ಸಚಿವ ಸ್ಥಾನ ಸಿಗದವರಿಗೆ ಬೇರೆ ಬೇರೆ ಹುದ್ದೆ ಕೊಡಲಾಗುತ್ತೆ: ಸತೀಶ ಜಾರಕಿಹೊಳಿ

Date:

Advertisements

ಸಚಿವ ಸ್ಥಾನ ಸಿಗದರು ಅಸಮಾಧಾನ ಹೊರಹಾಕುವುದು ಸ್ವಾಭಾವಿಕ. ಯಾರಿಗೆ ಬೇಸರ ಆಗಿದೆ ಅವರನ್ನು ವರಿಷ್ಠರು ಕರೆಯಿಸಿ ಮಾತನಾಡುತ್ತಾರೆ. ಅಂತವರಿಗೆ ಬೇರೆ ಬೇರೆ ಹುದ್ದೆ ಕೊಡಲಾಗುತ್ತದೆ ಎಂದು ನೂತನ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಬಂದಿಳಿದ ಅವರು, ಮಾಧ್ಯಮ ಪ್ರತಿನಿಧಿಗಳ ಜೊತೆ ಪ್ರತಿಕ್ರಿಯಿಸಿದರು.

“ಬೆಳಗಾವಿ ಜಿಲ್ಲೆಯ ಹಲವು ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿದೆ. ಈ ಬಾರಿ ಗೆದ್ದ ಶಾಸಕರಲ್ಲಿ ಕನಿಷ್ಠ ಎರಡು ಅಥವಾ ಮೂರು ಬಾರಿ ಗೆದ್ದವರು ಹೆಚ್ಚಿದ್ದಾರೆ. ಹೀಗಾಗಿ ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಎಲ್ಲೆಡೆ ಕೇಳಿಬರುತ್ತಿದೆ” ಎಂದರು.

Advertisements

“ಸಚಿವರಿಗೆ ಖಾತೆ ಹಂಚಿಕೆ ಅಂತಿಮವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಪಟ್ಟಿಗೆ ರಾಜ್ಯಪಾಲರಿಂದ ಅಂಕಿತ ಬೀಳಬೇಕಿದೆ. ವಿರೋಧ ಪಕ್ಷದವರು ಸರ್ಕಾರ ಟೇಕಫ್ ಆಗಿಲ್ಲ ಎನ್ನುತ್ತಾರೆ. ಹಾಗಾಗಿ ಸಂಪುಟ ವಿಸ್ತರಣೆಯನ್ನು ಒಂದೇ ಬಾರಿ ಟೇಕಫ್ ಮಾಡಲಾಗಿದೆ” ಎಂದು ಹೇಳಿದರು.

ಬಿಜೆಪಿ ಸರ್ಕಾರದ ಯೋಜನೆಗಳನ್ನು ಮುಂದುವರಿಸುತ್ತೀರಾ ಎಂದು ಪ್ರಶ್ನಿಸಿದಾಗ, “ಜನಪರವಾಗಿದ್ದರೆ ಮುಂದುವರಿಸುತ್ತೇವೆ. ಅನವಶ್ಯಕವಾಗಿದ್ದರೆ ಸ್ಥಗಿತಗೊಳಿಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X