ಭಾರತ-ಪಾಕ್ ಕದನ ವಿರಾಮದ ಬಗ್ಗೆ 13 ಬಾರಿ ‘ತುತ್ತೂರಿ ಊದಿದ’ ಟ್ರಂಪ್; ಪ್ರಧಾನಿ ಪ್ರತಿಕ್ರಿಯೆ ಯಾವಾಗ: ಕಾಂಗ್ರೆಸ್ ಪ್ರಶ್ನೆ

Date:

Advertisements

ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದ ಮಾಡಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 13 ಬಾರಿ ಸಾರ್ವಜನಿಕವಾಗಿ ತುತ್ತೂರಿ ಊದಿದ್ದಾರೆ. ಆದರೆ ಟ್ರಂಪ್ ಹೇಳಿಕೆಗಳ ಬಗ್ಗೆ ನಮ್ಮ ಪ್ರಧಾನಿ ನರೇಂದ್ರ ಮೋದಿ ಯಾವಾಗ ಮಾತನಾಡುವುದು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪಾಕಿಸ್ತಾನ ಮೂಲದ ಭಯೋತ್ಪಾದಕರು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ ಸುಮಾರು 26 ಪ್ರವಾಸಿಗರನ್ನು ಕೊಂದ ಬಳಿಕ ಭಾರತವು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ 100ಕ್ಕೂ ಅಧಿಕ ಉಗ್ರರ ಹತ್ಯೆ ಮಾಡಿದೆ.

ಇದನ್ನು ಓದಿದ್ದೀರಾ? ಭಾರತ ಪಾಕಿಸ್ತಾನ ಕದನ ವಿರಾಮ | ಡೊನಾಲ್ಡ್ ಟ್ರಂಪ್ ನಿಜವಾದ ‘ವಾರ್ ರುಕ್ವಾ ದೀ ಪಾಪಾ’ ಎಂದ ನೆಟ್ಟಿಗರು

Advertisements

ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿ ದಾಳಿ ಪ್ರತಿದಾಳಿಗಳು ನಿರಂತರವಾಗಿ ನಡೆಯುತ್ತಲೇ ಇದ್ದವು. ಯುದ್ಧದ ಸ್ವರೂಪ ಪಡೆಯುತ್ತಿದ್ದಂತೆ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದ ಮಾಡಿಕೊಂಡಿದೆ. ಆದರೆ ವ್ಯಾಪಾರ ನಿಲ್ಲಿಸುವ ಬೆದರಿಕೆ ಹಾಕಿ ಈ ಒಪ್ಪಂದವನ್ನು ತಾನೇ ಮಾಡಿಸಿರುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಹಲವು ಬಾರಿ ಹೇಳಿದ್ದಾರೆ. ಈ ಹೇಳಿಕೆಯನ್ನು ಭಾರತ ನಿರಾಕರಿಸಿದೆ. ಆದರೂ ಟ್ರಂಪ್ ಬೇರೆ ಬೇರೆ ದೇಶಗಳಿಗೆ ಭೇಟಿ ನೀಡುವಾಗ ಇದೇ ಹೇಳಿಕೆ ಪುನರುಚ್ಚರಿಸಿದ್ದಾರೆ. ಆದರೆ ಪ್ರಧಾನಿ ಮೋದಿ ಮಾತ್ರ ಈ ಹೇಳಿಕೆಗೆ ಪ್ರತ್ಯುತ್ತರ ನೀಡಿಲ್ಲ.

ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಇಂದು, ಅಧ್ಯಕ್ಷ ಟ್ರಂಪ್ 79 ವರ್ಷಗಳಿಗೆ ಕಾಲಿಡುತ್ತಿದ್ದಾರೆ. 2025ರ ಮೇ 10ರಿಂದ ಜೂನ್ 13ರ ನಡುವಿನ 34 ದಿನಗಳಲ್ಲಿ ಮೂರು ವಿಭಿನ್ನ ದೇಶಗಳಲ್ಲಿ ಟ್ರಂಪ್ ಅವರು ವಿಭಿನ್ನ ಸಂದರ್ಭಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದ ಮಾಡಿದ್ದು ತಾನೇ ಎಂದು ಸಾರ್ವಜನಿಕವಾಗಿ ಘೋಷಿಸಿದ್ದಾರೆ” ಎಂದು ಹೇಳಿದ್ದಾರೆ.

“ಟ್ರಂಪ್ ಅವರು ಎರಡೂ ದೇಶಗಳ ಮೇಲೆ ಸಮಾನವಾಗಿ ಹೊಗಳಿಕೆಯ ಸುರಿಮಳೆಗೈಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೇ, ನೀವು ಯಾವಾಗ ಟ್ರಂಪ್ ಅವರ ಈ ಹೇಳಿಕೆ ಬಗ್ಗೆ ಮಾತನಾಡುವುದು” ಎಂದು ಎಕ್ಸ್ ಪೋಸ್ಟ್‌ನಲ್ಲಿ ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಭಾರತ-ಪಾಕ್ ಸಂಘರ್ಷ | ನೀವು ನಿಲ್ಲಿಸದಿದ್ದರೆ ಯಾವುದೇ ವ್ಯಾಪಾರ ಮಾಡಲ್ಲ ಎಂದಿದ್ದೆವು: ಡೊನಾಲ್ಡ್ ಟ್ರಂಪ್

ಇನ್ನು ಜೈರಾಮ್ ರಮೇಶ್ ಅವರು ಟ್ರಂಪ್ ಹೇಳಿಕೆಗಳನ್ನು ನೀಡಿದ ಸಂದರ್ಭಗಳ ಪಟ್ಟಿ ಮತ್ತು ವಿವರಗಳನ್ನೂ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅಮೆರಿಕ ಅಧ್ಯಕ್ಷರ ಹೇಳಿಕೆ ಮತ್ತು ಮಾಧ್ಯಮ ವರದಿಗಳ ಲಿಂಕ್‌ಗಳನ್ನು ಸೇರಿಸಲಾಗಿದೆ.

ಇನ್ನೊಂದು ಟ್ವೀಟ್‌ನಲ್ಲಿ ಜೈರಾಮ್ ಅವರು, “ನಮ್ಮ ದೇಶದಲ್ಲಿ ಅಹಮದಾಬಾದ್ ವಿಮಾನ ದುರಂತ ನಡೆದ ಶೋಕದಲ್ಲಿ ನಾವಿರುವಾಗ ಅಧ್ಯಕ್ಷ ಟ್ರಂಪ್ ಭಾರತ-ಪಾಕಿಸ್ತಾನ ಕದನ ವಿರಾಮ ತಾವೇ ಮಾಡಿಸಿದ್ದು ಎಂದು ಒಂಬತ್ತನೇ ಬಾರಿಗೆ ಹೇಳಿಕೊಂಡಿದ್ದಾರೆ. ವಾಷಿಂಗ್ಟನ್ ಡಿಸಿ ಕೆನೆಡಿ ಸೆಂಟರ್‌ನಲ್ಲಿ ಈ ಭಾಷಣ ಮಾಡಲಾಗಿದೆ. ಆದರೆ ನಮ್ಮ ಪ್ರಧಾನಿ(ಮೋದಿ) ಈ ಹೇಳಿಕೆಗಳ ಬಗ್ಗೆ ತನ್ನ ಮೌನ ಮುಂದುವರೆಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X