- ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬಿ ಎಸ್ ಯಡಿಯೂರಪ್ಪ
- ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದ ಮಾಜಿ ಸಿಎಂ
ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣವಿದೆ. ನೂರಕ್ಕೆ ನೂರರಷ್ಟು ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ. ಹಾಗಾಗಿ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ನಾವು 135 ಸ್ಥಾನ ಗೆದ್ದು ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ. ಯಾರು ಏನೇ ಹೇಳಿದರೂ ಅಧಿಕಾರ ನಮ್ಮದೇ ಎಂದರು.
ಈ ಸುದ್ದಿ ಓದಿದ್ದೀರಾ?:ಮತಕ್ಕಾಗಿ ಧರ್ಮ – ದೇವರ ದುರ್ಬಳಕೆ : ಮೋದಿ…
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗ ದಳ ನಿಷೇಧದ ಬಗ್ಗೆ ಉಲ್ಲೇಖಿಸಿದ್ದಾರೆ. ಮುಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗುತ್ತೆ ಎಂದರು.
ಕಾಂಗ್ರೆಸ್ಗೆ ಬಿಜೆಪಿ ಅಭಿವೃದಿ ಸಹಿಸಲು ಆಗುತ್ತಿಲ್ಲ. ಹೀಗಾಗಿ ಇಲ್ಲ ಸಲ್ಲದ ಆರೋಪ ಮಾಡಿಕೊಂಡು ತಿರುಗುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.