ಸರ್ಕಾರ ತೆಗೆದವರು- ತೆಗೆಸಿಕೊಂಡವರು ಅಪ್ಪಿಕೊಂಡಿದ್ದಾರೆ: ಯೋಗೀಶ್ವರ್-ಹೆಚ್‌ಡಿಕೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Date:

Advertisements

ರಾಮನಗರ ಜಿಲ್ಲೆಯ ರಾಜಕಾರಣದಲ್ಲಿ ಅವಕಾಶವಾದ ರಾಜಕಾರಣದ ಅಪ್ಪುಗೆಯನ್ನು ಮಾಡಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಸ್ವಯಂಘೋಷಿತ ಬಿಜೆಪಿ ನಾಯಕ ಸಿ.ಪಿ.ಯೋಗೀಶ್ವರ್ ಏಕವಚನದಲ್ಲಿ ಪರಸ್ಪರ ನಿಂದಿಸಿಕೊಳ್ಳುತ್ತಿದ್ದವರು ಈಗ ಒಂದಾಗುತ್ತಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು, ಯೋಗೀಶ್ವರ್-ಹೆಚ್‌ಡಿಕೆ ಜನರಿಗೆ ಪುಕ್ಕಟೆ ಮನರಂಜನೆಯನ್ನು ನೀಡುತ್ತಿದ್ದು, ತಮ್ಮ ರಾಜಕೀಯದ ಅಸ್ತಿತ್ವಕ್ಕಾಗಿ ಒಬ್ಬರ ಹೆಗಲ ಮೇಲೆ ಇನ್ನೊಬ್ಬರು ಕೈ ಹಾಕುತ್ತಿದ್ದಾರೆ. ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ರವರನ್ನು ಟೀಕಿಸುತ್ತಿದ್ದಾರೆ ಎಂದರು.

2022ರ ಅಕ್ಟೋಬರ್‌ನಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಮಗಾರಿಗಳ ಶಂಕುಸ್ಥಾಪನೆಯ ಸಂದರ್ಭದಲ್ಲಿ ಯೋಗೀಶ್ವರ್-ಹೆಚ್‌ಡಿಕೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ಜೆಡಿಎಸ್ ಕಾರ್ಯಕರ್ತರು ಯೋಗೀಶ್ವರ್ ಕಾರಿನ ಮೇಲೆ ಮೊಟ್ಟೆ ಎಸೆದು ಅಡ್ಡಿಪಡಿಸಿದ್ದನ್ನು ಬಸವರಾಜ ಬೊಮ್ಮಾಯಿಯವರೇ ಖಂಡಿಸಿದ್ದರು. ಇದೇ ಯೋಗೀಶ್ವರ್ ಬಿಜೆಪಿ ನಾಯಕ ಅಮಿತ್ ಷಾರವರನ್ನು ಗೂಂಡಾ ಎಂದು ಕರೆದ ಆಡಿಯೋ ಸದ್ದು ಮಾಡಿತ್ತು. ಕುಮಾರಸ್ವಾಮಿ ಹೊಂದಾಣಿಕೆ ರಾಜಕೀಯ ಕುರಿತು ಹಲವು ಬಾರಿ ಆರೋಪ ಮಾಡಿ, ಜೋಕರ್ ಎಂದು ಕರೆದಿದ್ದರು. ಯೋಗೀಶ್ವರ್‌ರವರನ್ನು ಒಬ್ಬ ಬಚ್ಚಾ ಎಂದು ಕರೆದು, ನೀಚತನದಲ್ಲಿ ಮಂತ್ರಿ ಆಗಿದ್ದಾನೆ ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದರು. ಈಗ ರಾಜಕೀಯ ಅಸ್ತಿತ್ವಕ್ಕಾಗಿ ಈಗ ಇಬ್ಬರೂ ಪರಸ್ಪರ ಅಪ್ಪಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

Advertisements

ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾರೆ. ನಾವು ಮೊದಲಿನಿಂದಲೂ ಜೆಡಿಎಸ್ ಬಿಜೆಪಿ ಬಿ ಟೀಮ್ ಎಂದು ಹೇಳುತ್ತಿದ್ದೆವು. ಈಗಾ ಬಿಜೆಪಿ ಬಿ ಟೀಂ ಎಂದು ತೋರಿಸಿಕೊಟ್ಟಿದ್ದಾರೆ ಎಂದರು.

ಬಿಎಸ್ ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಬಸವರಾಜ ಬೊಮ್ಮಾಯಿ ಅವರಿಗೆ ವಿಶ್ರಾಂತಿ ಕೊಡಲು ಕುಮಾರಸ್ವಾಮಿ ಅವರಿಗೆ ರೆಡ್ ಕಾರ್ಪೆಟ್ ಹಾಕಲಾಗಿದೆ. ಸಿಪಿ ಯೋಗೀಶ್ವರ್, ಕುಮಾರಸ್ವಾಮಿ ಅವರು ಒಳ್ಳೆ ಜೋಡಿಗಳಾಗಿ ಹೊರ ಹೊಮ್ಮಿದ್ದಾರೆ. ಒಂದಾಗಿ ಸೈದ್ದಾಂತಿಕವಾಗಿ ಪಕ್ಷ ಕಟ್ಟಿದ್ದಾರೆ ರಾಜಕಾರಣ ಮಾಡಿದರೆ ನಾವು ಬೇಡ ಅನ್ನುವುದಿಲ್ಲ. ಆದರೆ ಪದೇ ಪದೆ ಡಿಕೆ ಶಿವಕುಮಾರ್, ಡಿಕೆ ಸುರೇಶ್ ವಿಚಾರ ಮಾತಾನಾಡುವುದು ಸರಿ ಅಲ್ಲ ಎಂದರು.

ಸರ್ಕಾರ ತೆಗೆದವರು ಮತ್ತು ತೆಗೆಸಿಕೊಂಡವರು ಒಬ್ಬರಿಗೊಬ್ಬರು ಅಪ್ಪಿಕೊಂಡು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತೆಗೆಯುವ ಮಾತನಾಡುತ್ತಿದ್ದಾರೆ. ಬಿಜೆಪಿ ನಾಯಕರ ಅಶ್ಲೀಲ ಸಿಡಿಗಳನ್ನು ಬಳಸಿಕೊಂಡು ಯೋಗೀಶ್ವರ್ ಬ್ಲಾಕ್‌ಮೇಲ್ ಮೂಲಕ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿದ್ದಾರೆ ಎಂದು ಯತ್ನಾಳ್, ರೇಣುಕಾಚಾರ್ಯ ಮತ್ತು ಇತರೆ ನಾಯಕರು ಆರೋಪ ಮಾಡಿದ್ದರು. ಸಿಪಿ ಯೋಗೀಶ್ವರ್ ಅವರಂತ ಅವಕಾಶವಾದಿ ರಾಜಕಾರಣಿ ಯಾರು ಇಲ್ಲ ಎಂದು ಕಾಂಗ್ರೆಸ್ ನಾಯಕ ರಮೇಶ್ ಬಾಬು ಕಿಡಿಕಾರಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ರಾಮಚಂದ್ರಪ್ಪ ಮತ್ತು ಜಿ.ಸಿ.ರಾಜು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X