ಎನ್‌ಇಪಿ ರದ್ದು ನಿರ್ಧಾರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Date:

Advertisements

“ಎಸ್‌ಎಸ್‌ಎಲ್‌ಸಿ, ಪಿಯುಸಿಗೆ ಇನ್ನು ಮುಂದೆ ಮೂರು ಪಬ್ಲಿಕ್ ಪರೀಕ್ಷೆಗಳನ್ನು ಅನುಷ್ಠಾನ ಮಾಡಿದ್ದೇವೆ. ಇದರಿಂದ ಮಕ್ಕಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುತ್ತದೆ. ಈ ವ್ಯವಸ್ಥೆ ಎನ್‌ಇಪಿಯಲ್ಲಿಲ್ಲ. ಹಾಗಾಗಿ, ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ರದ್ದು ಮಾಡಿರುವ ನಿರ್ಧಾರ ವಾಪಸ್ ತೆಗೆದುಕೊಳ್ಳುವುದಿಲ್ಲ” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ಬಿಜೆಪಿ ಶಾಸಕರೊಬ್ಬರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ನಾವು ಮಾತು ಕೊಟ್ಟಂತೆ ಎನ್‌ಇಪಿ ರದ್ದು ಮಾಡಿದ್ದೇವೆ. ಹಿಂದಿನ ಪಠ್ಯಕ್ರಮ ಜಾರಿ ಮಾಡಿದ್ದೇವೆ. ಬಿಜೆಪಿ ಸರ್ಕಾರ ಮಾಡಿದ ಲೋಪ ಸರಿ ಮಾಡಿದ್ದೇವೆ” ಎಂದರು.

“ಎಸ್‌ಎಸ್‌ಎಲ್‌ಸಿ, ಪಿಯುಸಿಗೆ ನಾವು ಅನುಷ್ಠಾನ ಮಾಡಿರುವ ಮೂರು ಪಬ್ಲಿಕ್ ಪರೀಕ್ಷೆಗಳಿಂದ ಮಕ್ಕಳಿಗೆ ಅನುಕೂಲವಾಗುತ್ತದೆ. ಈ ವ್ಯವಸ್ಥೆ ಎನ್‌ಇಪಿಯಲ್ಲಿ ಇಲ್ಲ. ಕೆಪಿಎಸ್ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ. ರಾಜ್ಯ ಶಿಕ್ಷಣ ನೀತಿಯ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುತ್ತೇವೆ. ಇದಕ್ಕಾಗಿ ಸಮಿತಿ ನೇಮಕ ಮಾಡಲಾಗಿದೆ. ಸಮಾಜಕ್ಕೆ ಉತ್ತಮ ವ್ಯಕ್ತಿಗಳನ್ನ ಸೃಷ್ಟಿ ಮಾಡುವ ಪಾಲಿಸಿಯನ್ನಾಗಿ ಎಸ್‌ಇಪಿ ಜಾರಿ ಮಾಡುತ್ತೇವಿ. ಎನ್‌ಇಪಿ ರದ್ದು ನಿರ್ಧಾರ ವಾಪಸ್ ಇಲ್ಲವೇ ಇಲ್ಲ” ಎಂದು ಹೇಳಿದರು.

Advertisements

‘ಎನ್‌ಇಪಿ ರದ್ದು ನಿರ್ಧಾರ ವಾಪಸ್ ಇಲ್ಲವೇ ಇಲ್ಲ” ಎಂಬ ಮಧು ಬಂಗಾರಪ್ಪ ಸ್ಪಷ್ಟ ನಿಲುವಿಗೆ ಬಿಜೆಪಿ ಶಾಸಕರಿಂದ ವಿರೋಧ ವ್ಯಕ್ತವಾಯಿತು.

ಈ ಬಗ್ಗೆ ಪ್ರತಿಕ್ರಿಯಿಸಿದ ಸದಸ್ಯ ವೈ.ಎ ನಾರಾಯಣಸ್ವಾಮಿ, “ಸಿಬಿಎಸ್‌ಇ ಬೋರ್ಡ್‌ಗೆ ಎಸ್‌ಇಪಿ ಅನ್ವಯ ಆಗುತ್ತಾ? ಬೇರೆ ಬೇರೆ ರಾಜ್ಯಗಳಲ್ಲಿ ಎನ್‌ಇಪಿ ಇದ್ದು, ನಮ್ಮ ರಾಜ್ಯದಲ್ಲಿ ಎಸ್‌ಇಪಿ ಇದ್ದರೆ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ನಮ್ಮ ಮಕ್ಕಳಿಗೆ ಅನ್ಯಾಯ ಆಗುತ್ತದೆ. ರಾಜ್ಯ ಸರ್ಕಾರವು ದುರುದ್ದೇಶದಿಂದ ಎನ್‌ಇಪಿ ರದ್ದು ಮಾಡುವುದು ಸರಿಯಲ್ಲ. ಎನ್‌ಇಪಿಯ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ವ್ಯವಸ್ಥೆ ರೂಪಿಸಲಾಗುತ್ತದೆ. ಸಿಬಿಎಸ್‌ಇ ಖಾಸಗಿ ಶಾಲೆಗಳಲ್ಲಿ ಎಸ್‌ಇಪಿ ಅನುಷ್ಠಾನ ಮಾಡುವ ತಾಕತ್ ಕಾಂಗ್ರೆಸ್ ಸರ್ಕಾರಕ್ಕೆ ಇದೆಯಾ?” ಎಂದು ಸವಾಲು ಹಾಕಿದರು.

ಈ ವೇಳೆ ಹಲವು ಸದಸ್ಯರು ಎನ್‌ಇಪಿ ಚರ್ಚೆಯಲ್ಲಿ ಮಾತನಾಡುವ ಉತ್ಸಾಹ ತೋರಿದ್ದರಿಂದ್ದ ಚರ್ಚೆಯನ್ನು ಮಂಗಳವಾರ (ಡಿ.12ಕ್ಕೆ) ಮುಂದೂಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X