ತಿಪಟೂರು ಜಿಲ್ಲೆ ಕನಸು ಐದು ಗ್ಯಾರಂಟಿಗಳಿಂದಾಗಿ ಸದ್ಯ ನನಸಾಗಲ್ಲ ಎಂದ ಕಾಂಗ್ರೆಸ್ ಶಾಸಕ ಷಡಕ್ಷರಿ

Date:

Advertisements

ತಿಪಟೂರು ಜಿಲ್ಲೆ ಕನಸು ಐದು ಗ್ಯಾರಂಟಿಗಳಿಂದಾಗಿ ಸದ್ಯ ನನಸಾಗಲ್ಲ. ಈ ಐದು ಗ್ಯಾರಂಟಿಗಳು ನಮ್ಮನ್ನು ಮಲಗಿಸಿ ಬಿಟ್ಟಿವೆ ಎಂದು ಸ್ವತಃ ತಿಪಟೂರು ಕಾಂಗ್ರೆಸ್ ಶಾಸಕ ಕೆ ಷಡಕ್ಷರಿ ಹೇಳಿಕೆ ನೀಡಿದ್ದಾರೆ.

ತಿಪಟೂರಿನಲ್ಲಿ ಅ.2ರಂದು ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ತಿಪಟೂರು ಜಿಲ್ಲೆ ಮಾಡಬೇಕು ಎಂಬ ಹೋರಾಟ ನನ್ನದು. ಆದರೆ ಮುಂದಿನ ಬಜೆಟ್‌ವರೆಗೆ ಸರ್ಕಾರದ ಬಳಿ ಹಣ ಇಲ್ಲ. ಈ ಐದು ಗ್ಯಾರಂಟಿಗಳು ನಮ್ಮನ್ನು ಮಲಗಿಸಿ ಬಿಟ್ಟಿವೆ. ಸದ್ಯದ ಪರಿಸ್ಥಿತಿಯಲ್ಲಿ ತಿಪಟೂರು ಜಿಲ್ಲೆ ಕನಸು ನನಸಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

“ಜಿಲ್ಲೆ ಮಾಡಬೇಕು ಅಂದರೆ ಮೊದಲು ಬೆಳಗಾವಿಯನ್ನು ಮಾಡಬೇಕು. 18 ವಿಧಾನಸಭಾ ಕ್ಷೇತ್ರಗಳಿವೆ. ಅಲ್ಲಿ ಎರಡು ಜಿಲ್ಲೆ ಮಾಡಿದ ನಂತರ ನಮ್ಮ ತಿಪಟೂರು ಕೂಡ ಒಂದು ಜಿಲ್ಲೆ ಮಾಡಬೇಕು. ಮುಂದಿನ ಬಜೆಟ್‌ವರೆಗೂ ಸರ್ಕಾರದ ಬಳಿ ದುಡ್ಡಿಲ್ಲ” ಎಂದು ತಿಳಿಸಿದರು.

Advertisements

“ನಾನು ಮುಖ್ಯಮಂತ್ರಿಗಳ ಬಳಿ ತಿಪಟೂರು ಜಿಲ್ಲೆ ಮಾಡುವ ಬೇಡಿಕೆ ಇಟ್ಟಿದ್ದೆ ಆದರೆ ಮುಖ್ಯಮಂತ್ರಿಗಳು ಅದನ್ನು ಒಪ್ಪಿಕೊಂಡಿಲ್ಲ. ಹೊಸದಾಗಿ ಮಾಡಿದ ಜಿಲ್ಲೆಗಳಿಗೆ ಕುರ್ಚಿ, ಮೇಜು ಕೊಡೋದಕ್ಕೆನೇ ದುಡ್ಡಿಲ್ಲ, ಇನ್ನು ಹೊಸ ಜಿಲ್ಲೆ ಮಾಡೋಕಾಗುತ್ತಾ? ಎಂದು ನನ್ನನ್ನು ಸುಮ್ಮನಿರಿಸಿದ್ದಾರೆ. ಆದರೂ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ. ಸದ್ಯಕ್ಕೆ ನನಗೂ ಆಗಲ್ಲ, ಅವರಿಗೂ ಆಗಲ್ಲ” ಎಂದು ಶಾಸಕ ಷಡಕ್ಷರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X