ಜನಕಲ್ಯಾಣಕ್ಕೆ ಅಧಿಕಾರ ಬಳಸಿ ಕೆಲಸ ಮಾಡುತ್ತಿದ್ದೇವೆ : ಸಿಎಂ ಸಿದ್ದರಾಮಯ್ಯ

Date:

Advertisements

ಅಧಿಕಾರಕ್ಕಾಗಿ ಅಧಿಕಾರ ಮಾಡುವುದಲ್ಲ. ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆಯಾಗಬೇಕು ಎನ್ನುವ ಕಾಳಜಿಯ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇವೆಲ್ಲವೂ ವಾಸ್ತವ ಕಾರ್ಯಕ್ರಮಗಳಾಗಿರುವುದರಿಂದ ರಾಜ್ಯಪಾಲರು ಬಜೆಟ್‌ ಭಾಷಣದಲ್ಲಿ ಶ್ಲಾಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸೋಮವಾರ ಮುಖ್ಯಮಂತ್ರಿಗಳು ಉತ್ತರಿಸಿ, “ರಾಜ್ಯಪಾಲರ ಭಾಷಣದಲ್ಲಿ ಸಾಂಪ್ರದಾಯಿಕವಾಗಿ ಸರ್ಕಾರದ ಸಾಧನೆಗಳನ್ನು ಸದನದ ಮುಂದಿಡುವ ಭಾಷಣವಿರುತ್ತದೆ. ಕೆಲವರು ಟೀಕಿಸಿದ್ದಾರೆ, ಹಲವರು ವಾಸ್ತವಿಕವಾಗಿ ಮಾತನಾಡಿದ್ದಾರೆ, ಕೆಲವರು ಸಮರ್ಥಿಸಿದ್ದಾರೆ, ಕೇಲವರು ವಿರೋಧಿಸಲೆಂದೇ ವಿರೋಧಿಸಿ ಮಾತನಾಡಿದ್ದಾರೆ. ಅವರೆಲ್ಲರ ಸಲಹೆ ಸೂಚನೆಗಳನ್ನು ಸರ್ಕಾರ ಸ್ವಾಗತಿಸಿ, ಸರ್ಕಾರದ ನಿಲುವನ್ನು ಸದನಕ್ಕೆ ತಿಳಿಸಿ ವಂದನಾ ನಿರ್ಣಯವನ್ನು ಅಂಗೀಕಾರ ಮಾಡಿ” ಎಂದು ವಿನಂತಿಸಿದರು.

“ಅಶೋಕ್ ಹಾಗು ಸುನೀಲ್ ಕುಮಾರ್ ಅವರು ಮಾತನಾಡುವಾಗ ಕರಿಮಣಿ ಮಾಲೀಕ ಯಾರು ಎಂದು ಪ್ರಶ್ನಿಸಿದ್ದಾರೆ. ನನ್ನ ಹಾಗು ಬಹುತೇಕ ಸದಸ್ಯರ ಪ್ರಕಾರ ಅರ್ಥಹೀನ ಮಾತುಗಳು. ನನಗೂ ಹಿರಿಯ ಸದಸ್ಯರಿಂದ ಇಂಥ ಮಾತುಗಳನ್ನು ನಿರೀಕ್ಷೆ ಇರಲಿಲ್ಲ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕರಿಮಣಿ ಮಾಲೀಕ ಯಾರು ಎನ್ನುವುದು ಕೀಳು ಅಭಿರುಚಿಯ ಪ್ರಯೋಗ. ನಿಮ್ಮ ಪಕ್ಷದಲ್ಲಿ ಭಿನಾಭಿಪ್ರಯಗಳಿಲ್ಲವೇ? ನಿಮ್ಮ ಭಿನ್ನಾಭಿಪ್ರಾಯಗಳು ಯಾವ ಮಟ್ಟಕ್ಕೆ ಹೋಗಿವೆ ಎಂಬ ಚರ್ಚೆ ಬೇಡ. ಅಭಿರುಚಿ ಹೀನ ಎಂದಷ್ಟೇ ಹೇಳಿದ್ದೇನೆ. ನಿಮಗೆ ಸರಿಯಿದ್ದರೆ ಓಕೆ. ಜನ ಅಂತಿಮವಾಗಿ ತೀರ್ಮಾನ ಮಾಡುತ್ತಾರೆ” ಎಂದರು.

Advertisements

“ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸದನಕ್ಕೆ ದೊಡ್ಡ ಸುಳ್ಳು ಹೇಳಿದ್ದಾರೆ. ಆರ್.ಎಸ್.ಎಸ್ ಬೈಠಕ್ ನಲ್ಲಿದ್ದಾರೋ, ಸದನದಲ್ಲಿದ್ದಾರೋ ಗೊತ್ತಿಲ್ಲ. ಕೃಷ್ಣ ಭಾಗ್ಯ ಜಲ ನಿಗಮಕ್ಕೆ ಕೇಂದ್ರ ಸರ್ಕಾರ 2 ಸಾವಿರ ಕೋಟಿ ಕೊಟ್ಟಿದೆ. ಕರ್ನಾಟಕ ನೀರಾವರಿ ನಿಗಮಕ್ಕೆ 3300 ಕೋಟಿ, ವಿಶ್ವೇಶ್ವರ ಜಲನಿಗಮ ಸೇರಿ ಕರ್ನಾಟಕ ನೀರಾವರಿಗೆ ಒಟ್ಟು 10 ಸಾವಿರ ಕೋಟಿ ರೂಪಾಯಿ ರಾಜ್ಯದ ನೀರಾವರಿ ನಿಗಮಕ್ಕೆ ಕೊಟ್ಟಿದೆ ಎಂದು ಹೇಳಿದ್ದಾರೆ. ಮಾಹಿತಿ ಕೊರತೆಯೋ ಉದ್ದೇಶಪೂರ್ವಕ, ಟೀಕೆಗಾಗಿ ಹೇಳಿದ್ದಾರೋ ಗೊತ್ತಿಲ್ಲ. ವಾಸ್ತವ ಏನೆಂದರೆ 24-1-2025 ರಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸ್ಕೀಂ ಆಫ್ ಸ್ಪೆಶಲ್ ಅಸಿಸ್ಟೆನ್ಸ್ ಕೊಟ್ಟಿದ್ದು, 50 ವರ್ಷಗಳ ಕಾಲ ಬಡ್ಡಿ ರಹಿತವಾಗಿ ವಿಶೇಷ ನೆರವು ನೀಡಿದೆ. ಮುಳವಾಡ ಏತ ನೀರಾವರಿಗೆ 200 ಕೋಟಿ, ಮಹಾಲಕ್ಷ್ಮಿ ಮಲಪ್ರಭಾ ಯೋಜನೆಗೆ 200, ಭ್ರದಾ ಮೇಲ್ದಂಡೆ, 300 ಒಟ್ಟು 1030 ಕೋಟಿ ಕೊಟ್ಟಿದ್ದಾರೆ. ಮಾಹಿತಿ ಕೊರತೆಯಿದ್ದರೆ ಸರಿಯಾಗಿ ಪಡೆದು ಮಾತನಾಡಿ. ಇದು ಸಂಪೂರ್ಣ ಸುಳ್ಳು ಮಾಹಿತಿ” ಎಂದು ಮುಖ್ಯಮಂತ್ರಿಗಳು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X