ʼಈ ದಿನʼ ಸಮೀಕ್ಷೆ | ಬೆಲೆ ಏರಿಕೆಯ ’ಉರಿತಾಪ’ಕ್ಕೆ ಬಿಜೆಪಿಯೇ ಕಾರಣ ಅಂತಾರೆ ಉ.ಕರ್ನಾಟಕದ ಜನ

Date:

ರಾಜ್ಯದಲ್ಲಿ ಮೇ 7 ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯು ಉರಿಬಿಸಿಲಿನಲ್ಲಿ ರಂಗೇರಿದೆ. ರಾಷ್ಟ್ರ ರಾಜಕಾರಣದ ಘಟಾನುಘಟಿ ನಾಯಕರು ಉತ್ತರ ಕರ್ನಾಟಕದ ಹದಿನಾಲ್ಕು ಕ್ಷೇತ್ರಗಳಲ್ಲಿ ಭರ್ಜರಿ ಮತಬೇಟೆಗೆ ಕಸರತ್ತು ನಡೆಸುತ್ತಿದ್ದಾರೆ.

- Advertisement -

ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿವೆ. ಈ ಕ್ಷೇತ್ರಗಳ ಮತದಾರರ ಒಲವು ನಿಲುವುಗಳು ಕೂಡ ಗಮನ ಸೆಳೆಯುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮತದಾರರು ಯಾವ ಅಂಶಗಳ ಮೇಲೆ ಮತ ಹಾಕುತ್ತಾರೆಂಬ ಕುತೂಹಲವಂತೂ ಇದ್ದೇ ಇದೆ. ಆದರೆ ಈ ಸಲದ ಚುನಾವಣೆಯಲ್ಲಿ ’ಬೆಲೆ ಏರಿಕೆ’ಯನ್ನು ಆಧರಿಸಿ ಮತ ಚಲಾಯಿಸುವ ಸೂಚನೆಗಳು ಸದರಿ ಹದಿನಾಲ್ಕು ಕ್ಷೇತ್ರಗಳಲ್ಲೂ ಕಾಣುತ್ತಿರುವುದರಿಂದ ಬಿಜೆಪಿ ಕೊಚ್ಚಿ ಹೋಗುವ ಸಾಧ್ಯತೆಗಳು ಸ್ಪಷ್ಟವಾಗಿ ಕಾಣುತ್ತಿವೆ.

‘ಈದಿನ.ಕಾಂ’ ನಡೆಸಿದ ಸಮೀಕ್ಷೆಯ ವೇಳೆ, “ಕಳೆದ ಹತ್ತು ವರ್ಷಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ನೀವು ಭಾವಿಸುತ್ತೀರಾ?” ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವವರಲ್ಲಿ ಶೇ. 84.85ರಷ್ಟು ಜನರು ಬೆಲೆ ಏರಿಕೆಯಾಗಿದೆ ಎಂದಿದ್ದಾರೆ. ಶೇ. 9ರಷ್ಟು ಜನರು ಇಲ್ಲ ಅಂದರೆ, ಶೇ. 5.96ರಷ್ಟು ಜನರು ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದಾರೆ.

2 12

“ಬೆಲೆ ಏರಿಕೆಗೆ ಯಾರು ಕಾರಣವೆಂದು ಭಾವಿಸುತ್ತೀರಿ?” ಎಂಬ ಮಹತ್ವದ ಪ್ರಶ್ನೆಯನ್ನೂ ಕೇಳಲಾಗಿತ್ತು. ಶೇ. 44.50ರಷ್ಟು ಜನರು ಬಿಜೆಪಿ ಕಾರಣವೆಂದೂ, ಶೇ. 22.91ರಷ್ಟು ಜನರು ಕಾಂಗ್ರೆಸ್‌ ಪಕ್ಷ ಕಾರಣವೆಂದೂ, ಕಾಂಗ್ರೆಸ್‌- ಬಿಜೆಪಿ ಎರಡೂ ಪಕ್ಷಗಳು ಕಾರಣವೆಂದು ಶೇ. 19.56 ಜನ ಪ್ರತಿಕ್ರಿಯಿಸಿದ್ದಾರೆ. ಶೇ 10.13ರಷ್ಟು ಜನರು ’ಗೊತ್ತಿಲ್ಲ, ನಾನು ಹೇಳಲ್ಲ’, ಎಂದರೆ ಶೇ. 1.98 ಜನರು ಯಾರೂ ಕಾರಣರಲ್ಲ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ. ಶೇ. 0.9ರಷ್ಟು ಜನರು ಮಾತ್ರ ಜೆಡಿಎಸ್‌ ಕಾರಣವೆಂದು ಹೇಳಿದ್ದಾರೆ.

1 15

ಬಿಜೆಪಿ ಮಾತ್ರ ಬೆಲೆ ಏರಿಕೆಗೆ ಕಾರಣ ಮತ್ತು ಬಿಜೆಪಿ- ಕಾಂಗ್ರೆಸ್ ಎರಡೂ ಕಾರಣ ಎಂದು ಹೇಳುವ ಮತದಾರರ ಪ್ರಮಾಣ ಒಟ್ಟು 64.06ರಷ್ಟಿದೆ. ಅಂದರೆ ಬಿಜೆಪಿ ವಿರುದ್ಧ ದೊಡ್ಡ ಮಟ್ಟದ ಆಕ್ರೋಶ ಇದೆ ಎಂಬುದು ಇಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ.

