ಮಾನನಷ್ಟ ಆರೋಪ: ಬಿಜೆಪಿ, ಚುನಾವಣಾ ಆಯೋಗಕ್ಕೆ ನೋಟಿಸ್ ಕಳುಹಿಸಿದ ಟಿಎಂಸಿ

Date:

Advertisements

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಂಗಳವಾರ ಬಿಜೆಪಿ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಮಾನನಷ್ಟ ನೋಟಿಸ್ ಕಳುಹಿಸಿದೆ. ಬಿಜೆಪಿ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಜಾಹೀರಾತನ್ನು ಪ್ರಕಟಿಸಿದ್ದು ಕೋಲ್ಕತ್ತಾ ಹೈಕೋರ್ಟಿನ ಆದೇಶವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ.

ಮೇ 20ರಂದು ಹೈಕೋರ್ಟ್, ಟಿಎಂಸಿಗೆ ಸಂಬಂಧಿಸಿದಂತೆ ಅವಹೇಳನಕಾರಿ ಜಾಹೀರಾತುಗಳನ್ನು ಪ್ರಕಟಿಸದಂತೆ ಮತ್ತು ಜೂನ್ 4ರವರೆಗೆ ಮತ್ತು ಮುಂದಿನ ಆದೇಶದವರೆಗೆ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸದಂತೆ ಬಿಜೆಪಿಗೆ ತಡೆಯಾಜ್ಞೆ ನೀಡಿತ್ತು.

ಇದನ್ನು ಓದಿದ್ದೀರಾ?  ಬಂಗಾಳದಲ್ಲಿ ಇವಿಎಂಗಳ ಮೇಲೆ ಬಿಜೆಪಿ ಟ್ಯಾಗ್; ಟಿಎಂಸಿ ಆರೋಪ; ಚುನಾವಣಾ ಆಯೋಗದ ಉತ್ತರವೇನು? 

Advertisements

ತಡೆಯಾಜ್ಞೆ ಇದ್ದರೂ ಕೂಡಾ ಬಿಜೆಪಿಯು ಮಂಗಳವಾರ ತನ್ನ ಎಕ್ಸ್‌ ಖಾತೆಯಲ್ಲಿ ಮಾನನಷ್ಟ ಜಾಹೀರಾತು ಪ್ರಕಟಿಸಿದೆ ಎಂದು ಟಿಎಂಸಿ ಪರ ವಕೀಲ ಸೋಹಂ ದತ್ತಾ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಿಂದ ಈ ಉದ್ಧೇಶಪೂರ್ವಕ, ಅವಹೇಳನಕಾರಿ ಜಾಹೀರಾತನ್ನು ಹಿಂತೆಗೆದುಕೊಳ್ಳುವಂತೆ ದತ್ತಾ ಬಿಜೆಪಿಗೆ ತಿಳಿಸಿದ್ದಾರೆ. ಹಾಗೆಯೇ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೂಡಲೇ ಸ್ಪಷ್ಟೀಕರಣವನ್ನು ನೀಡುವಂತೆ ಕೋರಿದ್ದಾರೆ.

ಇದನ್ನು ಓದಿದ್ದೀರಾ?  ಲೋಕಸಭಾ ಚುನಾವಣೆ | ಮಮತಾ ಕೋಟೆಯಲ್ಲಿ ಕೇಸರಿ ತಂತ್ರ-ಕುತಂತ್ರ; ಟಿಎಂಸಿ, ಬಿಜೆಪಿ, ‘ಇಂಡಿಯಾ’ ಹೋರಾಟ

ಮಂಗಳವಾರ ಬಿಜೆಪಿ ಪೋಸ್ಟ್ ಮಾಡಿದ ಜಾಹೀರಾತನ್ನು ‘ಸುಳ್ಳು, ಪರಿಶೀಲಿಸದ ಮತ್ತು ಮಾನಹಾನಿಕರ’ ಎಂದು ಟಿಎಂಸಿ ಹೇಳಿದೆ.

ಇನ್ನು ಟಿಎಂಸಿಗೆ ಸಂಬಂಧಿಸಿದಂತೆ ಅವಹೇಳನಕಾರಿ ಜಾಹೀರಾತುಗಳನ್ನು ಪ್ರಕಟಿಸದಂತೆ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಬಿಜೆಪಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X