ಕುಮಾರಸ್ವಾಮಿ ಕೂಡ ಜೈಲಿಗೆ ಹೋಗುವ ಕಾಲ ಹತ್ತಿರವಿದೆ: ಕಾಂಗ್ರೆಸ್‌ ಶಾಸಕ

Date:

Advertisements

ಕುಮಾರಸ್ವಾಮಿ ಏನೂ ಸಾಚ ಅಲ್ಲ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ರೇವಣ್ಣನಂತೆ ಕುಮಾರಸ್ವಾಮಿ ಕೂಡ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ ಎಂದು ಮಂಡ್ಯ ಜಿಲ್ಲೆಯ ಮದ್ದೂರು ಕಾಂಗ್ರೆಸ್‌ ಕದಲೂರು ಉದಯ್ ಹೇಳಿದ್ದಾರೆ. ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ರಾಧಿಕಾ ಅವರನ್ನ ಕುಮಾರಸ್ವಾಮಿ ಪತ್ನಿಯಂತೆ ನೋಡುತ್ತಿದ್ದಾರಾ? ಮಗಳ ವಯಸ್ಸಿನವರನ್ನ ಪುಸಲಾಯಿಸಿ, ಮಗು ಹುಟ್ಟಿಸಿ ರಸ್ತೆಯಲ್ಲಿ ಬಿಟ್ಟಿದ್ದಾರೆ. ಈ ರೀತಿ ಬಹಳಷ್ಟು ನಡೆದಿರುವ ಸಾಧ್ಯತೆಗಳಿವೆ. ಮುಖ್ಯಮಂತ್ರಿ ಅಗಿದ್ದವರು ಇಂತಹ ನೀಚ ಕೆಲಸ ಮಾಡುತ್ತಾರಾ? ಕುಮಾರಸ್ವಾಮಿ ಏನೂ ಸಾಚ ಅಲ್ಲ ಅಂತ ಅವರ ಆಪ್ತರೇ ಹೇಳುತ್ತಾರೆ. ಕುಮಾರಸ್ವಾಮಿ ಕೂಡ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕೇಳಿದ್ದೇವೆ” ಎಂದು ಹೇಳಿದ್ದಾರೆ.

“ಇಷ್ಟು ದಿ‌ನ ದೂರು ಕೊಡಲು ಯಾರೂ ಧೈರ್ಯ ಮಾಡಿರಲಿಲ್ಲ. ಯಾರಾದರೂ ದೂರು ಕೊಟ್ಟರೆ, ಸರ್ಕಾರ ತನಿಖೆ ನಡೆಸುತ್ತದೆ. ಬೇರೆಯವರನ್ನ ಮುಳುಗಿಸಿದ್ದೇ ಅವರ ಸಾಧನೆ. ಅವರು ಜೀವನದುದ್ದಕ್ಕೂ ಬ್ಲಾಕ್ ಮೇಲ್, ಅಪಪ್ರಚಾರ ಮಾಡುತ್ತಾ ಬಂದಿದ್ದಾರೆ‌” ಎಂದು ಆರೋಪಿಸಿದ್ದಾರೆ.

Advertisements

“ಪ್ರಜ್ವಲ್ ತನ್ನ ಕೃತ್ಯಗಳನ್ನು ತಾನೇ ವಿಡಿಯೋ ಮಾಡಿಕೊಂಡಿದ್ದ. ಜೆಡಿಎಸ್‌ ಯಾವ ಪುರುಷಾರ್ಥಕ್ಕೆ ಪ್ರತಿಭಟನೆ ಮಾಡುತ್ತಿದೆ. ನೂರಾರು ಹೆಣ್ಣುಮಕ್ಕಳಿಗೆ ಅನ್ಯಾಯ ಆಗಿದೆ. ಸಂತ್ರಸ್ತೆಯರ ಪರ ಜೆಡಿಎಸ್‌ನ ಯಾವ ನಾಯಕರೂ ಧ್ವನಿ ಎತ್ತಿಲ್ಲ. ಇವರ ಮನೆ ಹೆಣ್ಣುಮಕ್ಕಳಿಗೆ ಅನ್ಯಾಯ ಆಗಿದ್ದರೆ ಹೀಗೆ ಮಾಡುತ್ತಿದ್ರಾ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X