ರಾಷ್ಟ್ರ ಮಟ್ಟದಲ್ಲಿ ನಡೆದಿರುವ ಸಮೀಕ್ಷೆಗಳು ಕೂಡ ಬೆಲೆ ಏರಿಕೆಯನ್ನು ಎತ್ತಿ ಹಿಡಿದಿವೆ. ಸರ್ವೆಗಳಿಗೆ ಹೆಸರಾದ ‘ಸಿಎಸ್‌ಡಿಎಸ್‌ ಲೋಕನೀತಿ’ ನಡೆಸಿದ್ದ ಸಮೀಕ್ಷೆಯಲ್ಲಿ, “ಕಳೆದ ಐದು ವರ್ಷಗಳಲ್ಲಿ ಬೆಲೆ ಏರಿಕೆ ಆಗಿದೆಯೇ?” ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಶೇ.71ರಷ್ಟು ಮಂದಿ ಹೌದು ಎಂದರೆ, ಶೇ. 13ರಷ್ಟು ಜನರು ಇಲ್ಲ ಎಂದಿದ್ದರು. ಶೇ. 13ರಷ್ಟು ಜನ ಯಥಾಸ್ಥಿತಿ ಇರುವುದಾಗಿ ಹೇಳಿದ್ದರು. ಬೆಲೆ ಏರಿಕೆ ಆಗಿದೆ ಎಂದವರಲ್ಲಿ ಶೇ. 76ರಷ್ಟು ಬಡವರು, ಶೇ.70ರಷ್ಟು ಅತಿ ಬಡವರು, ಶೇ.66 ಮಧ್ಯಮ ವರ್ಗ, ಶೇ. 68ರಷ್ಟು ಮೇಲ್ವರ್ಗದ ಜನರು ಇದ್ದಾರೆ. ಶೇ. 72ರಷ್ಟು ಗ್ರಾಮೀಣರು, ಶೇ. 69ರಷ್ಟು ಪಟ್ಟಣವಾಸಿಗಳು, ಶೇ. 33ರಷ್ಟು ನಗರ ವಾಸಿಗಳು ಬೆಲೆ ಏರಿಕೆಯಾಗಿದೆ ಎಂದಿರುವುದು ಗಮನಾರ್ಹ.

ವಿಶ್ವಾಸಾರ್ಹ ಸಮೀಕ್ಷೆಗಳು ಹೇಳುತ್ತಿರುವ ಸತ್ಯಗಳು ’ಬಿಜೆಪಿ’ಗೆ ಅಹಿತಕರವಾಗಿವೆ. ಬೆಲೆ ಏರಿಕೆಯ ನಡುವೆ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಚುನಾವಣಾ ಅಸ್ತ್ರವಾಗಿ ಬಳಸುತ್ತಿರುವುದರಿಂದ ಬಯಲು ಸೀಮೆ ಉತ್ತರ ಕರ್ನಾಟಕದಲ್ಲಿ ಭಾರೀ ಪರಿಣಾಮ ಬೀರುವ ಸೂಚನೆ ಕಾಣುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಮರ್ ಖಾಲಿದ್ ಕುರಿತ ‘ಕೈದಿ‌ ನಂ. 626710 ಈಸ್ ಪ್ರೆಸೆಂಟ್’ ಸಾಕ್ಷ್ಯಚಿತ್ರ ಪ್ರದರ್ಶನ ರದ್ದಾಗಿದ್ದು ಯಾಕೆ?

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (NLSIU) ಜವಾಹರಲಾಲ್...

ಕನಕಪುರ ವಿದ್ಯಾರ್ಥಿ ನಿಲಯಕ್ಕೆ ಸಿಎಂ ದಿಢೀರ್ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚೆ

ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ...

‘ದೇಶದಲ್ಲಿ ಎಲ್ಲವೂ ಸರಿಯಿದೆ ಎನ್ನುತ್ತಾರೆ ಪ್ರಧಾನಿ, ಆದರೆ ಎಲ್ಲವೂ ದುಬಾರಿಯಾಗಿದೆ’

ದೇಶದಲ್ಲಿ ದಿನಬಳಕೆಯ ವಸ್ತುಗಳ ಬೆಲೆಯಲ್ಲಿನ ಗಣನೀಯ ಏರಿಕೆ ಮತ್ತು ಕುಸಿಯುತ್ತಿರುವ ನೈಜ...

ಬಿಜೆಪಿ ಹೇಳಿದ ತಕ್ಷಣ ಇನ್ಸ್‌ಪೆಕ್ಟರ್ ಅಮಾನತು ಮಾಡೋಕಾಗಲ್ಲ: ಪ್ರಿಯಾಂಕ್ ಖರ್ಗೆ

ಗಣಪತಿ ಮೆರವಣಿಗೆ ವೇಳೆ ಮಸೀದಿ ಮುಂದೆ ದಾಂಧಲೆ-ರಂಪಾಟ ನಡೆಸದಂತೆ ಹಿಂದುತ್ವ ಗುಂಪುಗಳಿಗೆ...