ರಾಜ್ಯದಲ್ಲಿ ಆಡಳಿತ ಸಂಪೂರ್ಣ ಹಳಿ ತಪ್ಪಿ, ಅರಾಜಕತೆ ತಾಂಡವವಾಡುತ್ತಿದೆ: ಬಿಜೆಪಿ ವಾಗ್ದಾಳಿ

Date:

Advertisements

“ರಾಜ್ಯದಲ್ಲಿ ಹಿಟ್ಲರ್‌ ಸರ್ಕಾರದ ಆಡಳಿತ ಸಂಪೂರ್ಣ ಹಳಿ ತಪ್ಪಿದ್ದು, ಅರಾಜಕತೆ ತಾಂಡವವಾಡುತ್ತಿದೆ” ಎಂದು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, “ಪೂರ್ವನಿಯೋಜನೆಯಿಂದ ದುರುದ್ದೇಶಪೂರ್ವಕವಾಗಿ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಕಾಂಗ್ರೆಸ್‌ ತನ್ನ ಗೂಂಡಾಗಳನ್ನು ಬಿಡುವುದಷ್ಟೇ ಅಲ್ಲದೆ ರಕ್ಷಣೆಯನ್ನೂ ಕೊಡುತ್ತಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನ ಕುತಂತ್ರವನ್ನು ಇದೇ ರೀತಿ ಮುಂದುವರೆಸಿದರೆ, ನಾವು ಎಲ್ಲ ರೀತಿಯಲ್ಲೂ ಹೋರಾಡಲು ಸಿದ್ಧರಿದ್ದೇವೆ” ಎಂದು ಎಚ್ಚರಿಕೆ ನೀಡಿದೆ.

BJP 02

“ಗ್ಯಾರಂಟಿಯಲ್ಲೂ ಮೋಸ ಮಾಡಿ, ರಾಜ್ಯದ ಬೊಕ್ಕಸವನ್ನೂ ಖಾಲಿ ಮಾಡಿ, ಹಿಂದೆಂದೂ ಮಾಡಿರದಷ್ಟು ಸಾಲ ಮಾಡಿದ ಸಿದ್ದರಾಮಯ್ಯ ಅವರು ತಮ್ಮ ಅಭಿವೃದ್ಧಿ ಶೂನ್ಯತೆಯನ್ನು ಮರೆಮಾಚಲು ಅರಾಜಕತೆ ಸೃಷ್ಟಿಗೆ ದಾರಿ ಮಾಡಿಕೊಟ್ಟಿದ್ದಾರೆ. ಸಂಬಂಧವಿಲ್ಲದ ಮಂತ್ರಿಗಳೆಲ್ಲ ಪೊಲೀಸ್‌ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿ ಅವರ ಆತ್ಮಸ್ಥೈರ್ಯವನ್ನು ಕುಂದಿಸಿದ್ದಾರೆ. ಎಟಿಎಂ ಸರ್ಕಾರದಿಂದಾಗಿ ರಾಜ್ಯಾದ್ಯಂತ ಹಿಂಸೆ ತಾಂಡವವಾಡುತ್ತಿದೆ” ಎಂದು ಬಿಜೆಪಿ ಆರೋಪಿಸಿದೆ.

Advertisements
BJP 8

“ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಯ ಅಪ್ರಬು‌ದ್ಧ ಜಾರಿಯಿಂದಾಗಿ ನೂರೆಂಟು ಸಮಸ್ಯೆಗಳು ಎದುರಾಗಿವೆ. ಎಟಿಎಂ ಸರ್ಕಾರದಿಂದ ಸೂಕ್ತ ಅನುದಾನ ಸಿಗದೆ ರಾಜ್ಯದ ನಾಲ್ಕು ನಿಗಮಗಳು ಆರ್ಥಿಕ ಚೈತನ್ಯ ಕಳೆದುಕೊಂಡು ದಿವಾಳಿಯತ್ತ ಮುಖಮಾಡಿವೆ” ಎಂದು ದೂರಿದೆ.

“ಇದರ ನಡುವೆ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಚಾಲಕರು, ನಿರ್ವಾಹಕರು ಒಪ್ಪೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಪರ್ಯಾಯ ಮಾರ್ಗ ಕಂಡುಕೊಡದೆ. ಸಿದ್ದರಾಮಯ್ಯ ಅವರ ಸರ್ಕಾರ ಇವರನ್ನೆಲ್ಲ ಬೀದಿಗೆ ತಳ್ಳಿ ಈಗ ಸಂಭ್ರಮಿಸುತ್ತಿದೆ” ಎಂದು ಬಿಜೆಪಿ ಕಿಡಿಕಾರಿದೆ.

BJP 01

ಈ ಸುದ್ದಿ ಓದಿದ್ದೀರಾ? ನಮ್ಮ ಪ್ರಧಾನಿಗಳನ್ನು ಕೇಳುವ ಧೈರ್ಯ ನಮಗಿದೆ; 15 ಲಕ್ಷ ರೂ.ಗೆ ದಾಖಲೆ ಕೊಡಿ: ಯತ್ನಾಳ್‌ ಸವಾಲು

“ಕಳಪೆ ಆಹಾರ ಕೊಡುವುದೂ ಒಂದೇ, ಕೈಯಾರೆ ವಿಷ ಉಣಿಸುವುದೂ ಒಂದೇ. ಅದರಲ್ಲೂ ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಟಿಕತೆ ಹೆಸರಲ್ಲಿ ವಿಷ ಪೂರಣವು ನಾಗರಿಕ ಸಮಾಜವೇ ತಲೆತಗ್ಗಿಸುವ ಕೆಲಸ. ಆದರೆ, ಸಾಮಾಜಿಕ ಪ್ರಜ್ಞೆಯನ್ನೇ ಮರೆತ ಸಿದ್ದರಾಮಯ್ಯ ನೇತೃತ್ವದ ಅಮಾನುಷ ಸರ್ಕಾರಕ್ಕೆ ವಾರದ ಕಲೆಕ್ಷನ್ ಸಂದಾಯವಾದರೆ ಆಯಿತು” ಎಂದು ಟೀಕಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಅವರು ಇನ್ನೂ ಕನಸಿನ ಲೋಕದಿಂದ ಹೊರ ಬಂದಿಲ್ಲ,. ಒಟ್ಟು ನಿರಾಶೆ ಮತ್ತು ಹತಾಶರಾಗಿ
    ಹೇಳುವುದರ ಅರಿವಿಲ್ಲದೆ ಮಾತನಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X