂತಾಗಿರುವುದು ವಿಷಾದನೀಯ. ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಪಠ್ಯ ಪರಿಷ್ಕರಣ ಸಮಿತಿ ಮಾಡಿದ ಬದಲಾವಣೆ

ಸಾರ್ವಜನಿಕವಾಗಿ ಚರ್ಚೆಗೆ ಬಂತು. ನಂತರ ಬಂದ ಬಿಜೆಪಿ ಸರ್ಕಾರ ರೋಹಿತ್ ಚಕ್ರತೀರ್ಥರ ನೇತೃತ್ವದಲ್ಲಿ ಪಠ್ಯ ಪರಿಶೀಲನಾ ಸಮಿತಿ ರಚಿಸಿತು. ಇದರ ಬಗ್ಗೆ ಪರ-ವಿರೋಧ ಚರ್ಚೆಯಾಯಿತು. ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬೊಮ್ಮಾಯಿ ನೇತೃತ್ವದ ಸರ್ಕಾರ ಪರಿಷ್ಕರಣೆ ಮಾಡಿ ಜಾರಿಗೆ ತಂದಿದ್ದ ಪಠ್ಯಪುಸ್ತಕಗಳನ್ನು ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಮೂಲಕ (2023-2024 ಸಾಲಿನ ಪಠ್ಯಪುಸ್ತಕ) ಆದೇಶ ಹೊರಡಿಸಿದೆ.

ಸರ್ಕಾರ ಬದಲಾದಂತೆಲ್ಲ ಪಠ್ಯಕ್ರಮಗಳು ಬದಲಾಗುತ್ತಾ ಹೋದರೆ ಮಕ್ಕಳು ಮತ್ತು ಶಿಕ್ಷಕರ ಪರಿಸ್ಥಿತಿ ಏನು? ನಿಶ್ಚಿತವಾಗಿಯೂ ಪಠ್ಯಗಳ ಪರಿಷ್ಕರಣ ಗೊಂದಲ ಸೃಷ್ಟಿಸಿದೆ. ಗೊಂದಲಕ್ಕೆ ಕಾರಣ ಎಡ-ಬಲ ಪಂಥದವರ ದೃಷ್ಟಿಕೋನದಲ್ಲಿ ಪರಿಷ್ಕರಣ ನಡೆದಿರುವುದೇ ಆಗಿದೆ. ಪಠ್ಯಪುಸ್ತಕ ಪರಿಷ್ಕರಣೆ ಸುತ್ತಲಿನ ವಿವಾದಗಳು, ರಾಜಕೀಯ ಕೆಸರೆರಚಾಟಗಳು ಅನಪೇಕ್ಷಣೀಯವಾದದ್ದು. ಪರಿಷ್ಕರಣಗಳು ವಸ್ತುನಿಷ್ಠ ನೆಲೆಯಲ್ಲಿ ಆಗಿಲ್ಲ. ಪಠ್ಯ ಪುಸ್ತಕಗಳನ್ನು ಅಧಿಕಾರದಲ್ಲಿರುವವರು ತಮ್ಮತಮ್ಮ ಮೂಗಿನ ನೇರಕ್ಕೆ ಬದಲಿಸುವ/ ಪರಿಷ್ಕರಣಗೊಳಿಸುವ ಕೆಲಸ ಮಾಡಿದ್ದಾರೆ.

Advertisements

ಈ ಲೇಖನ ಓದಿದ್ದೀರಾ?: ಬಡವರಿಗೆ ನೀಡಿದರೆ ‘ಬಿಟ್ಟಿ’, ಕೋಟ್ಯಾಧೀಶರಿಗೆ ನೀಡಿದರೆ ‘ಪ್ರೋತ್ಸಾಹಕ’…!

ರಾಜಕೀಯ ಪಕ್ಷಗಳು ತಮ್ಮ ವಿಚಾರಧಾರೆಗಳ ಪ್ರಚಾರಕ್ಕಾಗಿ ಪಠ್ಯಪುಸ್ತಕ ಪರಿಷ್ಕರಣೆ ಕಾರ್ಯಕ್ಕೆ ಮುಂದಾದರೆ, ಅದು ಎಲ್ಲಿಗೆ ಹೋಗುತ್ತದೆ? ಈ ಹಿಂದೆ ವಿದ್ವಾಂಸರು, ಶಿಕ್ಷಣ ಕ್ಷೇತ್ರದ ಅನುಭವಿಗಳು ಮತ್ತು ಸಂಶೋಧಕರು ಮಕ್ಕಳು ಏನನ್ನು ಓದಬೇಕು ಎಂಬುದನ್ನು ನಿರ್ಧರಿಸುತ್ತಿದ್ದರು. ಈಗ ರಾಜಕಾರಣಿಗಳು ನಿರ್ಧರಿಸುತ್ತಿರುವುದು ಅಪಾಯಕಾರಿ ಬೇಳವಣಿಗೆ. ಒಟ್ಟಿನಲ್ಲಿ ಒಂದು ಗುಂಪು ಮಾಡಿದ್ದನ್ನು ಇನ್ನೊಂದು ಗುಂಪು ವಿರೋಧಿಸುತ್ತಿದೆ. ಪಠ್ಯ ಪುಸ್ತಕಗಳ ಬಗ್ಗೆ ಇದ್ದ ಪಾವಿತ್ರ್ಯ ನಾಶವಾಗಿದೆ.

