ಶಾಸಕರ ಮತ್ತು ಸಚಿವರ ಸಮಸ್ಯೆಗಳಿಗೆ ಕೊನೆ ಇಲ್ಲ: ಸತೀಶ ಜಾರಕಿಹೊಳಿ

Date:

Advertisements
  • ಸಮಸ್ಯೆಗಳು ಒಮ್ಮೆಗೆ ಬಗೆಹರಿಯಲೂ ಸಾಧ್ಯವಿಲ್ಲ
  • ಬಿ ಆರ್ ಪಾಟೀಲ್‌ಗೆ ಏನೋ ನಿರ್ದಿಷ್ಟ ಸಮಸ್ಯೆ ಇದೆ

ಶಾಸಕರ ಮತ್ತು ಸಚಿವರ ಸಮಸ್ಯೆಗಳಿಗೆ ಕೊನೆ ಇಲ್ಲ. ಅದೆಲ್ಲ ಒಮ್ಮೆಗೆ ಬಗೆಹರಿಯಲೂ ಸಾಧ್ಯವಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿ ಆರ್ ಪಾಟೀಲ್‌ಗೆ ಏನೋ ನಿರ್ದಿಷ್ಟ ಸಮಸ್ಯೆ ಇದೆ. ಯಾರಿಂದ ಸಮಸ್ಯೆ ಆಗಿದೆ ಅಂತ ಅವರೇ ಹೇಳಬೇಕು. ನಮ್ಮ ಇಲಾಖೆಗೆ ಸಂಬಂಧಿಸಿದ್ದಲ್ಲ ಎಂದರು.

ಬಿ ಆರ್ ಪಾಟೀಲ್ ಅವರು ತಮ್ಮ ಕ್ಷೇತ್ರದ ಸಮಸ್ಯೆ ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಬೆಳಗ್ಗೆ ಗರಂ ಆಗಿದ್ರು, ಸಾಯಂಕಾಲ ಕೂಲ್ ಆದ್ರು ಅಂತ ಮಾಧ್ಯಮಗಳಲ್ಲೇ ಬಂದಿದೆ. ಅದು ಮುಗಿದು ಹೋದ ಕಥೆ ಅಂತ ಅನಿಸುತ್ತದೆ ಎಂದು ಹೇಳಿದರು.

Advertisements

ಶಾಸಕರು ಮತ್ತು ಮಂತ್ರಿಗಳ ಸಮಸ್ಯೆ ಒಂದೇ ಸಲ ಬಗೆಹರಿಯಲು ಸಾಧ್ಯವಿಲ್ಲ. ಅಧಿಕಾರದ ಖುರ್ಚಿ ಮೇಲೆ ಕೂತಾಗ ಕೆಲವು ಸಮಸ್ಯೆ ಪರಿಹರಿಸುತ್ತೇವೆ ಕೆಲವು ಆಗಲ್ಲ. ಇದು ನಡೆಯುತ್ತಲೇ ಇರುತ್ತದೆ” ಎಂದರು.

ಶಾಸಕಾಂಗ ಸಭೆ ಕರೆದು ಶಾಸಕರ ಸಮಸ್ಯೆ ಬಗೆಹರಿಸುವ ಪ್ರಯತ್ನ ಆಗಿತ್ತು. ಸರ್ಕಾರ ಇದ್ದಾಗ ಪ್ರತಿನಿತ್ಯ ಹೊಸ ಸಮಸ್ಯೆಗಳು ಉದ್ಭವ ಆಗಿಯೇ ಆಗುತ್ತದೆ. ಇವತ್ತು ಒಂದನ್ನು ಪರಿಹಾರ ಮಾಡ್ತೀವಿ, ನಾಳೆ ಇನ್ನೊಂದು ಬಂದೇ ಬರುತ್ತದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರಕಾಶಿ ಸುರಂಗ ಕುಸಿತದಲ್ಲಿವೆ ಹಿಂದು-ಮುಸ್ಲಿಮ್ ಏಕತೆ ಪಾಠಗಳು

ನಿಗಮ ಮಂಡಳಿ ನೇಮಕದಲ್ಲಿ ಹಿರಿಯರ ಅಭಿಪ್ರಾಯ ಪಡೆಯದ ವಿಚಾರವಾಗಿ ಪರಮೇಶ್ವರ್ ಮಾತಿಗೆ ದನಿಗೂಡಿಸಿದ ಸತೀಶ್ ಜಾರಕಿಹೊಳಿ ಹೌದು, ಪರಮೇಶ್ವರ್ ಅವರ ಅಭಿಪ್ರಾಯ ಕೇಳಬೇಕಿತ್ತು. ಎಂಟು ವರ್ಷ ಅವರು ಅಧ್ಯಕ್ಷರಾಗಿದ್ದವರು, ಪಾರ್ಟ್ ಆಫ್ ದಿ ಪಾರ್ಟಿ ಇದ್ದಾರೆ ಪರಮೇಶ್ವರ್. ಅವರ ಅಭಿಪ್ರಾಯವನ್ನೂ ಕೇಳಬೇಕಿತ್ತು ಎಂದರು.

ಮೂರು ನಾಲ್ಕು ಬಾರಿ ಗೆದ್ದವರಿಗೆ ನಿಗಮ ಮಂಡಳಿ ನೀಡಲು ಪಾರ್ಟಿ ಬದ್ದವಾಗಿದೆ. ಮೊದಲ ಸಲ ಬಂದವರಿಗೆ ಇಲ್ಲವೇ ಇಲ್ಲ. ನಮ್ಮ ಜಿಲ್ಲೆಯವರಿಗೂ ಎರಡು ಮೂರು ಜನರು ಸೀನಿಯರ್ಸ್ ಇದ್ದಾರೆ ಅವರಿಗೆ ನಿಗಮ ಮಂಡಳಿ ಕೊಟ್ಟೇ ಕೊಡ್ತಾರೆ ಎಂದು ತಿಳಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಯಾವತ್ತೂ ಕೂಡ ಉಕ ಭಾಗದ ಸಮಸ್ಯೆ ಬೆಳಗಾವಿಯಲ್ಲಿ ಚರ್ಚೆಯೇ ಆಗಿಲ್ಲ. ಈ ಬಾರಿಯಾದರೂ ಚರ್ಚೆ ಆಗುತ್ತದಾ ನೋಡಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X