ಶಂಕಿತರನ್ನು ಈಗಲೇ ಉಗ್ರರು ಎನ್ನಲು ಆಗದು; ಗೃಹ ಸಚಿವ ಡಾ. ಜಿ ಪರಮೇಶ್ವರ್‌

Date:

Advertisements

ಬೆಂಗಳೂರು ನಗರದಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಬಂಧಿತ ಶಂಕಿತ ಐವರು ಉಗ್ರರನ್ನು ಈಗಲೇ ಟೆರರಿಸ್ಟ್ ಎಂದು ಹೇಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್​ ಹೇಳಿದರು.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಮಾಡಿ ಟೆರರಿಸ್ಟ್‌ ಸಂಪರ್ಕ ಇದೆಯಾ ಎಂದು ನೋಡಲಾಗುತ್ತಿದೆ. ಕೇಂದ್ರ ಕಾರಾಗೃಹ ಸಂಪರ್ಕ ಇಟ್ಟುಕೊಂಡಿರುವುದು ತಿಳಿದು ಬಂದಿದೆ ಎಂದರು.

ಕೆಲವು ಕೃತ್ಯ ಎಸಗುವ ಬಗ್ಗೆ ಮಾಹಿತಿ ದೊರೆತಿದೆ. ಪೊಲೀಸರ ತನಿಖೆ ಆಗಲಿ, ಬಳಿಕ ಎನ್‌ಇಎ ತನಿಖೆ ಬಗ್ಗೆ ನೋಡೋಣ. ಸದ್ಯ ಬಂಧಿತರಿಂದ ಏಳು ಕಂಟ್ರಿಮೇಡ್​ ಪಿಸ್ತೂಲ್, ವಾಕಿಟಾಕಿ, ಆಯುಧ ಸಿಕ್ಕಿವೆ ಎಂದು ಹೇಳಿದರು.

Advertisements

ಕೆಲವರು ಬೇಲ್ ಮೇಲೆ ಬಿಡುಗಡೆಯಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಕೆಲವರು ಕೊಲೆ, ದರೋಡೆ ಸೇರಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಯಾವ ಸಂಘಟನೆ ಜತೆ ಗುರುತಿಸಿಕೊಂಡಿದ್ದರು ಎಂಬ ಬಗ್ಗೆ ತನಿಖೆಯಿಂದ ತಿಳಿಯಬೇಕಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆ ಒಪ್ಪಿಗೆ

7 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ

ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬುಧವಾರ ಕೋರ್ಟ್​ಗೆ ಹಾಜರುಪಡಿಸಿದ್ದು, 15 ದಿನ ವಶಕ್ಕೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದರು. ಆದರೆ, ಸರ್ಕಾರಿ ಅಭಿಯೋಜಕರು ಕೋರ್ಟ್​ಗೆ ಹಾಜರಾಗದ ಹಿನ್ನೆಲೆ ಸ್ವಲ್ಪ ಸಮಯದ ನಂತರ ಸರ್ಕಾರಿ ಅಭಿಯೋಜಕರ ​ಜೊತೆ ಹಾಜರುಪಡಿಸಲು ಸಿಸಿಬಿ ಪೊಲೀಸರಿಗೆ ಎನ್​ಐಎ ವಿಶೇಷ ನ್ಯಾಯಾಲಯ ಸೂಚಿಸಿತ್ತು.

ಸದ್ಯ ಐವರು ಶಂಕಿತ ಉಗ್ರರನ್ನು 7 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಶಂಕಿತ ಉಗ್ರರಾದ ಸಯ್ಯದ್ ಸುಹೇಲ್, ಉಮರ್, ಜುನೈದ್​, ಮುದಾಸಿರ್, ಜಾಹಿದ್​ ಅವರನ್ನು ಏಳು ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X