ಅನ್ನಭಾಗ್ಯ ಯೋಜನೆ | 10 ಕೆ.ಜಿ ಅಕ್ಕಿಯ ಹಣವನ್ನು ಜನರ ಖಾತೆಗೆ ವರ್ಗಾಯಿಸಿ: ಬಿಜೆಪಿ

Date:

Advertisements

ಕಾಂಗ್ರೆಸ್‌ ಗ್ಯಾರಂಟಿಗಳಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆ ಜಾರಿಗೆ ಸಾಕಾಗುವಷ್ಟು ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆ 5 ಕೆ.ಜಿ ಅಕ್ಕಿಗೆ ಹಣ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ, 10 ಕೆ.ಜಿ ಅಕ್ಕಿಯ ಹಣ ನೀಡುವಂತೆ ಬಿಜೆಪಿ ಒತ್ತಾಯಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, “ಮಾನ್ಯ ಸಿದ್ದರಾಮಯ್ಯ ಅವರೇ ಕೊನೆಗೂ 5 ಕೆ.ಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಒಪ್ಪಿಕೊಂಡಿರುವುದಕ್ಕೆ ಧನ್ಯವಾದಗಳು. ನಿಮ್ಮ ಎಟಿಎಂ ಸರ್ಕಾರಕ್ಕೆ ಮರ್ಯಾದೆ, ವಚನಬದ್ಧತೆ ಇರುವುದೇ ಆದರೆ, ನೀವು ಕೊಡಬೇಕಿರುವುದು ಕೇವಲ 5 ಕೆ.ಜಿಯ ಅಕ್ಕಿಯ ಹಣವನ್ನಲ್ಲ, 10 ಕೆ.ಜಿ ಅಕ್ಕಿಯನ್ನು ರಾಜ್ಯ ಸರ್ಕಾರ ಪೂರೈಸಲಿದೆ ಎಂದು ಎದೆ ಬಡಿದುಕೊಂಡಂತೆ, 10 ಕೆಜಿಯ ಸಂಪೂರ್ಣ ಹಣವನ್ನು ಜನರ ಖಾತೆಗಳಿಗೆ ವರ್ಗಾಯಿಸಿ. ಕೊಟ್ಟ ಮಾತು ತಪ್ಪಿ ನಡೆದರೆ ಮೆಚ್ಚಲಾರರು ಕನ್ನಡಿಗರು” ಎಂದು ಕಿಡಿಕಾರಿದೆ.

Screenshot 2023 06 28 154101

ಅಕ್ಕಿ ಬದಲು ಹಣ: ಕೆ ಎಚ್‌ ಮುನಿಯಪ್ಪ

Advertisements

“ಅಕ್ಕಿ ಕೊರತೆಯಿಂದಾಗಿ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಕೊರತೆಯಾಗುವ ಅಕ್ಕಿಯ ಬದಲಾಗಿ ಹಣ ನೀಡಲಾಗುವುದು” ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ ಎಚ್‌ ಮುನಿಯಪ್ಪ ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಬಿಗ್ ಬ್ರೇಕಿಂಗ್‌ | ಅನ್ನಭಾಗ್ಯ: ಅಕ್ಕಿ ಬದಲು ಹಣ ನೀಡಲು ಸರ್ಕಾರ ನಿರ್ಧಾರ

“ಅಕ್ಕಿ ಬದಲಾಗಿ ಹಣ ನೀಡುತ್ತೇವೆ. ಒಂದು ಕೆ.ಜಿ ಅಕ್ಕಿಗೆ 34 ರೂ. ನಿಗದಿ ಮಾಡಲಾಗಿದೆ. ಪಡಿತರದಾರರಿಗೆ ತಲಾ ಐದು ಕೆ.ಜಿ ಅಕ್ಕಿ ನೀಡಲಾಗುತ್ತದೆ. ಉಳಿದ ಐದು ಕೆ.ಜಿ ಅಕ್ಕಿಯ ಬದಲಿಗೆ, ಪ್ರತಿ ಕೆ.ಜಿಗೆ 34 ರೂ.ನಂತೆ ಹಣ ನೀಡುತ್ತೇವೆ. ಹಣ ನೀಡುವ ವ್ಯವಸ್ಥೆಯು ಅಕ್ಕಿ ಸಂಗ್ರಹವಾಗುವವರೆಗೂ ಚಾಲ್ತಿಯಲ್ಲಿರುತ್ತದೆ” ಎಂದು ಮಾಹಿತಿ ನೀಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X