ಜ್ಞಾನವಾಪಿ ವಿವಾದ | ದೇವಾಲಯದ ಅವಶೇಷದ ಮೇಲೆಯೇ ಮಸೀದಿ ನಿರ್ಮಾಣ: ಅರ್ಜಿದಾರರ ಪರ ವಕೀಲ

Date:

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ಬಹಿರಂಗಪಡಿಸಿದ್ದು, ಮೊದಲೇ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ಅವಶೇಷಗಳ ಮೇಲೆಯೇ ಮಸೀದಿ ನಿರ್ಮಿಸಲಾಗಿದೆ ಎಂದು ಅರ್ಜಿದಾರ ಹಿಂದೂ ಮಹಿಳೆಯರ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಗುರುವಾರ ರಾತ್ರಿ ಹೇಳಿಕೆ ನೀಡಿದ್ದಾರೆ.

839 ಪುಟಗಳ ಸಮೀಕ್ಷಾ ವರದಿಯ ಪ್ರತಿಗಳನ್ನು ಗುರುವಾರ ತಡರಾತ್ರಿ ನ್ಯಾಯಾಲಯವು ಸಂಬಂಧಪಟ್ಟ ಕಕ್ಷಿದಾರರಿಗೆ ನೀಡಿದೆ ಎಂದು ವಕೀಲ ಜೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಿಂದೆ ಇದ್ದ ದೇವಸ್ಥಾನವನ್ನು ಕೆಡವಿದ ಅವಶೇಷಗಳ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಸಮೀಕ್ಷೆಯ ವರದಿ ಸ್ಪಷ್ಟಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅಸ್ತಿತ್ವದಲ್ಲಿರುವ ರಚನೆಯನ್ನು ನಿರ್ಮಿಸುವ ಮೊದಲು ಒಂದು ದೊಡ್ಡ ಹಿಂದೂ ದೇವಾಲಯ ಅಸ್ತಿತ್ವದಲ್ಲಿತ್ತು ಎಂದು ಎಎಸ್ಐ ಹೇಳಿದ್ದು, ಎಎಸ್ಐನ ನಿರ್ಣಾಯಕ ಸಂಶೋಧನೆಯಾಗಿದೆ. ಸರ್ವೇ ವರದಿಯಲ್ಲಿ ಮಸೀದಿಗೂ ಮುನ್ನ ದೊಡ್ಡ ದೇಗುಲ ಇತ್ತು ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ” ಎಂದು ವಿಷ್ಣು ಶಂಕರ್ ಜೈನ್ ತಿಳಿಸಿದ್ದಾರೆ.

“ಸಮೀಕ್ಷೆಯಲ್ಲಿ 32 ಸ್ಥಳಗಳಲ್ಲಿ ಪುರಾವೆಗಳು ಸಿಕ್ಕಿವೆ. ಮಸೀದಿ ನಿರ್ಮಾಣಕ್ಕೂ ಮುಂಚೆಯೇ ಹಿಂದೂ ದೇವಾಲಯವಿತ್ತು ಎಂದು ತೋರಿಸುತ್ತದೆ. 2 ಸೆಪ್ಟೆಂಬರ್ 1669 ರಂದು ದೇವಾಲಯವನ್ನು ಕೆಡವಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಜನಾರ್ದನ, ರುದ್ರ ಮತ್ತು ವಿಶ್ವೇಶ್ವರನ ಬಗ್ಗೆ ಶಾಸನಗಳು ಕಂಡುಬಂದಿವೆ. ಜ್ಞಾನವಾಪಿಯ ಪಶ್ಚಿಮ ಗೋಡೆಯು ಹಿಂದೂ ದೇವಾಲಯದ ಭಾಗವಾಗಿತ್ತು. ಅದನ್ನು ಸುಲಭವಾಗಿ ಗುರುತಿಸಬಹುದಾಗಿದೆ” ಎಂದು ಹಿಂದೂ ಪರ ವಕೀಲ ತಿಳಿಸಿದ್ದಾರೆ.

