ತುಮಕೂರು | ಎಚ್‌ಡಿಕೆ ಮತ್ತೊಮ್ಮೆ ಸಿಎಂ ಆಗಬೇಕು; ಮಲೆಮಹದೇಶ್ವರಕ್ಕೆ ಜೆಡಿಎಸ್ ಕಾರ್ಯಕರ್ತರ ಪಾದಯಾತ್ರೆ

Date:

ಎಚ್.ಡಿ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕೆಂದು ಬಯಸಿರುವ ಮಧುಗಿರಿ ತಾಲೂಕಿನ ಮೂವರು ಜೆಡಿಎಸ್‌ ಕಾರ್ಯಕರ್ತರು ಮಲೈಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ತಾಲ್ಲೂಕಿನ ಶ್ರಾವಂಡನಹಳ್ಳಿ ಎಸ್.ಎ ಅಶೋಕ್, ಜಗದೀಶ್ ಹಾಗೂ ಮೂರ್ತಿ ಶ್ರಾವಂಡನಹಳ್ಳಿಯಿಂದ ಮಲೈಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿರುವ ಕಾರ್ಯಕರ್ತರು. ಎಚ್‌.ಡಿ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಬೇಕು. ಮಧುಗಿರಿ ಶಾಸಕ ವೀರಭದ್ರಯ್ಯ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಬೇಕು. ಗೌರಿಬಿದನೂರಿನ ಜೆಡಿಎಸ್ ಅಭ್ಯರ್ಥಿ ನರಸಿಂಹಮೂರ್ತಿ ಗೆಲುವು ಸಾಧಿಸಬೇಕೆಂದು ಹರಕೆ ಹೊತ್ತಿರುವ ಮೂವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಮಾರ್ಚ್‌ 23ರಿಂದ ಪಾದಯಾತ್ರೆ ಹೊರಟಿರುವ ಮೂವರು ಮಂಡ್ಯ ಜಿಲ್ಲೆಯ ಭಾರತೀನಗರ ತಲುಪಿಸಿದ್ದಾರೆ. ಅವರನ್ನು ಅಲ್ಲಿನ ಸ್ಥಳೀಯ ಜೆಡಿಎಸ್ ಕಾರ್ಯಕರ್ತರು ಸ್ವಾಗತಿಸಿ ಅಭಿನಂದಿಸಿ ಬೀಳ್ಕೊಟ್ಟಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಯುಗಾದಿ ಹಬ್ಬದ ಮಾರನೆಯ ದಿನದಿಂದ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ದಾರಿಯುದ್ದಕ್ಕೂ ನಮ್ಮ ಪಾದಯಾತ್ರೆಗೆ ಹಲವರು ಶುಭ ಹಾರೈಸುತ್ತಿದ್ದಾರೆ. ಎಲ್ಲರ ಬೆಂಬಲ ಸಂತಸ ತಂದಿದೆ” ಎಂದು ಪಾದಯಾತ್ರೆಗಳು ಹರ್ಷ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಆಡಳಿತ ಪಕ್ಷಕ್ಕೆ ಮತ್ತೊಂದು ಶಾಕ್‌: ಕೂಡ್ಲಿಗಿ ಬಿಜೆಪಿ ಶಾಸಕ ಎನ್‌ ವೈ ಗೋಪಾಲಕೃಷ್ಣ ಕಾಂಗ್ರೆಸ್‌ ಕಡೆ ಮುಖ

“ಎಚ್.ಡಿ.ಕುಮಾರಸ್ವಾಮಿ ತಮ್ಮ ಅವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದಾರೆ. ಇದುವರೆವಿಗೂ ಅಂತಹ ಆಡಳಿತವನ್ನು ಯಾವ ಮುಖ್ಯಮಂತ್ರಿಗಳು ನೀಡಿಲ್ಲ. ಲಾಟರಿ, ಸಾರಾಯಿ ನಿಷೇಧ, ಬಡವರಿಗೆ, ನಿರ್ಗತಿಕರಿಗೆ ಸಹಾಯ ಮಾಡುತ್ತ ಉತ್ತಮ ಆಡಳಿತ ನೀಡಿ ಜನರ ಮನಸ್ಸನ್ನು ಗೆದ್ದಿದ್ದಾರೆ. ಇವರು ಆಯ್ಕೆಗೊಂಡರೆ ರಾಜ್ಯ ಅಭಿವೃದ್ದಿಗೊಳ್ಳುತ್ತದೆ ಎಂಬ ಉದ್ದೇಶದಿಂದ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ” ಎಂದು ಎಸ್.ಎ ಅಶೋಕ್ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಭ್ರಷ್ಟಾಚಾರ ಲೀಗಲೈಜ್ ಮಾಡಿದ್ದೇ ಬಿಜೆಪಿ: ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಿಡಿ

ಭ್ರಷ್ಟಾಚಾರವನ್ನು ಲೀಗಲೈಜ್ ಮಾಡಿದ್ದು, ಬಿಜೆಪಿಯವರು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ...

ತುಮಕೂರು | ಪ್ರಧಾನಿ ಆಗಲು ಯೋಗ್ಯರಾದ ಸಾಕಷ್ಟು ಮುಖಂಡರು ಕಾಂಗ್ರೆಸ್‌ನಲ್ಲಿ ಇದ್ದಾರೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗಲು ಯಾರಿದ್ದಾರೆ? ನರೇಂದ್ರಮೋದಿ ಬಿಟ್ಟರೆ ಪ್ರಧಾನಿ ಆಗುವ ಅರ್ಹತೆ ಯಾರಿಗೂ...

ಹಾಸನ ಯುವ ನಾಯಕನ ಕಾಮಕೃತ್ಯದ ಪೆನ್‌ಡ್ರೈವ್ ಆರೋಪ; ಮೌನ ಮುರಿಯದ ಮಾಜಿ ಪ್ರಧಾನಿ

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪೆನ್‌ಡ್ರೈವ್ ಭಾರೀ ಸುದ್ದಿ ಮಾಡ್ತಾ...

ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಹೋರಾಟ ಸಮಿತಿ ನಿರ್ಧಾರ

ಬೆಂಗಳೂರು: ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ...