ರಾಜ್ಯದ ಜಾತಿ ಜನಗಣತಿ ವರದಿಯಲ್ಲಿ ಅನುಸರಿಸುವಂತಹ ಯಾವುದೇ ಒಳ್ಳೆಯ ಅಂಶಗಳು ಇಲ್ಲ: ಆರ್‌ ಅಶೋಕ್

Date:

Advertisements

ಜಾತಿ ಜನಗಣತಿ ಹೇಗೆ ಮಾಡಬಾರದು ಎನ್ನುವುದಕ್ಕೆ ಕರ್ನಾಟಕದ ಜಾತಿಗಣತಿ ವರದಿಯೇ ಮಾದರಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಟೀಕಿಸಿದ್ದಾರೆ.

ಕೇಂದ್ರ ಸರ್ಕಾರ ಜಾತಿ ಗಣತಿ ನಡೆಸುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಗೆ ಎಕ್ಸ್‌ ತಾಣದಲ್ಲಿ ತಿರುಗೇಟಿ ನೀಡಿರುವ ಅವರು,”ಸಿಎಂ ಸಿದ್ದರಾಮಯ್ಯ ಅವರೇ, ಜಾತಿ ಗಣತಿಗೆ ಕರ್ನಾಟಕದ ಮಾದರಿ ಅಳವಡಿಸಿ ಎಂದು ತಾವು ನೀಡಿರುವ ಹೇಳಿಗೆ ನಿಜಕ್ಕೂ ಹಾಸ್ಯಾಸ್ಪದ” ಎಂದಿದ್ದಾರೆ.

“ಮೂಲ ಪ್ರತಿ ಕಳೆದು ಹೋಗಿರುವ, ಕಾರ್ಯದರ್ಶಿಗಳ ಸಹಿಯೇ ಇಲ್ಲದ, ಪುಟಕ್ಕೆ 5-10 ರೂಪಾಯಿ ನೀಡಿ ಶಾಲಾ ಮಕ್ಕಳ ಕೈಯಲ್ಲಿ ಅರ್ಜಿ ಭರ್ತಿ ಮಾಡಿಸಿರುವ, ನಾಯಿಗಳು ಇರುವ ಮನೆಯಲ್ಲಿ ಜಾತಿ ಗಣತಿ ಮಾಡೋಕೆ ಹೋಗದ, ಹತ್ತು ವರ್ಷಗಳಾದರೂ ಸ್ವೀಕರಿಸಿದ ನಿಮ್ಮ ಜಾತಿ ಗಣತಿ ವರದಿ, ಜಾತಿ ಜನಗಣತಿಯನ್ನು ಹೇಗೆ ಮಾಡಬಾರದು ಎನ್ನುವುದಕ್ಕೆ ಮಾದರಿ” ಎಂದು ಕುಟುಕಿದ್ದಾರೆ.

Advertisements

“ಜಾತಿ ಜನಗಣತಿಯನ್ನ ಬಿಜೆಪಿ ವಿರೋಧಿಸುತ್ತಲೇ ಬಂದಿದೆ ಎಂದು ತಾವು ಹೇಳಿರುವುದು ಹಸಿ ಸುಳ್ಳು. 2010ರಲ್ಲಿ ಅಂದಿನ ಲೋಕಸಭೆಯ ವಿಪಕ್ಷ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಅವರು 2011ರ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಬಿಜೆಪಿ ಬೆಂಬಲಿಸುತ್ತದೆ ಎಂದು ಲಿಖಿತ ರೂಪದಲ್ಲಿ ಯುಪಿಎ ಸರ್ಕಾರಕ್ಕೆ ತಿಳಿಸಿದ್ದರು. ಸಂಸತ್ತಿನಲ್ಲಿ ಅಂಗೀಕರಿಸಲಾದ ಸರ್ವಾನುಮತದ ನಿರ್ಣಯವನ್ನೂ ಬಿಜೆಪಿ ಬೆಂಬಲಿಸಿತ್ತು” ಎಂದು ಸುಷ್ಮಾ ಸ್ವರಾಜ್ ಪತ್ರವನ್ನು ಹಂಚಿಕೊಂಡಿದ್ದಾರೆ.

