ಜಾತಿರಹಿತ ಸಮಾಜದ ಕಲ್ಪನೆ ಇಂದಿಗೂ ಸಾಕಾರವಾಗಿಲ್ಲ: ಈಶ್ವರ ಖಂಡ್ರೆ

Date:

Advertisements
  • ಸಿಎಂ ಸಿದ್ದರಾಮಯ್ಯ ಅವರು ಬಸವತತ್ವದ ಅಪ್ಪಟ ಅನುಯಾಯಿ: ಈಶ್ವರ ಖಂಡ್ರೆ
  • ದುಡಿಮೆಗೆ ಬೆಲೆ, ಜಾತ್ಯತೀತ ಸಮ ಸಮಾಜದ ಕಲ್ಪನೆ ನೀಡಿದವರು ಬಸವಾದಿ ಪ್ರಮಥರು

ಜಾತಿರಹಿತ ಸಮಾಜದ ಕಲ್ಪನೆಯನ್ನು ವಿಶ್ವಗುರು ಬಸವಣ್ಣನವರು ಹೊಂದಿದ್ದರು. ಆದರೆ ಇಂದಿಗೂ ಈ ಆಶಯ ಸಾಕಾರವಾಗಿಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.

ಮೈಸೂರಿನ ಕಲಾ ಮಂದಿರದಲ್ಲಿ ಶನಿವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಬಸವಾದಿ ಪ್ರಮಥರು ಈ ಜಗತ್ತಿಗೆ ನೀಡಿರುವ ಕೊಡುಗೆ ಅನುಪಮವಾಗಿದೆ. ಕಾರ್ಲ್ ಮಾರ್ಕ್ಸ್‌ನ ದಾಸ್ ಕ್ಯಾಪಿಟಲ್ ಬರುವ ಮೊದಲೆ ದುಡಿಮೆಗೆ ಬೆಲೆ ನೀಡಿ, ಜಾತ್ಯತೀತ ಸಮ ಸಮಾಜದ ಕಲ್ಪನೆಯನ್ನು ನೀಡಿದವರು ಬಸವಾದಿ ಪ್ರಮಥರು” ಎಂದು ತಿಳಿಸಿದರು.

“ಕಾಯಕವೇ ಕೈಲಾಸ, ಇವ ನಮ್ಮವ ಎಂದು ಸಾರಿದ ಬಸವಣ್ಣನವರು ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಕಟ್ಟಿಕೊಟ್ಟ ಮೊದಲಿಗರು. ಅನುಭವ ಮಂಟಪ ಇದಕ್ಕೆ ಇಂದಿಗೂ ಸಾಕ್ಷಿಯಾಗಿದೆ. ಈ ಸಮಾಜಕ್ಕೆ ವೀರಶೈವ ಲಿಂಗಾಯತ ಮಠ ಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದ್ದು, ಎಲ್ಲ ಜಾತಿ, ಜನಾಂಗ, ಧರ್ಮದವರಿಗೆ ಯಾವುದೇ ಭೇದವಿಲ್ಲದೆ, ಅನ್ನ, ಅಕ್ಷರ ಮತ್ತು ಜ್ಞಾನ ದಾಸೋಹ ಮಾಡುತ್ತಿರುವ ನಮ್ಮ ಮಠಗಳು ಜಗತ್ತಿಗೆ ಆದರ್ಶಪ್ರಾಯವಾಗಿವೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ನವೆಂಬರ್‌ನಲ್ಲಿ ರಾಜ್ಯದ ಜಾತಿಗಣತಿ ವರದಿ ನನ್ನ ಕೈ ಸೇರಲಿದೆ: ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಬಸವತತ್ವದ ಅಪ್ಪಟ ಅನುಯಾಯಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಸವ, ಬುದ್ಧರ ವಿಚಾರಧಾರೆಗಳಿಂದ ಪ್ರಭಾವಿತರಾಗಿದ್ದಾರೆ. ಸಿದ್ದರಾಮಯ್ಯ ಬಸವತತ್ವದ ಅಪ್ಪಟ ಅನುಯಾಯಿ. ಸರ್ವರನ್ನೂ ಜತೆಯಾಗಿ ಕೊಂಡೊಯ್ಯುತ್ತಿದ್ದಾರೆ. ಬಡ ಜನರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮ ರೂಪಿಸಿದ್ದಾರೆ. ಅನ್ನಭಾಗ್ಯ, ಕ್ಷೀರಭಾಗ್ಯ ನೀಡಿ ಯಶಸ್ವಿ 5 ವರ್ಷ ಅಧಿಕಾರ ನಡೆಸಿದ ಸಿದ್ದರಾಮಯ್ಯನವರು ಈಗ ಮತ್ತೆ ಮುಖ್ಯಮಂತ್ರಿಗಳಾಗಿ ಬಡವರ ಕಲ್ಯಾಣಕ್ಕಾಗಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದಾರೆ” ಎಂದು ಈಶ್ವರ ಖಂಡ್ರೆ ಮೆಚ್ಚುಗೆ ವ್ಯಕ್ತಪಡಿಸಿದರು.

“ಮಾತೆಯರು ತಮ್ಮ ಮಕ್ಕಳಿಗೆ ವಚನ ಸಾಹಿತ್ಯ ಬೋಧಿಸಿದರೆ, ಅವರು ಸಂಸ್ಕಾರವಂತರಾಗಿ ನಮ್ಮ ಸಂಸ್ಕೃತಿ ಉಳಿಯುತ್ತದೆ. ಇಂದು ಯುವಜನತೆ ಮಾದಕ ವಸ್ತುಗಳಿಗೆ ಮತ್ತು ಪಾಶ್ಚಾತ್ಯ ಸಂಸ್ಕೃತಿಯ ದಾಸರಾಗುತ್ತಿದ್ದು, ಮಕ್ಕಳಲ್ಲಿ ಸದ್ಗುಣ ಬೆಳೆಯಲು ಅವರಿಗೆ ಬಾಲ್ಯದಿಂದಲೇ ವಚನ ಸಾಹಿತ್ಯ ಕಲಿಸಬೇಕು” ಎಂದು ಸಲಹೆ ನೀಡಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಶ್ರೀವತ್ಸ, ಗಣೇಶ್ ಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X