ಪೊಲೀಸರಿಗೆ ಧಮ್ಕಿ ಹಾಕಿ ಗೂಂಡಾ ವರ್ತನೆ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನ ಸಾಧ್ಯತೆ

Date:

Advertisements

ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ, ಕರ್ತವ್ಯನಿರತ ಪೊಲೀಸರಿಗೆ ಧಮ್ಕಿ ಹಾಕಿ, ಗೂಂಡಾ ವರ್ತನೆ ತೋರಿದ್ದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲೂ ಬಂಧನ ನಡೆಸುವ ಸಾಧ್ಯತೆ ಇದೆ.

ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಂಧನವಾದ ರೌಡಿಶೀಟರ್ ಪರ ಪ್ರತಿಭಟನೆಯ ನೆಪದಲ್ಲಿ ಪೊಲೀಸರಿಗೆ ಬೆದರಿಕೆ ಹಾಕಿದ್ದ ಬಿಜೆಪಿ ಶಾಸಕನಿಗೆ ಈಗ ಬಂಧನ ಭೀತಿ ಎದುರಾಗಿದ್ದು, ಬೆಳ್ತಂಗಡಿ ಪೊಲೀಸರು ಶಾಸಕರ ಮನೆ ಸುತ್ತುವರಿದು ಬಂಧನಕ್ಕೆ ಬಲೆ ಬೀಸಿದ್ದಾರೆ.

ಕಳೆದ ಮೇ 18ರಂದು ಅಕ್ರಮ ಕಲ್ಲು ಕೋರೆ ಗಣಿಗಾರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನನ್ನು ಬಂಧಿಸಿದ್ದನ್ನು ಖಂಡಿಸಿ ಶಾಸಕ ಹರೀಶ್ ಪೂಂಜಾ ಕಾರ್ಯಕರ್ತರೊಂದಿಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಮಧ್ಯರಾತ್ರಿ ಪ್ರತಿಭಟಿಸಿ ಪೊಲೀಸರಿಗೆ ನಿಂದಿಸಿದ್ದರು.

Advertisements

Belthangady BJP MLA HARISH POONJA ARRESTED

ಈ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮುಂದುವರಿದ ಭಾಗವಾಗಿ ಮೇ 20ರಂದು ತಾಲೂಕು ಆಡಳಿತದ ಮುಂದೆ ಪ್ರತಿಭಟನೆ ನಡೆಸಿ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಎರಡನೇ ಪ್ರಕರಣ ದಾಖಲಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಮೇ 22ರಂದು ಶಾಸಕ ಹರೀಶ್ ಪೂಂಜ ಬಂಧನಕ್ಕೆ ಮುಂದಾಗಿದ್ದು, ಅವರ ಗರ್ಡಾಡಿ ನಿವಾಸದ ಮುಂದೆ ಪೊಲೀಸ್‌ ತಂಡ ಸಜ್ಜಾಗಿದೆ. ಯಾವುದೇ ಸಮಯದಲ್ಲೂ ಹರೀಶ್ ಪೂಂಜಾ ಬಂಧನದ ಸಾಧ್ಯತೆ ಎದುರಾಗಿದೆ. ಈ ಹಿನ್ನೆಲೆ ಅವರ ಮನೆಗೆ ಸಾರ್ವಜನಿಕರ ಭೇಟಿಗೆ ಪೊಲೀಸರು ನಿರಾಕರಿಸಿದ್ದು, ಮನೆಗೆ ಹೋಗುವ ರಸ್ತೆಗೆ ಪೊಲೀಸ್‌ ಸರ್ಪಗಾವಲು ಇರಿಸಲಾಗಿದೆ.

ಇದನ್ನು ಓದಿದ್ದೀರಾ? ಅಕ್ರಮ ಕಲ್ಲುಕೋರೆ: ಬಿಜೆಪಿ ಮುಖಂಡನ ಬಂಧನ; ಠಾಣೆಗೆ ನುಗ್ಗಿ ಪೊಲೀಸರಿಗೆ ಧಮ್ಕಿ ಹಾಕಿದ ಬಿಜೆಪಿ ಶಾಸಕ!

ಶಾಸಕರು ಮನೆಯಲ್ಲಿ ಇಲ್ಲದ ಕಾರಣ ಶಾಸಕರ ಪರ ವಕೀಲರ ತಂಡ ಪೊಲೀಸರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಬಂಧನ ಭೀತಿ ಎದುರಿಸುತ್ತಿರುವ ಶಾಸಕರು ಮನೆಯಿಂದ ನಾಪತ್ತೆಯಾಗಿದ್ದಾರೆ. ಶಾಸಕರ ಪರ ಹಲವು ಬಿಜೆಪಿ ಕಾರ್ಯಕರ್ತರು ಶಾಸಕರ ಮನೆ ಎದುರು ಜಮಾಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X