ಈ ದಿನ ಸಮೀಕ್ಷೆ | ಮೋದಿ ಆಡಳಿತದಲ್ಲಿ ಜನರನ್ನು ಬಾಧಿಸಿದೆ ಬೆಲೆ ಏರಿಕೆ!

Date:

ಈ ದಿನ.ಕಾಮ್‌ ನಡೆಸಿದ ಸಮೀಕ್ಷೆಗೆ ಒಳಪಟ್ಟ ಶೇ 85.30% ಮತದಾರರು ಬೆಲೆಯೇರಿಕೆ ಆಗಿದೆ ಎಂದರೆ ಕೇವಲ 9.16% ಮಂದಿ ಮಾತ್ರ ಬೆಲೆ ಏರಿಕೆ ಆಗಿಲ್ಲ ಎಂದಿದ್ದಾರೆ!

- Advertisement -


ಭಾರತದ
21 ರಾಜ್ಯಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಈಗಾಗಲೇ ಮುಗಿದಿದೆ. ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಇನ್ನು ನಾಲ್ಕು ದಿನಗಳಷ್ಟೇ ಬಾಕಿ ಇವೆ. ರಾಜ್ಯದಲ್ಲಿ ಮತದಾರರ ಒಲವು ಕಾಂಗ್ರೆಸ್‌ ಪರವಾಗಿದೆ ಎಂಬುದು ಈದಿನ.ಕಾಮ್‌ ಸಮೀಕ್ಷೆಯಲ್ಲಿ ಕಂಡುಬಂದಿದೆ. ಇದೇ ಟ್ರೆಂಡ್‌ ಮುಂದುವರೆದರೆ, ಕೈ ಪಡೆ ಸುಮಾರು 20 ಸ್ಥಾನಗಳನ್ನು ಗೆಲ್ಲುವ ಎಲ್ಲ ಸಾಧ್ಯತೆಗಳೂ ಇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಇನ್ನು, ಮೋದಿಯವರ ಹತ್ತು ವರ್ಷಗಳ ಆಡಳಿತದಲ್ಲಿ ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ, ಭ್ರಷ್ಟಾಚಾರ ಹೆಚ್ಚಳವಾಗಿದೆ ಎಂದು ಮತದಾರರು ಹೇಳುತ್ತಿದ್ದಾರೆ.

ಸಮೀಕ್ಷೆಗೆ ಒಳಪಟ್ಟವರಲ್ಲಿ 85.30% ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಅದರಿಂದ ಭಾರೀ ಪರಿಣಾಮ ಎದುರಿಸುವಂತಾಗಿದೆ ಎಂದು ಹೇಳುತ್ತಿದ್ದಾರೆ. ಕೇವಲ 9.16% ಮಂದಿ ಮಾತ್ರ ಬೆಲೆ ಏರಿಕೆ ಆಗಿಲ್ಲ ಎಂದು ಹೇಳಿದ್ದಾರೆ. ಉಳಿದಂತೆ 5.54% ಜನರು ಗೊತ್ತಿಲ್ಲ ಎಂದಿದ್ದಾರೆ.

ಸಮೀಕ್ಷೆ ಒಟ್ಟು

ಅದರಲ್ಲೂ, ಹೆಚ್ಚಿನ ಮಹಿಳೆಯರು ಬೆಲೆ ಏರಿಕೆ ವಿಪರೀತ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಮಹಿಳೆಯರಲ್ಲಿ 85.89% ಮಂದಿ ಬೆಲೆ ಏರಿಕೆಯಾಗಿದೆ ಎಂದಿದ್ದರೆ, 8.05% ಮಂದಿ ಆಗಿಲ್ಲ ಎಂದಿದ್ದಾರೆ. 6.06% ಮಹಿಳೆಯರು ಮಾತ್ರ ಗೊತ್ತಿಲ್ಲ ಎಂದಿದ್ದಾರೆ.