ಇದಕ್ಕೆ ಪರಿಹಾರವೆಂದರೆ, ಪಠ್ಯ ಪುಸ್ತಕ ರಚನೆಗೆ ರಾಜಕೀಯ ಹಿತಾಸಕ್ತಿಯಿಲ್ಲದ ವಿಷಯ ತಜ್ಞರ ಸ್ಥಾಯಿ ಸಮಿತಿಯನ್ನು ರಚಿಸುವುದೇ ಆಗಿದೆ. ಆದರೆ, ನಿಷ್ಪಕ್ಷ ತಜ್ಞರನ್ನು ಹುಡುಕುವುದು ಅಷ್ಟು ಸುಲಭವಾಗಿ ಉಳಿದಿಲ್ಲ. ಒಟ್ಟಿನಲ್ಲಿ ಈಗ ಮಕ್ಕಳ ಪಠ್ಯಗಳು ರಾಜಕಾರಣದ ಬಣ್ಣ ಪಡೆದುಕೊಂಡಿದೆ. ಇದರಲ್ಲಿ ಆ ಪಕ್ಷ, ಈ ಪಕ್ಷ ಎನ್ನುವ ಬೇಧವೇನಿಲ್ಲ. ರಾಜಕೀಯ ಪಕ್ಷಗಳು ಶಿಕ್ಷಣ ಅಥವಾ ಪಠ್ರಕ್ರಮದ ಹೆಸರಿನಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳಬೇಕೆಂಬ ಗಂಡಾಂತರಕಾರಿ ಚಪಲದಿಂದ ದೂರವಿರಬೇಕು. ಇಲ್ಲದಿದ್ದರೆ, ಕರ್ನಾಟಕಕ್ಕೆ ‘ಅರಾಜಕತೆಯ ಆಡುಂಬೊಲ’ ಎನ್ನುವ ಕಳಂಕ ಮೆತ್ತಿಕೊಳ್ಳುವುದರಲ್ಲಿ ಯಾವ ಅನುಮಾನವೂ ಇಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ನಮ್ಮ ದೇಶ ವಿವಿಧ ಸಂಸ್ಕೃತಿಗಳನ್ನು ಹೊಂದಿರುವ ದೇಶ, ಇಲ್ಲಿ ಶಿಕ್ಷಣ ಆ ರಾಜ್ಯದ ಹಾಗೂ ಪ್ರದೇಶಗಳ ಸಂಸ್ಕೃತಿಯನ್ನು ಒಳಗೊಂಡಿರಬೇಕು. ಇಲ್ಲಿ ಕೇಂದ್ರೀಯ ಶಾಲೆಗಳಲ್ಲಿ ಒಂದು ಕ್ರಮ ರಾಜ್ಯಗಳಲ್ಲಿ ಒಂದು ಶಿಕ್ಷಣ ಕ್ರಮ. ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಗೊಂದಲ. ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿ ಮಾತೃ ಭಾಷೆಯಲ್ಲಿ ಕಲಿಸಬೇಕು ಖಾಸಗಿಯಾಗಲಿ ಸರ್ಕಾರಿ ಶಾಲೆಯಾಗಲಿ. ಈಗ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಅಂತರರಾಷ್ಟ್ರೀಯ ಶಾಲೆಗಳು ತಲೆ ಎತ್ತುತ್ತಿವೆ, ಇದು ಇನ್ನೂ ಅಪಾಯಕಾರಿ. ಒಟ್ಟಿನಲ್ಲಿ ಈ ಸರ್ಕಾರಗಳು ಜನರು ಮನಸ್ಸುಗಳನ್ನು ಹೊಡೆದಿವೆ. ಅಪಾಯ ತಪ್ಪಿದ್ದಲ್ಲ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X