ಆದರೆ, ಅಂದಿನ ಕಾಂಗ್ರೆಸ್ ಸರ್ಕಾರ ಜಾತಿ ಜನಗಣತಿಯ ಬದಲು ಕಾಟಾಚಾರಕ್ಕೆ ಸಾಮಾಜಿಕ-ಆರ್ಥಿಕ ಜಾತಿ ಜನಗಣತಿ – 2011 (SECC-2011) ಸಮೀಕ್ಷೆಯ ನಡೆಸಿತು. ಕರ್ನಾಟಕದ ಜಾತಿ ಗಣತಿಯಂತೆ ಕಳಪೆ ಯೋಜನೆ ಮತ್ತು ಅಸಮರ್ಥ ಅನುಷ್ಠಾನದಿಂದಾಗಿ ಅದು ಸಂಪೂರ್ಣವಾಗಿ ವಿಫಲವಾಯಿತು. ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ ನಂತರವೂ ಅದರ ಫಲಿತಾಂಶಗಳನ್ನು ಬಿಡುಗಡೆ ಮಾಡಲೇ ಇಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಜಾತಿ ಗಣತಿ ಬಗ್ಗೆ ಇರುವ ನಿಜವಾದ ಬದ್ಧತೆ” ಎಂದು ಹರಿಹಾಯ್ದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರ್ಯಾದೆಗೇಡು ಹತ್ಯೆಗಳು ನಿಲ್ಲಬೇಕಿದ್ದರೆ ಜಾತಿವಿನಾಶ ಆಗಲೇಬೇಕು

“ಬಿಜೆಪಿಗೆ ಜಾತಿ ಗಣತಿಯನ್ನ ಎಂದಿಗೂ ಚುನಾವಣಾ ಅಸ್ತ್ರವಾಗಿ ದುರ್ಬಳಕೆ ಮಾಡಿಕೊಳ್ಳಲಿಲ್ಲ. ಅಧಿಕಾರವಿದ್ದಾಗ ಜಾತಿ ಜನಗಣತಿ ಮಾಡುವ ನಿರ್ಧಾರ ಕೈಗೊಂಡು ಬದ್ಧತೆ ಪ್ರದರ್ಶನ ಮಾಡಿದ್ದೇವೆಯೇ ಹೊರತು ವಿಪಕ್ಷದಲ್ಲಿದಾಗ ಮೊಸಳೆ ಕಣ್ಣೀರು ಸುರಿಸಿ, ಅಧಿಕಾರ ಇದ್ದಾಗ ನಿರ್ಲಕ್ಷ್ಯ ಮಾಡುವ ಕೀಳು ರಾಜಕೀಯ ಮಾಡಿಲ್ಲ. ಇದು ಸಾಮಾಜಿಕ ನ್ಯಾಯದ ಬಗ್ಗೆ ನಮಗಿರುವ ನೈಜವಾದ ಬದ್ಧತೆ. ಜಾತಿ ಜನಗಣತಿ ಬಗ್ಗೆ ಬಿಜೆಪಿಯದ್ದು ಇದ್ದ ತಕರಾರು ಒಂದೇ. ಅದು ರಾಜಕೀಯ ದಾಳವಾಗಿ ದುರ್ಬಳಕೆ ಆಗಬಾರದು ಎಂಬುದು” ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರ ಈಗ ನಡೆಸಲಿರುವ ಜಾತಿ ಗಣತಿ ಅತ್ಯಂತ ಪಾರದರ್ಶಕವಾಗಿ, ವೈಜ್ಞಾನಿಕವಾಗಿ, ಸದುದ್ದೇಶದಿಂದ ನಡೆಯಲಿದೆಯೇ ಹೊರತು ನಿಮ್ಮ ಕಾಂಗ್ರೆಸ್ ಸರ್ಕಾರ ಮಾಡಿದಂತೆ ರಾಜಕೀಯ ಅನುಕೂಲಕ್ಕಾಗಿ ಮೂಗಿನ ನೇರಕ್ಕೆ ದತ್ತಾಂಶವನ್ನು ತಿರುಚುವ ದುರುದ್ದೇಶದಿಂದ ಮಾಡುವುದಿಲ್ಲ. ಕರ್ನಾಟಕದ ಜಾತಿ ಗಣತಿ ಪ್ರಕ್ರಿಯೆ ಜಾತಿಗಣತಿಯನ್ನ ಹೇಗೆ ನಡೆಸಬಾರದು ಎಂಬುದಕ್ಕೆ ಮಾದರಿಯೇ ಹೊರತು ಅದರಲ್ಲಿ ಅನುಸರಿಸುವಂತಹ ಯಾವುದೇ ಒಳ್ಳೆಯ ಅಂಶಗಳೂ ಇಲ್ಲ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X