ಬಿಜೆಪಿಯ ‘ಏಕ್ ಹೈ ತೊ ಸೇಫ್‌ ಹೈ’ ಘೋಷಣೆಯನ್ನು ರಾಹುಲ್ ಗಾಂಧಿ ವಿವರಿಸಿದ್ದು ಹೀಗೆ

Date:

Advertisements

ಮಹಾರಾಷ್ಟ್ರದಲ್ಲಿ ಇನ್ನೆರಡು ದಿನಗಳಲ್ಲಿ (ನವೆಂಬರ್ 20) ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲಾ ಪಕ್ಷಗಳು ಚುನಾವಣಾ ತಯಾರಿಯನ್ನು ಮಾಡಿಕೊಂಡಿದೆ. ಈ ನಡುವೆ ಮಹಾರಾಷ್ಟ್ರ ಬಿಜೆಪಿಯ ‘ಏಕ್ ಹೈ ತೊ ಸೇಫ್‌ ಹೈ’ (ಜೊತೆಯಾಗಿದ್ದರೆ ಸುರಕ್ಷಿತವಾಗಿರುತ್ತೇವೆ) ಎಂಬ ಘೋಷಣೆಯನ್ನು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ವಿವರಿಸಿದ್ದಾರೆ.

ಮುಂಬೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮೊದಲು ಲಾಕರ್ ಬಾಕ್ಸ್‌ನಿಂದ ಎರಡು ಚಿತ್ರಗಳನ್ನು ಹೊರತೆಗೆದು ಪ್ರದರ್ಶಿಸಿದ್ದಾರೆ. ಒಂದು ಚಿತ್ರದಲ್ಲಿ ಮೋದಿ ಮತ್ತು ಅದಾನಿ ಇದ್ದರೆ, ಇನ್ನೊಂದು ಚಿತ್ರ ಧಾರಾವಿಯದ್ದಾಗಿದೆ. ಈ ಚಿತ್ರವನ್ನು ತೋರಿಸಿ ಏಕ್ ಹೈ ತೊ ಸೇಫ್‌ ಹೈ ಘೋಷಣೆಯನ್ನು ರಾಹುಲ್ ವಿವರಿಸಿದ್ದಾರೆ.

‘ಏಕ್ ಹೈ ತೊ ಸೇಫ್‌ ಹೈ’ ಎಂಬ ಘೋಷಣೆಯಲ್ಲಿ ‘ಏಕ್’ (ಒಂದು) ಅಂದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಆಪ್ತ ವಲಯ ಎಂದು ಹೇಳಿಕೊಂಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ಭಾರತದಲ್ಲಿ ತೆವಳುತ್ತಿರುವ ಮೂಲಸೌಕರ್ಯ ಯೋಜನೆಗಳಿಗೆ ಬಾಂದ್ರಾ ಕಾಲ್ತುಳಿತ ತಾಜಾ ನಿದರ್ಶನ: ರಾಹುಲ್ ಗಾಂಧಿ

“ಅವರ ನಾಯಕತ್ವದಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ಮಾತ್ರ ಸುರಕ್ಷಿತರಾಗಿದ್ದಾರೆ. ಆದರೆ ಧಾರಾವಿ ಜನರು ನಿರ್ಲಕ್ಷಿಸಲ್ಪಟ್ಟಿದ್ದಾರೆ” ಎಂದು ಆರೋಪಿಸಿದ್ದಾರೆ. ಹಾಗೆಯೇ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಹಲವು ಪ್ರತಿಜ್ಞೆಗಳನ್ನು ಕೂಡಾ ಮಾಡಿದ್ದಾರೆ.

“ನಾವು ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದುಹಾಕುತ್ತೇವೆ” ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಜಾತಿ ಗಣತಿ ಮುಖ್ಯವಾದುದ್ದು. ಅದು ನಮ್ಮ ಮುಂದಿರುವ ಅತೀ ಪ್ರಮುಖ ಕಾರ್ಯ ಎಂದರು.

ಮುಂಬರುವ ಮಹಾರಾಷ್ಟ್ರ ಚುನಾವಣೆಯನ್ನು ಶ್ರೀಮಂತರು ಮತ್ತು ಹಿಂದುಳಿದವರ ನಡುವಿನ ‘ಸೈದ್ಧಾಂತಿಕ ಕದನ’ ಎಂದು ಬಣ್ಣಿಸಿದ್ದಾರೆ.

ಇದನ್ನು ಓದಿದ್ದೀರಾ? ಆಪ್‌ ತೊರೆದು ಬಿಜೆಪಿ ಸೇರಿದ ಕೈಲಾಶ್​ ಗಹ್ಲೋಟ್

ಇನ್ನು ಧಾರಾವಿ ಪುನರಾಭಿವೃದ್ಧಿ ಯೋಜನೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, “ಅದಾನಿಗೆ ಏನು ಬೇಕೋ ಅದನ್ನು ಅವರು ಪಡೆಯುತ್ತಾರೆ. ಕಾರ್ಪೋರೇಟ್‌ ವಲಯದ ಬಗ್ಗೆ ಹೆಚ್ಚು ಕಾಳಜಿ ಬಿಜೆಪಿ ನಾಯಕರಿಗಿದೆ” ಎಂದು ದೂರಿದರು.

“ಫಾಕ್ಸ್‌ಕಾನ್ ಮತ್ತು ಏರ್‌ಬಸ್ ಸೇರಿದಂತೆ 7 ಲಕ್ಷ ಕೋಟಿ ರೂ ಯೋಜನೆಗಳನ್ನು ಮಹಾರಾಷ್ಟ್ರದಿಂದ ಗುಜರಾತ್‌ಗೆ ವರ್ಗಾಯಿಸಲಾಗಿದೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಮಹಾ ವಿಕಾಸ್ ಅಘಾಡಿ ಸರ್ಕಾರ ರಚನೆಯಾದರೆ ಜನರ ಹಿತಾಸಕ್ತಿಯನ್ನು ರಕ್ಷಿಸುತ್ತದೆ” ಎಂದು ಭರವಸೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X