ಕರಿಯ, ಕುಳ್ಳ ಎಂದು ಮಾತಾಡಿಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ: ಹೆಚ್‌ ಡಿ ಕುಮಾರಸ್ವಾಮಿ

Date:

Advertisements

ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ತಮ್ಮನ್ನು ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಎಂದು ಕರೆದಿದ್ದ ಸಚಿವ ಜಮೀರ್‌ ಅಹಮದ್‌ ಅವರಿಗೆ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ತಿರುಗೇಟು ನೀಡದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಶುಕ್ರವಾರ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಚಾಮುಂಡಿ ತಾಯಿ ಮುಂದೆ ನಿಂತು ಹೇಳುತ್ತಿದ್ದೇನೆ. ನಾನು ಆತನಿಗೆ ಕುಳ್ಳ ಅಂದಿಲ್ಲ. ಒಂದು ದಿನ ಬಸವರಾಜ ಹೊರಟ್ಟಿ ಅವರು ನನ್ನನು ಕುಮಾರ ಎಂದಾಗ ಅವರನ್ನು ಹೊಡೆಯಲು ಹೋಗಿದ್ದ ಗಿರಾಕಿ ಇವರು” ಎಂದರು.

“ಕರಿಯ, ಕುಳ್ಳ ಎಂದು ಮಾತಾಡಿಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ. ಅವರ ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಮೀರ್ ಮಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ. ಇದು ನಾಗರಿಕ ಸರ್ಕಾರನಾ” ಎಂದು ಪ್ರಶ್ನಿಸಿದರು.

Advertisements

“ನಾನು ಯಾವತ್ತೂ ಜಮೀರ್ ಅವರನ್ನು ಕುಳ್ಳ ಎಂದು ಕರೆದಿಲ್ಲ. ನಮ್ಮ ಸ್ನೇಹ ಇದ್ದದ್ದು ರಾಜಕೀಯವಾಗಿ ಅಷ್ಟೆ. ಈಗ ದುಡ್ಡಿನ ಮದದಿಂದ ಈ ರೀತಿ ಮಾತಾಡುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು

ಸರ್ಕಾರ ಬೀಳಿಸಲು ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ₹ 50 ಕೋಟಿ ಆಫರ್ ಮಾಡಿದ್ದಾರೆ ಎಂಬ ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಹೇಳಿಕೆ ಬಫೂನ್ ರೀತಿ ಇದೆ. 50 ಜನರಿಗೆ ₹ 50 ಕೋಟಿ ಆಫರ್ ಮಾಡಿದ್ದಾರೆಂದು ನಿಖರವಾಗಿ ಹೇಳುತ್ತಿದ್ದಾರೆ. ಈ ಸರ್ಕಾರ ಪ್ರತಿಯೊಂದಕ್ಕು ಎಸ್‌ಐಟಿ ತನಿಖೆ ಮಾಡಿಸುತ್ತಿದೆ. ಇದನ್ನೂ ಎಸ್‌ಐಟಿಗೆ ಕೊಟ್ಟು ತನಿಖೆ ಮಾಡಿಸಲಿ” ಎಂದು ಆಗ್ರಹಿಸಿದರು.

“ಚನ್ನಪಟ್ಟಣದಲ್ಲಿ ಜನತೆಯ ಆಶೀರ್ವಾದ ನಮಗೆ ಆಗಿದೆ. ಉತ್ತಮವಾದ ರೀತಿಯಲ್ಲಿ ಗೆಲ್ಲುತ್ತೇವೆ. ಏನೇನು ರಾಜಕೀಯ ನಡೆದಿದೆ ಎಂಬುದನ್ನು ಯೋಗೇಶ್ವರ್ ವಿಮರ್ಶೆ ಮಾಡಿದ್ದಾರೆ. ಜಮೀರ್ ಹೇಳಿಕೆಯಿಂದ ಏನೂ ವ್ಯತ್ಯಾಸ ಆಗಿಲ್ಲ. ನಾವು ಚನ್ನಪಟ್ಟಣದಲ್ಲಿ ಗೆಲ್ಲುತ್ತೇವೆ” ಎಂದರು.

“ಮುಖ್ಯಮಂತ್ರಿಗೆ ದೇವೇಗೌಡರು ಗರ್ವಭಂಗ ಮಾಡುತ್ತೇನೆ, ಸೊಕ್ಕು ಮುರಿಯುತ್ತೇನೆ ಎನ್ನುವುದು ಮಾನನಷ್ಟ ಹೇಳಿಕೆನಾ? ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X