ಮೂವರು ಬಿಜೆಪಿ ಸಂಸದರು ಕಾಂಗ್ರೆಸ್‌ ಸೇರಲು ಬಯಸಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

Date:

Advertisements

ಮೂವರು ಬಿಜೆಪಿ ಸಂಸದರು ಕಾಂಗ್ರೆಸ್‌ ಸೇರಲು ಬಯಸಿದ್ದು, ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

ಸರ್ಕಾರದ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಕಲಬುರಗಿ ನಗರಕ್ಕೆ ಬಂದಿರುವ ಅವರು ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

“ಕಾಂಗ್ರೆಸ್‌ ಸೇರುವ ಸಂಸದರು ಯಾರು ಎಂಬುದನ್ನು ಸದ್ಯಕ್ಕೆ ಬಹಿರಂಗಪಡಿಸಲಾಗದು. ಇನ್ನೂ ಹಲವು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ” ಎಂದರು.

Advertisements

ಜಯದೇವ ಆಸ್ಪತ್ರೆಯ ‌ನಿವೃತ್ತ ನಿರ್ದೇಶಕ ಡಾ.ಸಿ ಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ‌ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯಿಸಿ, “ಎಚ್ ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ, ಅವರ ಮನೆಯವರು, ಅವರ ಮಗನ ಸ್ಪರ್ಧೆಯನ್ನೂ ನೋಡಿದ್ದೇವೆ. ಡಿ ಕೆ ಸುರೇಶ್ ಬರೀ ಸಂಸದ ಅಲ್ಲ. ಪಂಚಾಯಿತಿ ಸದಸ್ಯರಾಗಿಯೂ ಕೆಲಸ‌ ಮಾಡಿದ್ದಾರೆ. ಅವರಿಗೆ ಚುನಾವಣೆ ಎದುರಿಸುವುದು ಗೊತ್ತಿದೆ” ಎಂದರು.

“ಸಿ ಎನ್ ಮಂಜುನಾಥ್ ಅವರನ್ನು ನಮ್ಮ ಸರ್ಕಾರವೂ ಜಯದೇವದಲ್ಲಿ ನಿರ್ದೇಶಕರನ್ನಾಗಿ ಮುಂದುವರೆಸಿತ್ತು. ಅವರು ಸ್ಪರ್ಧಿಸಿದರೆ ಸ್ವಾಗತ. ನಮ್ಮ ಗ್ಯಾರಂಟಿಗಳನ್ನು ಬಿಜೆಪಿಯವರು ನಕಲು ಮಾಡಿ ಮೋದಿ ಗ್ಯಾರಂಟಿ ಎಂದು ಕರೆದುಕೊಳ್ಳುತ್ತಿದ್ದಾರೆ” ಎಂದು ಕುಟುಕಿದರು.

ಬಿಜೆಪಿಯ ಡಿ ವಿ ಸದಾನಂದಗೌಡ ಅವರು ಬೆಂಗಳೂರಿನ ಕ್ಷೇತ್ರವೊಂದರಿಂದ ಕಾಂಗ್ರೆಸ್ ಟಿಕೆಟ್ ಮೂಲಕ ಸ್ಪರ್ಧಿಸುವ ಸಾಧ್ಯತೆ ಇದೆಯಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಶಿವಕುಮಾರ್ ಈ ಬಗ್ಗೆ ಯಾವುದೇ ಹೇಳಿಕೆ ನೀಡಲಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X