ಈ ಸರ್ಕಾರ ಸರ್ವಾಧಿಕಾರಿ, ನಮ್ಮ ಮಾತು ಕೇಳುತ್ತಿಲ್ಲ: ಲೋಕಸಭೆಯ ದಾಳಿ ಬಳಿಕ ಯುವತಿ ನೀಲಂ ಹೇಳಿಕೆ

Date:

Advertisements

“ಈ ಸರ್ಕಾರ ಸರ್ವಾಧಿಕಾರಿಯಾಗಿದ್ದು ನಮ್ಮ ಮಾತು ಕೇಳುತ್ತಿಲ್ಲ. ನಿರುದ್ಯೋಗಿಗಳಾಗಿದ್ದೇವೆ. ಅದಕ್ಕಾಗಿಯೇ ನಾವು ಈ ಮಾರ್ಗವನ್ನು ಆರಿಸಿಕೊಂಡಿದ್ದೇವೆ” ಹೀಗಂತ ಹೇಳಿದ್ದು ಲೋಕಸಭೆಯಲ್ಲಿಂದು ದಾಳಿಯ ಗುಂಪಿನಲ್ಲಿದ್ದ ಯುವತಿ ನೀಲಂ.

ಲೋಕಸಭೆಯಲ್ಲಿ ಇಂದು ಬುಧವಾರ ಭಾರೀ ಭದ್ರತಾ ಲೋಪದ ಘಟನೆಯ ಬಳಿಕ ಸಂಸತ್‌ನ ಹೊರಗಡೆ ‘ಕೆಮಿಕಲ್ ಬಾಂಬ್’ ಸಿಡಿಸಿದ ಬಳಿಕ ಪೊಲೀಸರ ವಶಕ್ಕೆ ಪಡೆಯುತ್ತಿದ್ದಾಗ ಯುವತಿ ನೀಲಂ ಈ ರೀತಿ ಹೇಳಿಕೆ ನೀಡಿದ್ದಾರೆ.

“ನನ್ನ ಹೆಸರು ನೀಲಂ, ನಾನು ನಿರುದ್ಯೋಗಿ. ಈ ಸರ್ಕಾರ ಸರ್ವಾಧಿಕಾರಿಯಾಗಿದ್ದು ನಮ್ಮ ಮಾತು ಕೇಳುತ್ತಿಲ್ಲ. ನಮ್ಮ ಹಕ್ಕುಗಳನ್ನು ಕೇಳಿದರೆ ಲಾಠಿ ಚಾರ್ಜ್‌ ನಡೆಸಿ ಬಂಧಿಸಲಾಗುತ್ತಿದೆ. ರಸ್ತೆಯಲ್ಲೇ ದೊಣ್ಣೆಯಿಂದ ಹೊಡೆಯುತ್ತಾರೆ. ನಮಗೆ ಬೇರೆ ದಾರಿ ಕಾಣಲಿಲ್ಲ. ಅದಕ್ಕಾಗಿಯೇ ನಾವು ಈ ಮಾರ್ಗವನ್ನು ಆರಿಸಿಕೊಂಡೆವು” ಎಂದು ತಿಳಿಸಿದ್ದಾಳೆ.

Advertisements

“ನಾವು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಂಡಿಲ್ಲ. ನಾವು ವಿದ್ಯಾರ್ಥಿಗಳು, ಸಾಮಾನ್ಯ ಜನರು. ನಿರುದ್ಯೋಗಿಗಳಾಗಿದ್ದೇವೆ. ಕೇಂದ್ರ ಸರ್ಕಾರವು ರೈತರು, ಬಡವರು ಸೇರಿದಂತೆ ಯಾರ ಮಾತನ್ನು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ನಮ್ಮ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರ ಮೇಲೆ ಅತ್ಯಾಚಾರವಾಗುತ್ತಿದ್ದರೂ ಕೇಂದ್ರ ಸರ್ಕಾರ ಏನೂ ಮಾಡುತ್ತಿಲ್ಲ. ದೇಶದಲ್ಲಿ ಸರ್ವಾಧಿಕಾರ ನಡೆಯಲು ನಾವು ಬಿಡಲ್ಲ. ಸರ್ವಾಧಿಕಾರಿ ಆಡಳಿತ ನಿಲ್ಲಿಸಿ. ಭಾರತ್ ಮಾತಾ ಕೀ ಜೈ,” ಎಂದು ನೀಲಂ ತಿಳಿಸಿದ್ದಾರೆ.

lokksabha

ಹಳದಿ ಹಾಗೂ ಕೆಂಪು ಹೊಗೆಯನ್ನು ಹೊರಸೂಸುವ ಕ್ಯಾನ್‌ಗಳನ್ನು ಬಳಸಿ ಸಂಸತ್ತಿನ ಕಟ್ಟಡದ ಹೊರಗೆ ಪ್ರತಿಭಟನೆ ನಡೆಸಿದ್ದಕ್ಕಾಗಿ ನೀಲಂ ಸಹಿತ ಇಬ್ಬರನ್ನು ವಶಕ್ಕೆ ಪಡಯಲಾಗಿದೆ. ಈವರೆಗೆ ಒಟ್ಟು ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಸಂಸತ್ತಿನ ಹೊರಗಡೆ ನೀಲಂ (42) ಹರಿಯಾಣ ಹಿಸ್ಸಾರ್ ಮೂಲದವರೆಂದು ತಿಳಿದುಬಂದಿದೆ. ಮತ್ತೋರ್ವ ಅಮೋಲ್ ಶಿಂಧೆ (25) ಮಹಾರಾಷ್ಟ್ರ ಮೂಲದವರೆಂದು ಗುರುತಿಸಲಾಗಿದೆ. ಮತ್ತಿಬ್ಬರ ಪೈಕಿ ಓರ್ವ ಮೈಸೂರು ಮೂಲದ ಮನೋರಂಜನ್, ಇನ್ನೋರ್ವ ಸಾಗರ್ ಶರ್ಮಾ ಎಂದು ತಿಳಿದುಬಂದಿದೆ.

ಒಳಗಡೆ ದಾಳಿ ನಡೆಸಿದವರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೆಸರಲ್ಲಿ ಪಾಸ್ ಪಡೆದಿದ್ದರು ಎಂದು ಉತ್ತರ ಪ್ರದೇಶದ ಅಮ್ರೋಹ ಶಾಸಕ ಡ್ಯಾನಿಶ್ ಅಲಿ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X