ಯಡಿಯೂರಪ್ಪಗೆ ಸೆಡ್ಡು ಹೊಡೆಯುವುದಕ್ಕೆ ಸಂತೋಷ್ ಸಭೆ:‌ ಕಾಂಗ್ರೆಸ್‌ ಟೀಕೆ

Date:

Advertisements
  • ‘ಬಿ ಎಲ್‌ ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ’
  • ‘ಬಿಜೆಪಿಯ ಅಸಮದಾನಿತರು ಈ ಸಭೆಯಿಂದ ದೂರ ಉಳಿದಿದ್ದಾರೆ’

ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ‘ಮತದಾರರ ಚೇತನ ಮಹಾಭಿಯಾನ’ ಸಂಬಂಧಪಟ್ಟಂತೆ ಬಿಜೆಪಿ ಪ್ರಮುಖರ ಜತೆಗೆ ಗುರುವಾರ ಸಭೆ ನಡೆಸಿದ್ದು, ಬಿಜೆಪಿಯ ಪ್ರಮುಖ ನಾಯಕರೇ ಗೈರಾಗಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದಲ್ಲಿ ಲೇವಡಿ ಮಾಡಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌)ನಲ್ಲಿ ಟೀಕಿಸಿರುವ ಕಾಂಗ್ರೆಸ್‌, “ಇತ್ತೀಚಿಗೆ ಬಿಜೆಪಿಯ ಶಾಸಕರು ಯಡಿಯೂರಪ್ಪನವರ ಮನೆಯಲ್ಲಿ ಸಭೆ ಸೇರಿ ನೀವೇ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರು. ಬಿಜೆಪಿ ಶಾಸಕರೆಲ್ಲ ಯಡಿಯೂರಪ್ಪ ಅವರ ಹಿಂದೆ ಹೋಗಿದ್ದೇ ತಡ ಕುಪಿತರಾದ ಬಿ.ಎಲ್.ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ ನಡೆಸಿದ್ದಾರೆ!” ಎಂದು ವ್ಯಂಗ್ಯವಾಡಿದೆ.

“ಚುನಾವಣೆಯ ತಂತ್ರಗಾರಿಕೆ ಮಕಾಡೆ ಮಲಗಿ ಹೀನಾಯ ಸೋಲು ಅನುಭವಿಸಿದಾಗ ಇದೇ ಸಂತೋಷ್ ಗಂಟು ಮೂಟೆ ಕಟ್ಟಿಕೊಂಡು ನಾಪತ್ತೆಯಾಗಿದ್ದರು, ಈಗ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯಲು ಮತ್ತೆ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ. ಅದೇನೇ ಮಾಡಿದರೂ ಬಿಜೆಪಿಗೆ ಮತ್ತೆ ಜೀವ ಬರುವುದಿಲ್ಲ!” ಎಂದು ಕಾಂಗ್ರೆಸ್ ಪೋಸ್ಟ್ ಮಾಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?

“ಬಿಜೆಪಿ ಪಕ್ಷಕ್ಕೆ ಸಭೆ ಕರೆಯಲು ಒಬ್ಬ ಅಧ್ಯಕ್ಷರು ದಿಕ್ಕಿಲ್ಲ, ಬಿಜೆಪಿ ಶಾಸಕರ ಸಭೆ ನಡೆಸಲು ಒಬ್ಬ ಶಾಸಕಾಂಗ ಪಕ್ಷದ ನಾಯಕನಿಲ್ಲ. ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ, ನಾಲ್ಕು ಮತಗಳನ್ನು ಸೆಳೆಯಲು ಶಕ್ತಿ ಇಲ್ಲದ ಬಿ ಎಲ್ ಸಂತೋಷ್ ಸಭೆ ನಡೆಸುವ ದುರ್ಗತಿ ಬಂದಿದೆ ಎಂದರೆ ಬಿಜೆಪಿ ಅದೆಷ್ಟು ರಾಜಕೀಯ ದಿವಾಳಿಯಾಗಿರಬಹುದು! ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯುವುದಕ್ಕೆ ಮಾತ್ರ ಈ ಸಭೆ ಸೀಮಿತವಾಗಿದೆ” ಎಂದು ಕುಟುಕಿದೆ.

“ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಬೇಕಿತ್ತು, ನೂತನ ರಾಜ್ಯಾಧ್ಯಕ್ಷರ ನೇಮಕಕ್ಕಾದರೂ ಸಭೆ ನಡೆಸಬೇಕಿತ್ತು. ಆದರೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಯ ಹಪಹಪಿಯನ್ನು ಸಂತೈಸಲು ಸಭೆ ನಡೆಸಿದೆ! ಬಿಜೆಪಿಯ ಅಸಮಾದಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ ಬಿಜೆಪಿಯೊಳಗಿನ ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ. ಹಾಗೆಯೇ ಬಿ ಎಲ್‌ ಸಂತೋಷ್‌ ಅವರಿಗೆ ನಯಾಪೈಸೆ ಕಿಮ್ಮತ್ತಿಲ್ಲ ಎಂಬುದನ್ನು ಅನಾವರಣಗೊಳಿಸಿದೆ” ಎಂದು ಟೀಕಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X