ದೇಶ ಬದಲಾವಣೆ ಬಯಸುತ್ತಿದೆ; ಮೋದಿ ಗ್ಯಾರಂಟಿಗಳು 2004ರಂತೆಯೇ ಕಾಣುತ್ತಿವೆ: ಖರ್ಗೆ

Date:

Advertisements

ದೇಶವು ಬದಲಾವಣೆಯನ್ನು ಬಯಸುತ್ತಿದೆ. ಪ್ರಸ್ತುತ ಮೋದಿ ಸರ್ಕಾರ ಹೇಳುತ್ತಿರುವ ‘ಮೋ ಕಿ ಗ್ಯಾರಂಟಿ’ಯು 2004ರ ‘ಇಂಡಿಯಾ ಶೈನಿಂಗ್‌’ ಘೋಷಣೆಯಂತೆಯೇ ಇದೆ. ಫಲಿತಾಂಶವು 2004ರಂತೆಯೇ ಆಗಿರಲಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸಲು ಮಂಗಳವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಅವರು ಮಾತನಾಡಿದರು. “ಪಕ್ಷದ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾದ ಪ್ರತಿಯೊಂದು ವಿಷಯವನ್ನು ಪಕ್ಷದ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿ ಹಳ್ಳಿ, ಪಟ್ಟಣಗಳ ಪ್ರತಿ ಮನೆಗಳಿಗೆ ತಲುಪಿಸಬೇಕು” ಎಂದರು.

“ನಮ್ಮ ಪ್ರಣಾಳಿಕೆಯು ವಿವಿಧ ರಾಜ್ಯಗಳಲ್ಲಿ ವ್ಯಾಪಕ ಪ್ರಚಾರ ಪಡೆಯುತ್ತದೆ. ನಮ್ಮ ಭರವಸೆಗಳನ್ನು ದೇಶಾದ್ಯಂತದ ಪ್ರತಿ ಮನೆ ಹಾಗೂ ಜನರಿಗೆ ತಲುಪಿಸಬೇಕು. ಇದು ನಮ್ಮೆಲ್ಲರ ಜವಾಬ್ದಾರಿ” ಎಂದು ಹೇಳಿದರು.

Advertisements

“ಪ್ರಣಾಳಿಕೆಯಲ್ಲಿ ಏನೆಲ್ಲ ಭರವಸೆ ನೀಡಲಾಗುತ್ತದೆಯೇ, ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಆ ಎಲ್ಲ ಭರವಸೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಈ ಕಾರಣದಿಂದ 1926ರಿಂದಲೇ ಕಾಂಗ್ರೆಸ್ ಪ್ರಣಾಳಿಕೆಯನ್ನು ‘ವಿಶ್ವಾಸ ಮತ್ತು ಬದ್ಧತೆಯ ದಾಖಲೆ’ ಎಂದು ಪರಿಗಣಿಸಲಾಗಿದೆ” ಎಂದು ಅವರು ಹೇಳಿದರು.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಶ್ಲಾಘಿಸಿದ ಖರ್ಗೆ, ಈ ಮೂಲಕ ಜನರ ನಿಜವಾದ ಸಮಸ್ಯೆಯತ್ತ ದೇಶದ ಗಮನವನ್ನು ಸೆಳೆಯಲು ಕಾಂಗ್ರೆಸ್‌ಗೆ ಸಾಧ್ಯವಾಗಿದೆ ಎಂದು ಹೇಳಿದರು.

“ಭಾರತ್ ಜೋಡೋ ಮತ್ತು ನ್ಯಾಯ್‌ ಯಾತ್ರೆಗಳು ಕೇವಲ ರಾಜಕೀಯ ಯಾತ್ರೆಗಳಾಗಿರಲಿಲ್ಲ. ಆದರೆ, ನಮ್ಮ ರಾಜಕೀಯ ಇತಿಹಾಸದಲ್ಲಿ ಅತಿದೊಡ್ಡ ಜನಸಂಪರ್ಕ ಆಂದೋಲನವಾಗಿ ಗುರುತಿಸಲ್ಪಡುತ್ತವೆ. ಈ ಎರಡೂ ಯಾತ್ರೆಗಳು ಜನರ ಸಮಸ್ಯೆಯನ್ನು ಅರಿಯುವಲ್ಲಿ ಯಶಸ್ವಿಯಾಗಿವೆ” ಎಂದರು ಹೇಳಿದರು.

ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಿ ಚಿದಂಬರಂ, ಅಂಬಿಕಾ ಸೋನಿ, ಪ್ರಿಯಾಂಕಾ ಗಾಂಧಿ ವಾದ್ರಾ, ಪಿ ಚಿದಂಬರಂ, ದಿಗ್ವಿಜಯ ಸಿಂಗ್, ಅಜಯ್ ಮಾಕನ್ ಮತ್ತು ಕುಮಾರಿ ಸೆಲ್ಜಾ ಸೇರಿದಂತೆ ಇತರ ಹಿರಿಯ ನಾಯಕರು ಇದ್ದರು.

ಪಕ್ಷವು ಐದು ‘ನ್ಯಾಯ್‌ ಗ್ಯಾರಂಟಿ’ – ‘ಭಾಗಿದರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ನಾರಿ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು ‘ಯುವ’ ನ್ಯಾಯ’ ಗ್ಯಾರಂಟಿಗಳ ಮೂಲಕ 25 ಭರವಸೆಗಳನ್ನು ಈಗಾಗಲೇ ಘೋಷಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X