ಸಾಮಾಜಿಕ ಚಳವಳಿಯ ದಮನ ಮಾಡಿದ ಮಾಯಾವತಿಯ ಕತ್ತು ಹಿಸುಕುವ ಸಮಯ ಬಂದಿದೆ: ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ

Date:

Advertisements

ಬಿಎಸ್‌ಪಿ ಮುಖ್ಯಸ್ಥೆ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಉದಿತ್ ರಾಜ್ ವಿವಾದವನ್ನು ಸೃಷ್ಟಿಸಿದ್ದಾರೆ. “ಮಾಯಾವತಿ ಸಾಮಾಜಿಕ ಚಳವಳಿಯ ಕತ್ತು ಹಿಸುಕಿ ದಮನ ಮಾಡಿದ್ದಾರೆ. ಈಗ ಅವರ ಕತ್ತು ಹಿಸುಕುವ ಸಮಯ” ಎಂದು ಹೇಳಿದ್ದಾರೆ.

ಸೋಮವಾರ ಲಕ್ನೋದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರಾಜ್, “ಮಹಾಭಾರತ ಯುದ್ಧದ ಸಂದರ್ಭದಲ್ಲಿ ಅರ್ಜುನ ಭಗವಂತ ಕೃಷ್ಣನ ಬಳಿ ತನ್ನ ಸಂಬಂಧಿಕರನ್ನು ಹೇಗೆ ಕೊಲ್ಲಲಿ ಎಂದು ಪ್ರಶ್ನಿಸಿದರು. ಆಗ ‘ಸೋದರ ಸಂಬಂಧಿ ಮತ್ತು ಸಂಬಂಧಿಕರು ಎಂಬುದು ಯಾವುದೂ ಇಲ್ಲ. ಕೇವಲ ನ್ಯಾಯಕ್ಕಾಗಿ ಹೋರಾಡು, ನಿಮ್ಮವರನ್ನೇ ಕೊಲ್ಲು’ ಎಂದು ಕೃಷ್ಣ, ಅರ್ಜುನನಿಗೆ ಹೇಳಿದ್ದರು” ಎಂದು ವಿವರಿಸಿದ್ದಾರೆ.

ಇದನ್ನು ಓದಿದ್ದೀರಾ? ಚೀನಾ ನಮ್ಮ ಶತ್ರು ರಾಷ್ಟ್ರವೆಂದು ಭಾವಿಸಬಾರದು: ಕಾಂಗ್ರೆಸ್ ನಾಯಕ ಸ್ಯಾಮ್‌ ಪಿತ್ರೋಡಾ

Advertisements

ಈ ವೇಳೆಯಲ್ಲೇ, “ಇಂದು ನನ್ನ ಕೃಷ್ಣ ನಿನ್ನ ಶತ್ರುಗಳನ್ನು ಮೊದಲು ಕೊಲ್ಲು ಎಂದು ಹೇಳಿದ್ದಾರೆ. ಹಾಗಾಗಿ ಸಾಮಾಜಿಕ ನ್ಯಾಯದ ಶತ್ರು, ಸಾಮಾಜಿಕ ಚಳವಳಿಯ ಕತ್ತು ಹಿಸುಕಿ ದಮನ ಮಾಡಿದ ಮಾಯಾವತಿಯ ಕತ್ತು ಹಿಸುಕುವ ಸಮಯ ಇದಾಗಿದೆ” ಎಂದು ಉದ್ರೇಕಕಾರಿ ಹೇಳಿಕೆ ನೀಡಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದಾರೆ.

“ಮಾಯಾವತಿಯ ಕ್ರೂರತೆ, ಅಸಮರ್ಥತೆ ಹೊರತಾಗಿಯೂ ಕಾರ್ಯಕರ್ತರು ಮತ್ತು ಮತದಾರರು ಹೋರಾಟ ಮುಂದುವರಿಸಿದರು. ಕಾರ್ಯಕರ್ತರ ಮನೆಗಳನ್ನು ಮಾರಾಟ ಮಾಡಲಾಗಿದೆ. ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಕ್ಕಿಲ್ಲ. ಅವರನ್ನು ಕ್ರೂರವಾಗಿ ನೋಡಲಾಗಿದೆ. ಆದರೂ ಬಹುಜನ ರಾಜ್ಯಕ್ಕಾಗಿ ಅವರು ತಮ್ಮ ಸಂಘರ್ಷವನ್ನು ಮುಂದುವರಿಸಿದರು” ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಹಾಗೆಯೇ ಮುಸ್ಲಿಂ ಸಮುದಾಯದ ಸದ್ಯದ ಸ್ಥಿತಿಯ ಬಗ್ಗೆ ಮಾತನಾಡಿದ ಉದಿತ್ ರಾಜ್, “ಈ ಹಿಂದೆ ದಲಿತರು ಕೆಟ್ಟ ಸ್ಥಿತಿಯಲ್ಲಿ ಇದ್ದಂತೆ ಇಂದು ಮುಸ್ಲಿಂ ಸಮುದಾಯವು ಕೆಟ್ಟ ಸ್ಥಿತಿಯಲ್ಲಿದೆ. ಈ ಸ್ಥಿತಿಯ ವಿರುದ್ಧವಾಗಿ ಮುಸ್ಲಿಂ ಸಮುದಾಯ ಮಾತ್ರ ಪ್ರತ್ಯೇಕವಾಗಿ ಹೋರಾಡಲು ಸಾಧ್ಯವಿಲ್ಲ. ದಲಿತರು ಕೂಡ ಪ್ರತ್ಯೇಕ ಹೋರಾಡಲಾಗದು. ಮುಸ್ಲಿಂ ಸಮುದಾಯ ತಮ್ಮ ಸಮಸ್ಯೆಯ ಬಗ್ಗೆ ಮಾತನಾಡಿದಾಗ ಅದಕ್ಕೆ ಕೋಮುವಾದದ ಬಣ್ಣ ಹಚ್ಚಲಾಗುತ್ತದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಮಾಯಾವತಿಯವರು ಒಳಮೀಸಲಾತಿ ತೀರ್ಪು ವಿರೋಧಿಸಿದ್ದಕ್ಕೆ ಬಿಎಸ್‌ಪಿಗೆ ರಾಜೀನಾಮೆ: ಕೆ ಬಿ ವಾಸು ಸ್ಪಷ್ಟನೆ

ಈ ಹಿಂದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಮಚಾಗಿರಿ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಉದಿತ್ ರಾಜ್ ಅವರು 2019ರಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಗೊಂಡವರು. 2003ರ ನವೆಂಬರ್‌ನಲ್ಲಿ ತನ್ನ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಇಂಡಿಯನ್ ಜಸ್ಟಿಸ್ ಪಾರ್ಟಿ ಸ್ಥಾಪಿಸಿದ ರಾಜ್, ಬಳಿಕ 2014ರ ಫೆಬ್ರವರಿಯಲ್ಲಿ ಐಜೆಪಿಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದರು. ರಾಜ್ 2014 ಮತ್ತು 2019ರಲ್ಲಿ ಲೋಕಸಭೆ ಸಂಸದರಾಗಿದ್ದು, 2014ರಲ್ಲಿ ಬಿಜೆಪಿ ಟಿಕೆಟ್‌ನಿಂದ 2019ರಲ್ಲಿ ಕಾಂಗ್ರೆಸ್ ಟಿಕೆಟ್‌ನಿಂದ ಸ್ಪರ್ಧಿಸಿ ಗೆದ್ದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X