ಖರ್ಗೆಯವರೇ ನಿಮ್ಮನ್ನು ಮುಟ್ಟಿದರೆ ಮತ್ತೆ ಮೂಗು ಒರೆಸಿದೆ ಅಂತಾರೇನೋ: ರಾಹುಲ್ ಗಾಂಧಿ ವ್ಯಂಗ್ಯ

Date:

Advertisements
  • ಖರ್ಗೆ ಅವರು ಗಾಂಧಿ ಕುಟುಂಬಕ್ಕೆ ಟಿಶ್ಯೂ ಪೇಪರ್ ಎಂದಿದ್ದ ಬಿಜೆಪಿ
  • ಬಿಜೆಪಿ ಟೀಕೆ ಪ್ರಸ್ತಾಪಿಸಿದ ಕೈ ನಾಯಕರ ಕಾಲೆಳೆದ ರಾಹುಲ್ ಗಾಂಧಿ

ಮಲ್ಲಿಕಾರ್ಜುನ ಖರ್ಗೆಯವರೇ ಈಗ ನಾನು ನಿಮ್ಮನ್ನು ಮುಟ್ಟಿದರೆ ನಿಮ್ಮ ಬೆನ್ನಿಗೆ ಮೂಗು ಒರೆಸುತ್ತಿದ್ದೀನಿ ಅಂತಾರೇನೋ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆನ್ನು ಮುಟ್ಟಿ ತಮ್ಮ ಜೊತೆಗೆ ಕಾರಿನಲ್ಲಿ ಕುಳಿತುಕೊಳ್ಳುವಂತೆ ಕರೆದ ವಿಡಿಯೋವೊಂದನ್ನು ಎಡಿಟ್ ಮಾಡಿ ಕೇವಲ ಬೆನ್ನು ಮುಟ್ಟಿದ ಭಾಗವನ್ನಷ್ಟೇ ಮುಂದಿಟ್ಟು ಕರ್ನಾಟಕ ಬಿಜೆಪಿ ವೈರಲ್ ಮಾಡಿತ್ತು.

ಬಿಜೆಪಿಯಂತೂ, “ರಾಹುಲ್ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಬೆನ್ನಿಗೆ ಮೂಗು ಒರೆಸಿದ್ದಾರೆ. ಕಾಂಗ್ರೆಸ್‌ನ ಉನ್ನತ ನಾಯಕನನ್ನು ಗಾಂಧಿ ಪರಿವಾರ ‘ಟಿಶ್ಯೂ ಪೇಪರ್‌’ನಂತೆ ಬಳಸಿಕೊಳ್ಳುತ್ತಿದೆ” ಎಂದು ಟೀಕಿಸಿತ್ತು.

Advertisements

ಬಿಜೆಪಿ ಹಂಚಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಇದೀಗ ರಾಹುಲ್ ಗಾಂಧಿ ಬಿಜೆಪಿಗರಿಗೆ ಟಾಂಗ್ ಕೊಟ್ಟಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದರು. ಬಳಿಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಹೊರಬರುತ್ತಿದ್ದ ವೇಳೆ ಈ ವಿಚಾರವನ್ನು ರಾಹುಲ್ ಎತ್ತಿದ್ದರು. ವೈರಲ್ ವಿಡಿಯೋವನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿವರಿಸಿ, “ಖರ್ಗೆ ಅವರೇ, ನಾನು ನಿಮ್ಮನ್ನು ಮುಟ್ಟಿದರೆ ಮತ್ತೆ ಮೂಗು ಒರೆಸಿದೆ ಎನ್ನುತ್ತಾರೆನೋ” ಎಂದು ವ್ಯಂಗ್ಯವಾಡಿದ್ದಾರೆ.

“ನೀವು ಆ ವಿಡಿಯೋ ನೋಡಿದ್ರಾ? ನಾನು ನಿಮಗೆ ಸಹಾಯ ಮಾಡುವ ಉದ್ದೇಶದಿಂದ ನಿಮ್ಮ ಬೆನ್ನು ಮುಟ್ಟಿದೆ. ಆದರೆ, ಅವರು ನಿಮ್ಮ ಬೆನ್ನಿಗೆ ಮೂಗು ಒರೆಸಿದ್ದೇನೆ ಎಂದು ಅಪಪ್ರಚಾರ ಮಾಡಿದರು. ನೋಡಿ ಎಂಥಾ ಅವಿವೇಕ ಇದು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಹಿಂದೆ ಕಾರಿನಿಂದ ಇಳಿದು ಹೋಗುತ್ತಿರುವಾಗ ಮಲ್ಲಿಕಾರ್ಜುನ ಖರ್ಗೆಯವರು ಮುಂದಿದ್ದರು ಆಗ ರಾಹುಲ್ ಗಾಂಧಿ ಮುಖದ ಮೇಲೆ ಬೆರಳಿಟ್ಟು ಬಳಿಕ ಖರ್ಗೆಯವರನ್ನು ಮುಟ್ಟಿದ್ದರು ಆಗ ಬಿಜೆಪಿಯು ರಾಹುಲ್ ಗಾಂಧಿಯವರು ಖರ್ಗೆಯವರನ್ನು ಟಿಶ್ಯೂ ಪೇಪರ್​ನಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಕಮೆಂಟ್ ಮಾಡಿ ವಿಡಿಯೋ ಹಂಚಿಕೊಂಡಿದ್ದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X