ಪುರುಷರಲ್ಲಿ, 84.81% ಮಂದಿ ಬೆಲೆ ಏರಿಕೆ ಹೆಚ್ಚಾಗಿದೆ ಎಂದಿದ್ದಾರೆ. 10.09% ಮಂದಿ ಪುರುಷರು ಆಗಿಲ್ಲ ಎಂದು ಹೇಳಿದರೆ, 5.10% ಮಂದಿ ಗೊತ್ತಿಲ್ಲ ಎಂದಿದ್ದಾರೆ.

ಬೆಲೆ ಏರಿಕೆ ಬಗ್ಗೆ ಮಾತನಾಡಿದ ಉದ್ಯೋಗಿಗಳು
ಸಮೀಕ್ಷೆ ಉದ್ಯೋಗ

ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಪೈಕಿ ‘ಕೃಷಿ ಕೂಲಿ ಕಾರ್ಮಿಕ ಅಥವಾ ಇತರ ಕೂಲಿ ಕೆಲಸ’ ಮಾಡುತ್ತಿರುವ ಉದ್ಯೋಗಿಗಳು ಬೆಲೆ ಏರಿಕೆ ಹೆಚ್ಚು ಬಾಧಿಸಿದೆ ಎಂದು ಹೇಳಿದ್ದಾರೆ. ಅವರಲ್ಲಿ, 86.97% ಮಂದಿ ಬೆಲೆ ಏರಿಕೆ ಹೆಚ್ಚಾಗಿದೆ ಎಂದಿದ್ದಾರೆ. ಪ್ರತಿ ತಿಂಗಳು 1 ಲಕ್ಷಕ್ಕೂ ಹೆಚ್ಚು ನಿಗದಿತ ಸಂಬಳವಿರುವ ಉದ್ಯೋಗಿಗಳು (ಸರಕಾರಿ ಅಥವಾ ಖಾಸಗಿ) ಸುಮಾರು 16.83% ಮಂದಿ ಬೆಲೆ ಏರಿಕೆ ಆಗಿಲ್ಲ ಎಂದಿದ್ದಾರೆ. ಬೆಲೆ ಏರಿಕೆ ಆಗಿಲ್ಲ ಎಂದವರಲ್ಲಿ ಈ ಉದ್ಯೋಗಿಗಳೇ ಹೆಚ್ಚಿನವರಾಗಿದ್ದಾರೆ.

ಬೆಲೆ ಏರಿಕೆ ಬಗ್ಗೆ ಮಾತನಾಡಿದವರ ವಯಸ್ಸಿನ ಆಧಾರದ ಮೇಲೆ ವರ್ಗೀಕರಣ
ಸಮೀಕ್ಷೆ ವಯಸ್ಸು

ವಯಸ್ಸಿನ ಆಧಾರದಲ್ಲಿ ನೋಡಿದರೆ ಪ್ರತಿಕ್ರಿಯಿಸಿದ ಎಲ್ಲ ವಯೋಮಾನದವರು ಬೆಲೆ ಏರಿಕೆ ಆಗಿದೆ ಎಂದೇ ಹೇಳಿದ್ದಾರೆ. ಆದರೆ, ಈಗಷ್ಟೇ ಶಿಕ್ಷಣ ಮುಗಿಸಿ ಉದ್ಯೋಗದ ಕಡೆಗೆ ಮುಖ ಮಾಡುತ್ತಿರುವ 18ರಿಂದ 25 ವರ್ಷ ವಯಸ್ಸಿನವರಲ್ಲಿ 11.77% ಬೆಲೆ ಏರಿಕೆ ಆಗಿಲ್ಲ ಎಂದಿದ್ದಾರೆ. ಎಲ್ಲ ವಯೋಮಾನದವರಲ್ಲಿ ಬೆಲೆ ಏರಿಕೆ ಆಗಿಲ್ಲ ಎಂದವರಲ್ಲಿ ಈ ವಯೋಮಾನದವರೇ ಹೆಚ್ಚಿನವರಾಗಿದ್ದಾರೆ.