“ಮಸೀದಿಯನ್ನು ನಿರ್ಮಿಸಲು ದೇವಾಲಯವನ್ನು ನಾಶಪಡಿಸಲಾಗಿದೆ. ಸರ್ವೇ ವೇಳೆ ಕಟ್ಟಡದ ರಚನೆಗೆ ಯಾವುದೇ ಹಾನಿ ಉಂಟಾಗಿಲ್ಲ, ಶೋಧಿಸಿದ ಎಲ್ಲ ವಸ್ತುಗಳನ್ನು ದಾಖಲಿಸಲಾಗಿದೆ. ವೈಜ್ಞಾನಿಕ ಅಧ್ಯಯನದ ಆಧಾರದ ಮೇಲೆ, ಅಸ್ತಿತ್ವದಲ್ಲಿರುವ ರಚನೆಯಲ್ಲಿ ಹಿಂದಿನ ರಚನೆಯ ಕಂಬಗಳ ಬಳಕೆಯಾಗಿದೆ. ಸ್ತಂಭಗಳನ್ನು ವ್ಯವಸ್ಥಿತವಾಗಿ ಅಧ್ಯಯನ ಮಾಡಲಾಗಿದೆ” ಎಂದು ಎಎಸ್‌ಐ ವರದಿಯನ್ನು ಓದುತ್ತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಹೊಸ ರಚನೆಯ ನಿರ್ಮಾಣದಲ್ಲಿ ಮೊದಲೇ ಅಸ್ತಿತ್ವದಲ್ಲಿರುವ ದೇವಾಲಯದ ಭಾಗಗಳನ್ನು ಮರುಬಳಕೆ ಮಾಡಲಾಗಿದೆ. ದೇವಾಲಯವು ದೊಡ್ಡ ಕೇಂದ್ರವನ್ನು ಮಸೀದಿಯ ಸಭಾಂಗಣವಾಗಿ ಬಳಸಲಾಗುತ್ತಿದೆ. ಈಗಿರುವ ಮಸೀದಿಯಲ್ಲಿ ಹಿಂದಿನ ರಚನೆಯ 34 ಶಾಸನಗಳನ್ನು ಬಳಸಲಾಗಿದೆ. ಮರು ಬಳಕೆ ವೇಳೆ ಕುರುಹು ನಾಶ ಮಾಡಲಾಗಿದೆ. ಈ ಮಸೀದಿಯನ್ನು ನಿರ್ಮಿಸಲು ದೇವಾಲಯವನ್ನು ನಾಶಪಡಿಸಲಾಗಿದೆ. 17ನೇ ಶತಮಾನದಲ್ಲಿ ಈ ಮಂದಿರವನ್ನು ನಾಶ ಮಾಡಲಾಗಿದೆ ಎಂದು ಸಮೀಕ್ಷೆ ವರದಿಯಲ್ಲಿ ಉಲ್ಲೇಖಿಸಲಾಗಿದೆ” ಎಂದು ಅರ್ಜಿದಾರರಾದ ಐವರು ಹಿಂದೂ ಮಹಿಳೆಯರ ಪರ ವಕೀಲ ವಿಷ್ಣು ಶಂಕರ್ ಜೈನ್ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದೂಗಳ ಜನಸಂಖ್ಯೆ ಕುಸಿತ, ಮುಸ್ಲಿಮರ ಸಂಖ್ಯೆ ಏರಿಕೆ: ಪ್ರಧಾನಿಯ ಆರ್ಥಿಕ ಸಲಹಾ ಮಂಡಳಿ ವರದಿ

ಹಿಂದೂಗಳ ಜನಸಂಖ್ಯೆಯ ಪಾಲು 1950 ರಿಂದ 2015ರ ಅವಧಿಯಲ್ಲಿ ಶೇ.7.82 ಕುಸಿದಿದ್ದರೆ,...

ಸಂತ್ರಸ್ತೆಯ ಅಪಹರಣ ಪ್ರಕರಣ | ಎಚ್ ಡಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮೇ 13ಕ್ಕೆ ಮುಂದೂಡಿಕೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಪೂರಕವಾಗಿ ವರದಿಯಾಗಿರುವ ಸಂತ್ರಸ್ತ ಮಹಿಳೆಯ ಅಪಹರಣ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಜೆಡಿಎಸ್‌ನಿಂದ ರಾಜ್ಯಪಾಲರ ಭೇಟಿ: ಸಾಥ್ ನೀಡದ ಬಿಜೆಪಿ!

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಪಟ್ಟಂತೆ ಪೆನ್‌ಡ್ರೈವ್...

ಓವೈಸಿ ಸಹೋದರರ ವಿರುದ್ಧ ಬಿಜೆಪಿಯ ನವನೀತ್ ರಾಣಾ ವಿವಾದಾತ್ಮಕ ಹೇಳಿಕೆ

ಎಐಎಂಐಎಂ ಪಕ್ಷದ ಓವೈಸಿ ಸಹೋದರರ ಬಗ್ಗೆ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರದ...