ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಪರೋಕ್ಷ ಚಾಲನೆ ನೀಡಿದ ರಾಜ್ಯ ಸರ್ಕಾರ

Date:

Advertisements
  • ನಿಗಮ ಮಂಡಳಿ ಅಧ್ಯಕ್ಷ/ಸದಸ್ಯರ ನಾಮ ನಿರ್ದೇಶನ ರದ್ದುಗೊಳಿಸಲು ಸೂಚನೆ
  • ಮೇ 22ರಿಂದ ಅನ್ವಯಿಸುವಂತೆ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿ

ಸಚಿವ ಸಂಪುಟ ವಿಸ್ತರಣೆ ಬಳಿಕ ಎದುರಾಗಲಿರುವ ಅಸಮಾಧಾನ ಶಮನಕ್ಕೆ ರಾಜ್ಯ ಸರ್ಕಾರ ಉಪಾಯ ರೂಪಿಸಿದ್ದು ಅದಕ್ಕಾಗಿ ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ಸದಸ್ಯರುಗಳ ನೇಮಕಕ್ಕೆ ಮುಂದಾಗಿದೆ.

ಈ ಸಲುವಾಗಿ ಆದೇಶವೊಂದನ್ನು ಹೊರಡಿಸಿರುವ ಸರ್ಕಾರ ಮೇ 22ರಿಂದ ಅನ್ವಯವಾಗುವಂತೆ ನಿಗಮ ಮಂಡಳಿಗಳಿಗೆ ಆಗಿದ್ದ ನಾಮನಿರ್ದೇಶನವನ್ನು ರದ್ದು ಪಡಿಸುವಂತೆ ತಿಳಿಸಿದೆ.

ರಾಜ್ಯ ಸರ್ಕಾರ ಇದೇ ತಿಂಗಳ 28ರಿಂದ ಪೂರ್ಣ ಪ್ರಮಾಣದ ಸದಸ್ಯರೊಂದಿಗೆ ಕಾರ್ಯಾರಂಭ ಮಾಡಬೇಕಿದೆ. ಹೀಗಾಗಿ ಶೀಘ್ರದಲ್ಲೇ ಮಂತ್ರಿ ಮಂಡಲ ವಿಸ್ತರಣೆಗೂ ಸರ್ಕಾರ ಮುಂದಾಗಿದೆ.

Advertisements

ಈ ವೇಳೆ ಸಚಿವ ಸ್ಥಾನ ವಂಚಿತರು ಬಂಡಾಯ ಏಳುವ ಸಾಧ್ಯತೆ ಇರುವುದರಿಂದ, ಸಚಿವ ಸ್ಥಾನಕ್ಕೆ ಪರಿಗಣಿಸಲಾಗದಿರುವ ಶಾಸಕರಿಗೆ ನಿಗಮಮಂಡಳಿಗಳಲ್ಲಿ ಅವಕಾಶ ಕಲ್ಪಿಸುವ ಮೂಲಕ ಅಸಮಾಧಾನ ಶಮನಕ್ಕೆ ರಾಜ್ಯ ಸರ್ಕಾರ ಈ ಮಾರ್ಗ ಕಂಡುಕೊಂಡಿದೆ.ನಾಮನಿರ್ದೇಶನ ರದ್ದು

ಈ ಸುದ್ದಿ ಓದಿದ್ದೀರಾ?: ಸಿಎಂ ಸಿದ್ದರಾಮಯ್ಯಗೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ನೇಮಕ

ಮೇ 22ರಿಂದ ಆರಂಭವಾಗಿರುವ 16ನೇ ವಿಧಾನಸಭೆ ಕಲಾಪದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಜನಪ್ರತಿನಿಧಿಗಳು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿ ಸರ್ಕಾರದ ಭಾಗವಾಗಲು ಕಾದು ನಿಂತಿದ್ದಾರೆ.

ಈ ಬೆಳವಣಿಗೆಗೆ ಪೂರಕವಾಗುವಂತೆ ಸರ್ಕಾರ ನಾಮನಿರ್ದೇಶನ ರದ್ದು ಮಾಡಿ ಹೊಸಬರಿಗೆ ಅವಕಾಶ ಮಾಡಿಕೊಡಲು ಸಿದ್ದತೆ ಆರಂಭಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X