ತುಮಕೂರು | ಸಿದ್ದರಾಮಯ್ಯ ಇರುವವರೆಗೂ ನಾನು ಕಾಂಗ್ರೆಸ್‌ನಲ್ಲಿ ಇರುತ್ತೇನೆ: ‌ಶಾಸಕ ಕೆ ಎನ್ ರಾಜಣ್ಣ

Date:

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದು, ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವವರೆಗೆ, ನನ್ನ ಭವಿಷ್ಯದ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಅವರು ಪಕ್ಷದಲ್ಲಿರುವವರೆಗೂ ನಾನು ನನ್ನ ಪ್ರೀತಿ ಮತ್ತು ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ ಎಂದು ಮಾಜಿ ಸಹಕಾರ ಸಚಿವ ಹಾಗೂ ಶಾಸಕ ಕೆ ಎನ್ ರಾಜಣ್ಣ ಸ್ಪಷ್ಟಪಡಿಸಿದ್ದಾರೆ.

- Advertisement -

ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಮತ್ತು ಕೆ ಎನ್ ರಾಜಣ್ಣ ನಡುವಿನ ರಾಜಕೀಯ ಜಟಾಪಟಿ ಮುಂದುವರೆಯುತ್ತಿದಂತೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಬುಧವಾರ ಈ ರೀತಿಯ ಸ್ಪಷ್ಟತೆ ನೀಡಿದ್ದು, ಸಚಿವ ಸ್ಥಾನದಿಂದ ವಜಾಗೊಂಡ ನಂತರ ರಾಜಣ್ಣ ಬಿಜೆಪಿ ಸೇರುತ್ತಾರೆಂಬ ಊಹಾಪೋಹಗಳಿಗೂ ತೆರೆ ಎಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ರಾಹುಲ್ ಗಾಂಧಿ ನಡೆಸುತ್ತಿರುವ ಮತ ಕಳ್ಳತನದ ಅಭಿಯಾನವನ್ನು ನಾನು ಬೆಂಬಲಿಸುತ್ತೇನೆ. ನನ್ನನ್ನು ಮತ್ತೆ ಸಚಿವರನ್ನಾಗಿ ಮಾಡಬೇಕೆಂದು ಒತ್ತಾಯಿಸಲು ನನ್ನ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಗೆ ಭೇಟಿ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ” ಎಂದು ಹೇಳಿದರು.

“ನಾನು ಏಕೆ ಬಿಜೆಪಿ ಸೇರಬೇಕು? ಬಿಜೆಪಿ ಸೇರಲು ಬಯಸುವವರು ಹಾಗೆ ಮಾಡಲಿ. ನಾನು ಯಾವುದೇ ಪಕ್ಷದಿಂದ ಸ್ಪರ್ಧಿಸಿದರೂ ಗೆಲ್ಲುವ ಶಕ್ತಿ ನನಗಿದೆ. ನಾನು ಏಕೆ ಕಾಂಗ್ರೆಸ್ ತ್ಯಜಿಸಲಿ? ಪಕ್ಷ ನನಗೆ ಏನು ಮಾಡಿದೆ? ಪ್ರತಿಯೊಂದು ಕ್ಷೇತ್ರದಲ್ಲಿ(ತುಮಕೂರು ಜಿಲ್ಲೆಯಲ್ಲಿ) ಯಾರನ್ನಾದರೂ ಆಯ್ಕೆ ಮಾಡುವ ಅಥವಾ ಸೋಲಿಸುವ ಶಕ್ತಿ ನನಗಿದೆ” ಎಂದು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.

“ರಾಜಣ್ಣ ಅವರು ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದು, ಕೇಸರಿ ಪಕ್ಷಕ್ಕೆ ಸೇರುತ್ತಾರೆ. ರಾಜಣ್ಣ ಅವರ ಮಗ ಎಂಎಲ್‌ಸಿ ರಾಜೇಂದ್ರ ಅವರು ತಮ್ಮ ತಂದೆಯವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದರ ಹಿಂದೆ ಪಿತೂರಿ ಇದೆ” ಎಂದು ಬಾಲಕೃಷ್ಣ ಮಂಗಳವಾರ ಆರೋಪಿಸಿದ್ದರು.

“ರಾಜಣ್ಣ ಮತ್ತು ರಾಜೇಂದ್ರ ಅವರು ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಮೇಲೆ ಹೊರೆ ಹಾಕುತ್ತಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕಾರವಾರ | ಭಾರತೀಯ ಸೇನೆ ಸೇರಲು ಬಯಸುವ ಹಿಂದುಳಿದ ವರ್ಗದ ಯುವಕರಿಗೆ ಉಚಿತ ತರಬೇತಿ

“ರಾಹುಲ್ ಗಾಂಧಿ ಅವರನ್ನು ಪರೋಕ್ಷವಾಗಿ ಟೀಕಿಸುವ ಮೂಲಕ ರಾಜಣ್ಣ ಕೋಪಗೊಂಡರು, ಎಐಸಿಸಿ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನೂ ಟೀಕಿಸಿದರು ಮತ್ತು ಅದಕ್ಕೆ ಬೆಲೆ ತೆತ್ತರು” ಎಂದು ಹೇಳಿದರು.

ಇದರ ನಡುವೆ ಮಾಜಿ ಸಂಸದ ಡಿ ಕೆ ಸುರೇಶ್ ಬುಧವಾರ ರಾಜಣ್ಣ ರಾಷ್ಟ್ರೀಯ ನಾಯಕರಾಗಿದ್ದಾರೆಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕೆವೈಸಿಗಾಗಿ ರಾತ್ರಿ ಸರತಿ ಸಾಲು: ಜನರ ಪರದಾಟ

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಜನರು ಇಡೀ ರಾತ್ರಿ ನ್ಯಾಯಬೆಲೆ ಅಂಗಡಿ...

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...