ವಿಧಾನಸಭೆಯಲ್ಲಿ ನೀಲಿ ಚಿತ್ರ ವೀಕ್ಷಿಸಿ ಸಿಕ್ಕಿಬಿದ್ದ ಬಿಜೆಪಿ ಶಾಸಕ

Date:

Advertisements

ವಿಧಾನಸಭೆ ಅಧಿವೇಶನ ನಡೆಯುತ್ತಿರುವ ವೇಳೆಯಲ್ಲೇ ಬಿಜೆಪಿ ಶಾಸಕ ನೀಲಿ ಚಿತ್ರ (ಪೋರ್ನ್‌) ವೀಕ್ಷಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

ತ್ರಿಪುರ ರಾಜ್ಯ ವಿಧಾನಸಭೆಯ ಅಧಿವೇಶನದ ವೇಳೆ ಗುರುವಾರ, ಬಾಗ್‌ಬಾಸಾ ಕ್ಷೇತ್ರದ ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್, ಪೋರ್ನ್ ವೀಕ್ಷಣೆಯಲ್ಲಿ ತೊಡಗಿದ್ದರು. ಇದನ್ನ ಗಮನಿಸಿದ ಗ್ಯಾಲರಿಯಲ್ಲಿ ಕುಳಿತಿದ್ದವರು ತಮ್ಮ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ  ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಧಾನಸಭೆ ಕಲಾಪದ ನಡುವೆಯೇ ತಮ್ಮ ಮೊಬೈಲ್‌ನಲ್ಲಿ ಆಶ್ಲೀಲ ವಿಡಿಯೋ ವೀಕ್ಷಣೆಯಲ್ಲಿ ಮುಳುಗಿದ್ದ ಜದಾಬ್ ಲಾಲ್ ನಾಥ್, ಹಲವು ವಿಡಿಯೋಗಳನ್ನು ಸ್ಕ್ರಾಲ್ ಮಾಡುತ್ತಿರುವುದು ಮತ್ತು ಇದೇ ವೇಳೆ ಸ್ಪೀಕರ್ ಬಿಸ್ವಾ ಬಂಧು ಸೇನ್ ಕಲಾಪವನ್ನು ನಿಯಂತ್ರಿಸುವ ಮಾತುಗಳು ವೈರಲ್‌ ವಿಡಿಯೋದಲ್ಲಿದೆ.

Advertisements

ಈ ಸುದ್ದಿ ಓದಿದ್ದೀರಾ?: ಎನ್‌ಕೌಂಟರ್‌ ಪ್ರಕರಣದಲ್ಲಿ ಮೋದಿಯನ್ನು ಸಿಲುಕಿಸಲು ಸಿಬಿಐ ಒತ್ತಡವಿತ್ತು: ಅಮಿತ್‌ ಶಾ

ಬಿಜೆಪಿ ಶಾಸಕನ ಕೃತ್ಯಕ್ಕೆ ತರಹಾವೇರಿ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಇದೊಂದು  ನಾಚಿಕೆಗೇಡಿನ ಸಂಗತಿ ಎಂದು ನೆಟ್ಟಿಗರು ಉಗಿದಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ, ಶಾಸಕ ಜದಾಬ್ ಲಾಲ್ ನಾಥ್‌ಗೆ ಶೋಕಾಸ್‌ ನೋಟಿಸ್‌ ನೀಡಿದೆ.

ಉತ್ತರ ತ್ರಿಪುರಾ ಜಿಲ್ಲೆಯ ಬಾಗ್‌ಬಾಸಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜದಾಬ್ ಲಾಲ್ ನಾಥ್, ಸಿಪಿಐಎಂನ ಬಿಜಿತಾ ನಾಥ್ ಅವರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ತ್ರಿಪುರಾ ಬಿಜೆಪಿ ರಾಜ್ಯಾಧ್ಯಕ್ಷ ರಾಜೀಬ್ ಭಟ್ಟಾಚಾರ್ಯ, “ಘಟನೆ ಕುರಿತು ವಿವರಣೆ ಕೇಳಿ ಶಾಸಕರಿಗೆ ಪಕ್ಷದ ವತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಶಾಸಕರ ಪ್ರತಿಕ್ರಿಯೆಯಿಂದ ತೃಪ್ತಿಕರವಾಗಿರದಿದ್ದಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಈ ವಿಷಯವನ್ನು ಸರಿಯಾಗಿ ತನಿಖೆ ಮಾಡಬೇಕಾಗಿದೆ” ಎಂದಿದ್ದಾರೆ.

ಸದನದಲ್ಲಿ ಸದಸ್ಯರು ನೀಲಿ ಚಿತ್ರ ವೀಕ್ಷಿಸಿ ಸಿಕ್ಕಿಬೀಳುತ್ತಿರುವುದು ಇದು ಮೊದಲೇನಲ್ಲ. 2012 ಫೆಬ್ರವರಿ 7ರಂದು ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಾಗಿದ್ದ ಲಕ್ಷ್ಮಣ ಸವದಿ, ಸಿಸಿ ಪಾಟೀಲ ಹಾಗೂ ಕೃಷ್ಣ ಪಾಲೇಮಾರ್ ಕಲಾಪ ನಡೆಯುತ್ತಿದ್ದ ವೇಳೆಯೇ ಮೊಬೈಲ್‌ನಲ್ಲಿ ಹಸಿ ಬಿಸಿ ದೃಶ್ಯ ವೀಕ್ಷಿಸುವುದರಲ್ಲಿ ತಲ್ಲೀನರಾಗಿದ್ದರು. ಇದು ದೇಶಾದ್ಯಂತ ಭಾರಿ ಸುದ್ದಿಯಾಗಿತ್ತು. ಇದಾದ ಬಳಿಕ 2021ರಲ್ಲಿ ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್‌ ಎಂಎಲ್ ಸಿ ಪ್ರಕಾಶ್ ರಾಥೋಡ್, ತಮ್ಮ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿ ಸುದ್ದಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X