ಬೆಲೆ ಏರಿಕೆ ಬಗ್ಗೆ ಮಾತನಾಡಿದವರ ಶಿಕ್ಷಣದ ಆಧಾರದ ಮೇಲೆ ವರ್ಗೀಕರಣ
ಸಮೀಕ್ಷೆ ಶಿಕ್ಷಣ

ಪ್ರತಿಕ್ರಿಯಿಸಿದವರನ್ನು ಅವರು ಪಡೆದಿರುವ ಶಿಕ್ಷಣದ ಆಧಾರದ ಮೇಲೆ ವರ್ಗೀಕರಿಸಿದಾಗ, ಅನಕ್ಷರಸ್ಥರೂ ಅಥವಾ ಶಾಲೆಗೆ ಹೋಗದವರೂ ಕೂಡ ಬೆಲೆ ಏರಿಕೆ ಆಗಿರುವ ಬಗ್ಗೆ ಅರಿವು ಹೊಂದಿದ್ದಾರೆ. ಬೆಲೆ ಏರಿಕೆ ಹೆಚ್ಚಾಗಿದೆ ಎಂದವರಲ್ಲಿ 7ನೇ ತರಗತಿವರೆಗೆ ಓದಿದ್ದು, 2ನೇ ತರಗತಿ ಪಾಸಾಗದೇ ಇರುವವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಲ್ಲಿ, 86.59% ಮಂದಿ ಬೆಲೆ ಏರಿಕೆ ಬಾಧಿಸಿದೆ ಎಂದಿದ್ದಾರೆ. ಆದರೆ, ಬೆಲೆ ಏರಿಕೆ ಆಗಿಲ್ಲ ಎಂದವರಲ್ಲಿ ವೃತ್ತಿಪರ ಪದವಿ (ಬಿಟೆಕ್, ಎಂಬಿಬಿಎಸ್, ಬಿಎಎಂಎಸ್, ಎಲ್ಎಲ್ ಬಿ, ಪಿಎಚ್ಡಿ) ಪಡೆದವರೇ ಹೆಚ್ಚಿನವರಾಗಿದ್ದಾರೆ. ಅವರಲ್ಲಿ, 20% ಮಂದಿ ಬೆಲೆ ಏರಿಕೆ ಆಗಿಲ್ಲ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಬೆಲೆ ಏರಿಕೆ ಹೆಚ್ಚಾಗಿ ಜನರನ್ನು ಬಾಧಿಸಿದೆ ಎಂದು ಜನರು ಒಪ್ಪಿಕೊಂಡಿದ್ದಾರೆ. ಮೋದಿ ಸರ್ಕಾರವು ಹಣದುಬ್ಬರ – ಬೆಲೆ ಏರಿಕೆಯಲ್ಲಿ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಲಿಂಗ ಸಮಾನತೆ ಸೂಚ್ಯಂಕ: ಐಸ್‌ಲ್ಯಾಂಡ್ ಮೊದಲು, ಭಾರತಕ್ಕೆ 131ನೇ ಸ್ಥಾನ

ಜಿನೀವಾ ಮೂಲದ ವಿಶ್ವ ಆರ್ಥಿಕ ವೇದಿಕೆಯು 2006ರಿಂದ ಈ ಸೂಚ್ಯಂಕವನ್ನು ಸಿದ್ಧಪಡಿಸುತ್ತಿದ್ದು,...

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

ಸುದ್ದಿ ನೋಡಿದ ತಕ್ಷಣ ಪಿಐಎಲ್ ಹಾಕ್ತೀರಾ? – ನಕಲಿ ವೈದ್ಯಕೀಯ ಪದವಿ ಕುರಿತ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ದೇಶದಲ್ಲಿ ಚರ್ಚೆಯಾಗುವ ಸುದ್ದಿಗಳ ಆಧಾರದ ನಿಯಮಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌)...