ಡಿಸಿಎಂ ಹುದ್ದೆಯ ವರದಿ ತಳ್ಳಿಹಾಕಿದ ಉದಯನಿಧಿ; ಎಲ್ಲ ಮಂತ್ರಿಗಳು ಉಪಮುಖ್ಯಮಂತ್ರಿಗಳೇ ಎಂದ ಸಿಎಂ ಪುತ್ರ

Date:

Advertisements

ತಮಿಳುನಾಡು ಸಚಿವ, ಡಿಎಂಕೆ ಯುವ ಘಟಕದ ಕಾರ್ಯದರ್ಶ ಉದಯನಿಧಿ ಸ್ಟಾಲಿನ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗುತ್ತದೆ ಎಂಬ ವರದಿ, ಊಹಾಪೋಹಗಳು ಹರಿದಾಡುತ್ತಿವೆ. ಈ ಬಗ್ಗೆ ಪ್ರಿಕ್ರಿಯಿಸಿರುವ ಉದಯನಿಧಿ ಎಲ್ಲ ವರದಿಗಳನ್ನು ತಳ್ಳಿ ಹಾಕಿದ್ದಾರೆ. ತಮಿಳುನಾಡು ಸಚಿವ ಸಂಪುಟದಲ್ಲಿರುವ ಎಲ್ಲ ಸಚಿವರೂ ಉಪಮುಖ್ಯಮಂತ್ರಿಗಳೇ ಆಗಿದ್ದಾರೆ ಎಂದು ಹೇಳಿದ್ದಾರೆ.

ಶನಿವಾರ ಮಾತನಾಡಿದ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ, “ಉಪ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಅನೇಕ ಸುದ್ದಿ ವರದಿಗಳು ಕಂಡುಬರುತ್ತಿವೆ. ಆದರೆ, ನಮ್ಮ ಸರ್ಕಾರದ ಎಲ್ಲ ಮಂತ್ರಿಗಳು ಉಪ ಮುಖ್ಯಮಂತ್ರಿಗಳೆಂದು ನಾನು ಈ ಹಿಂದೆಯೇ ಪತ್ರಿಕೆಗಳಿಗೆ ಹೇಳಿದ್ದೇನೆ. ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಯುವ ಘಟಕದ ಕಾರ್ಯದರ್ಶಿ ಹುದ್ದೆಯೇ ನನ್ನ ನೆಚ್ಚಿನ ಹುದ್ದೆ” ಎಂದು ಹೇಳಿದ್ದಾರೆ.

“ಕಳೆದ ಚುನಾವಣೆಯಲ್ಲಿ ಕೆಲಸ ಮಾಡಿದಂತೆ, 2016ರ ಚುನಾವಣೆಯಲ್ಲಿಯೂ ಕೆಲಸ ಮಾಡಿ ಗೆಲುವು ಸಾಧಿಸಬೇಕು ಎಂಬುದೇ ನಮ್ಮ ಗುರಿ. ಯಾವುದೇ ಮೈತ್ರಿ ನಮ್ಮ ಪ್ರತಿಸ್ಪರ್ಧಿಯಾಗಿ ಬಂದರೂ, ನಮ್ಮ ಡಿಎಂಕೆ ಮೈತ್ರಿಕೂಟವೇ ಚುನಾವಣೆಯಲ್ಲಿ ಜಯಭೇರಿ ಬಾರಿಸುತ್ತದೆ. ಎಂ.ಕೆ ಸ್ಟಾಲಿನ್ ಅವರು ಮತ್ತೆ ತಮಿಳುನಾಡಿನ ಮುಖ್ಯಮಂತ್ರಿ ಆಗಲಿದ್ದಾರೆ” ಎಂದು ಹೇಳಿದ್ದಾರೆ.

Advertisements

“ಪಕ್ಷಕ್ಕೆ ಪ್ರತಿ ಮನೆಯಿಂದ ಯುವ ಕಾರ್ಯಕರ್ತರನ್ನು ಸೇರಿಸಬೇಕೆಂಬುದು ನಮ್ಮ ಉದ್ದೇಶವಾಗಿದೆ. ಅದಕ್ಕಾಗಿ, ಕಾರ್ಯಕರ್ತರು ಹೆಚ್ಚಿನ ಕೆಲಸ ಮಾಡಬೇಕು. ರಾಜ್ಯಾಧ್ಯಂತ ಸಕ್ರಿಯವಾಗಿ ಸಂಚರಿಸಿ, ಯುವ ಘಟಕಕ್ಕೆ ಜಿಲ್ಲಾ ಮಟ್ಟದ ಪದಾಧಿಕಾರಿಗಳನ್ನು ನೇಮಿಸಲಾಗುತ್ತಿದೆ” ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X