ಬಿಜೆಪಿಯ ‘ರಾವಣ’ ಪೋಸ್ಟರ್‌ಗೆ ಕಾಂಗ್ರೆಸಿನಿಂದ ‘ಅದಾನಿಯ ಕೈಗೊಂಬೆ’ ತಿರುಗೇಟು

Date:

Advertisements

ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸುವ ಪೋಸ್ಟರ್‌ಅನ್ನು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯನ್ನು ಕೈ ಪಕ್ಷ ತರಾಟೆಗೆ ತೆಗೆದುಕೊಂಡಿದೆ. ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಜೈರಾಮ್ ರಮೇಶ್, ರಾಹುಲ್‌ ಗಾಂಧಿ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶವನ್ನು ಈ ಪೋಸ್ಟರ್ ಹೊಂದಿದೆ ಎಂದು ಆರೋಪಿಸಿದ್ದಾರೆ.

“ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸುವ ಗ್ರಾಫಿಕ್‌ನ ನಿಜವಾದ ಉದ್ದೇಶವೇನು? ಇದು ಕಾಂಗ್ರೆಸ್ ಸಂಸದ ಮತ್ತು ಪಕ್ಷದ ಮಾಜಿ ಅಧ್ಯಕ್ಷರ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಮತ್ತು ಪ್ರಚೋದಿಸುವ ಉದ್ದೇಶವನ್ನು ಹೊಂದಿದೆ, ಅವರ ತಂದೆ ಮತ್ತು ಅಜ್ಜಿಯನ್ನು ಹತ್ಯೆ ಮಾಡಲಾಗಿದೆ. ನಾವು ಇದಕ್ಕೆಲ್ಲ ಹೆದರುವುದಿಲ್ಲ” ಎಂದು ಜೈರಾಮ್‌ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಪೋಸ್ಟರ್‌ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಗೌರವಾನ್ವಿತ ನರೇಂದ್ರ ಮೋದಿ ಮತ್ತು ಜೆಪಿ ನಡ್ಡಾ ಅವರೇ, ನೀವು ರಾಜಕೀಯ ಮತ್ತು ಚರ್ಚೆಯನ್ನು ಯಾವ ಮಟ್ಟಕ್ಕೆ ಕೊಂಡೊಯ್ಯಲು ಬಯಸುತ್ತೀರಿ? ಹಿಂಸಾತ್ಮಕ ಮತ್ತು ಪ್ರಚೋದನಕಾರಿ ಟ್ವೀಟ್‌ಗಳನ್ನು ನೀವು ಒಪ್ಪುತ್ತೀರಾ? ನಿಮ್ಮ ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಈ ಪೋಸ್ಟ್ ಮಾಡಲಾಗಿದೆಯೇ? ನೀವು ಹೇಳಿದ ಭರವಸೆಗಳಂತೆಯೇ ನೀವು ಮಾಡಿದ ಪ್ರಮಾಣಗಳನ್ನು ಮರೆತುಬಿಟ್ಟಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೈಲಿನಲ್ಲಿರುವ ಮಾನವ ಹಕ್ಕುಗಳ ಹೋರಾಟಗಾರ್ತಿ ನರ್ಗೀಸ್ ಮೊಹಮ್ಮದಿ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

ಮೊದಲಿಗೆ ಟ್ವಿಟರ್‌ನಲ್ಲಿ ಪ್ರಧಾನಿ ಮೋದಿಯವರನ್ನು ದೊಡ್ಡ ಸುಳ್ಳುಗಾರ” ಎಂದು ಟೀಕಿಸುವ ಮೂಲಕ ಕಾಂಗ್ರೆಸ್ ಬಿಜೆಪಿ ಪೋಸ್ಟರ್ ವಿವಾದ ಪ್ರಾರಂಭವಾಯಿತು. ಬಳಿಕ ಚಲನಚಿತ್ರದ ಪೋಸ್ಟರ್ ಹೋಲುವಂತೆ “ಪ್ರಧಾನಿ ನರೇಂದ್ರ ಮೋದಿ ಜುಮ್ಲಾ ಬಾಯ್” ಸೇರಿದಂತೆ ಸರಣಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡಲಾಯಿತು.

ಬಳಿಕ ಕಾಂಗ್ರೆಸ್‌ಗೆ ತಿರುಗೇಟು ನೀಡಲು ಬಿಜೆಪಿ ರಾಹುಲ್ ಗಾಂಧಿಯನ್ನು ಆಧುನಿಕ ರಾವಣನಿಗೆ ಹೋಲಿಸಿ ಪೋಸ್ಟರ್ ಹಂಚಿಕೊಂಡಿತು. ಭಾರತ ಅಪಾಯದಲ್ಲಿದೆ – ಕಾಂಗ್ರೆಸ್‌ನ ನಿರ್ಮಾಣ, ಜಾರ್ಜ್ ಸೊರೊಸ್ ನಿರ್ದೇಶಿಸಿದ್ದಾರೆ, ಅವನು ದುಷ್ಪ ಧರ್ಮ ವಿರೋಧಿ ರಾಮನ ವಿರೋಧಿ, ಅವನ ಗುರಿ ಭಾರತವನ್ನು ನಾಶಮಾಡುವುದು” ಎಂದು ಬರೆಯಲಾಗಿತ್ತು.

ರಾಹುಲ್ ಗಾಂಧಿಯನ್ನು “ಹೊಸ ಕಾಲದ ರಾವಣ’ ಎಂದು ತೋರಿಸುವ ಬಿಜೆಪಿ ಟ್ವೀಟ್‌ಗೆ ಕಾಂಗ್ರೆಸ್‌ನಿಂದ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿಯನ್ನು “ಅದಾನಿಯ ಗೊಂಬೆ’ ಎಂದು ಶೀರ್ಷಿಕೆ ಹೊಂದಿರುವ ಪೋಸ್ಟರ್ ಹಂಚಿಕೊಂಡು ಕೌಂಟರ್‌ ನೀಡಿದೆ. ಸರ್ಕಾರವನ್ನು ಅದಾನಿ ತಮ್ಮ ಹಿಡಿತದಲ್ಲಿಟ್ಟುಕೊಂಡಿದ್ದಾರೆ ಎಂದು ಪರೋಕ್ಷವಾಗಿ ಪೋಸ್ಟರ್ ಮೂಲಕ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X