ರಾಹುಲ್ ಖರ್ಗೆ ಟ್ರಸ್ಟ್‌ಗೆ ನಿಯಮಾನುಸಾರ ಸಿ.ಎ. ನಿವೇಶನ: ಸಚಿವ ಎಂ ಬಿ ಪಾಟೀಲ್ ಸ್ಪಷ್ಟನೆ

Date:

Advertisements

‌ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಏರೋಸ್ಪೇಸ್ ಪಾರ್ಕ್‌ನಲ್ಲಿ ಸಿ.ಎ. ನಿವೇಶನವನ್ನು ಕಾನೂನಿನ ಪ್ರಕಾರವೇ ನಿಗದಿತ ಬೆಲೆಗೆ ಕೊಡಲಾಗಿದೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

ಸೋಮವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ರಾಹುಲ್‌ ಖರ್ಗೆ ಅವರು ಅಲ್ಲಿ ಸಂಶೋಧನೆ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿದ್ದಾರೆ. ಇದರಲ್ಲಿ ಬಿಜೆಪಿ ನಾಯಕ ಲೆಹರ್ ಸಿಂಗ್ ಆರೋಪಿಸಿರುವಂತೆ ಯಾವ ನಿಯಮವೂ ಉಲ್ಲಂಘನೆ ಆಗಿಲ್ಲ” ಎಂದರು.

“ರಾಹುಲ್ ಖರ್ಗೆ ಅವರು ಐಐಟಿ ಪದವೀಧರರಾಗಿದ್ದಾರೆ. ಅವರ ಕುಟುಂಬವು ನಾನಾ ಬಗೆಯ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಕೆಐಎಡಿಬಿ ನಿಯಮಗಳ ಪ್ರಕಾರ ಸಿ.ಎ ನಿವೇಶನಗಳಲ್ಲಿ ಆರ್ & ಡಿ ಕೇಂದ್ರಗಳು, ಉತ್ಕೃಷ್ಟತಾ ಕೇಂದ್ರಗಳು, ತಾಂತ್ರಿಕ ಸಂಸ್ಥೆಗಳು, ಕೌಶಲ್ಯಾಭಿವೃದ್ಧಿ, ಸರಕಾರಿ ಕಚೇರಿಗಳು, ಬ್ಯಾಂಕು, ಆಸ್ಪತ್ರೆ, ಹೋಟೆಲ್, ಪೆಟ್ರೋಲ್ ಬಂಕ್, ಕ್ಯಾಂಟೀನ್, ವಸತಿ ಸೌಲಭ್ಯ ಇತ್ಯಾದಿಗಳ ಅಭಿವೃದ್ಧಿಗೆ ಅವಕಾಶವಿದೆ. ಆಸಕ್ತರು ಯಾರು ಬೇಕಾದರೂ ಇದಕ್ಕೆ ಪ್ರಯತ್ನಿಸಬಹುದು” ಎಂದು ಹೇಳಿದರು.

Advertisements

“ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯ ಶಿಫಾರಸಿನ ನಂತರವಷ್ಟೇ ಇವುಗಳ ಹಂಚಿಕೆಯಾಗುತ್ತದೆ. ಏರೋಸ್ಪೇಸ್ ಪಾರ್ಕಿನಲ್ಲಿ ರಾಹುಲ್ ಅವರಿಗೆ ಕೈಗಾರಿಕಾ ನಿವೇಶನವನ್ನೇನೂ ಕೊಟ್ಟಿಲ್ಲ. ಬದಲಿಗೆ, ಸಿ.ಎ.ನಿವೇಶನವನ್ನು ಆರ್ ಆ್ಯಂಡ್ ಡಿ ಕೇಂದ್ರ ಸ್ಥಾಪನೆಗಾಗಿ ನಿಗದಿತ ಬೆಲೆಗೇ ಕೊಡಲಾಗಿದೆ. ಇದರಲ್ಲಿ ಅವರಿಗೆ ಯಾವ ರಿಯಾಯಿತಿಯನ್ನೂ ನೀಡಿಲ್ಲ” ಎಂದು ಸ್ಪಷ್ಟಪಡಿಸಿದರು.

“ಈ ಹಿಂದೆ ಬಿಜೆಪಿ ಸರಕಾರದಲ್ಲಿ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೈಗಾರಿಕಾ ಪ್ರದೇಶದಲ್ಲೇ 116 ಎಕರೆಯನ್ನು ಬರೀ 50 ಕೋಟಿ ರೂ.ಗೆ ಕೊಡಲಾಗಿದೆ. ಅದರಿಂದ 137 ಕೋಟಿ ರೂ. ಬೊಕ್ಕಸಕ್ಕೆ ನಷ್ಟವಾಗಿದೆ. ಲೆಹರ್ ಸಿಂಗ್ ಅವರು ಈ ಬಗ್ಗೆಯೂ ಚಕಾರ ಎತ್ತಬಹುದಲ್ಲವೇ” ಎಂದು ಪ್ರಶ್ನಿಸಿದರು.

“ಹಿಂದೆಲ್ಲ ಕೆಐಎಡಿಬಿ ಮಂಡಳಿಯೇ ಸಿ.ಎ. ನಿವೇಶನಗಳನ್ನು ಹಂಚುತ್ತಿತ್ತು. ಆದರೆ, ನಾನು ಸಚಿವನಾದ ಮೇಲೆ ರಾಜ್ಯಮಟ್ಟದ ಏಕ ಗವಾಕ್ಷಿ ಸಮಿತಿ ಅನುಮೋದನೆ ನೀಡುವ ಹಾಗೆ ಪಾರದರ್ಶಕ ವ್ಯವಸ್ಥೆ ಜಾರಿ‌ ಮಾಡಲಾಗಿದೆ. ಅಲ್ಲದೆ ಮೊದಲ ಬಾರಿಗೆ ಸಿ.ಎ ನಿವೇಶನಗಳ ಹಂಚಿಕೆಯಲ್ಲೂ ಪರಿಶಿಷ್ಟರಿಗೆ ಶೇ 24.10ರಷ್ಟು ಮೀಸಲಾತಿ‌ ಕಲ್ಪಿಸಲಾಗಿದೆ. ಲೆಹರ್ ಸಿಂಗ್ ಈ ಸತ್ಯವನ್ನು ಅರಿತು ಮಾತನಾಡುವುದು ಒಳ್ಳೆಯದು” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X