- ಅನುಮತಿ ಪಡೆಯದೇ ಬ್ಯಾನರ್ ಅಳವಡಿಕೆ
- ತೆರವುಗೊಳಿಸಿದ ಚುನಾವಣಾ ಅಧಿಕಾರಿಗಳು
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹಾಗೂ ಆಪ್ ಅಭ್ಯರ್ಥಿ ಪ್ರಭಾಕರ ಪೂಜಾರಿ ತೊಟ್ಟಂ ವಿರುದ್ಧ ದೂರು ದಾಖಲಾಗಿದೆ.
ಅನುಮತಿ ಪಡೆಯದೇ ಉಡುಪಿ ಜಿಲ್ಲೆ ಬ್ರಹ್ಮಗಿರಿ ಸಮೀಪದ ನಾಯರ್ಕೆರೆ ಬಳಿ ಇರುವ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಭಾವಚಿತ್ರವಿರುವ ಬ್ಯಾನರ್ ಹಾಗೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಗಳ ಫ್ಲೆಕ್ಸ್ಗಳನ್ನು ಅಳವಡಿಸಲಾಗಿತ್ತು.
ಮತ್ತೊಂದು ಕಡೆ ಕಲ್ಸಂಕ ಜಂಕ್ಷನ್ ಬಳಿ ಇರುವ ಆಮ್ ಆದ್ಮಿ ಕಚೇರಿಯಲ್ಲಿ ಪೂರ್ವಾನುಮತಿ ಪಡೆಯದೆ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಕೇಜ್ರಿವಾಲ್ ಅವರ ಭಾವಚಿತ್ರ ಮತ್ತು ಪಕ್ಷದ ಫ್ಲೆಕ್ಸ್ಗಳನ್ನು ಅಳವಡಿಸಲಾಗಿತ್ತು.
ಈ ಸುದ್ದಿ ಓದಿದ್ದೀರಾ? : ಉತ್ತರ ಕರ್ನಾಟಕ | ಬಿಜೆಪಿ, ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿಗಳು ಜೆಡಿಎಸ್ನತ್ತ
ಎರಡು ಕಡೆ ಇದ್ದ ಫ್ಲೆಕ್ಸ್ ಗಳನ್ನು ಅಳವಡಿಸಲು ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ. ಇದರ ಬಗ್ಗೆ ಗಮನ ಹರಿಸಿದ ಫ್ಲೈಯಿಂಗ್ ಸ್ಕ್ವಾಡ್ ತಂಡದ ಅಧಿಕಾರಿ ರೋಶನ್ ಕುಮಾರ್ ಚುನಾವಣಾಧಿಕಾರಿಗೆ ದೂರು ನೀಡಿದರು.
ಪ್ರಕರಣ ದಾಖಲಿಸಿಕೊಂಡ ಚುನಾವಣಾ ಕರ್ತವ್ಯನಿರತ ಅಧಿಕಾರಿಗಳು ಕಾಂಗ್ರೆಸ್ ಕಚೇರಿಗೆ ಹಾಗೂ ಆಪ್ ಕಚೇರಿಗೆ ಭೇಟಿ ನೀಡಿ ಫ್ಲೆಕ್ಸ್ ಹಾಗೂ ಕಟೌಟ್ಗಳನ್ನು ತೆರವುಗೊಳಿಸಿದರು.