ಜು.3ಕ್ಕೆ ಕೇಂದ್ರ ಮಂತ್ರಿಮಂಡಲ ಸಭೆ; ಸಂಪುಟ ಪುನಾರಚನೆ ಸಾಧ್ಯತೆ

Date:

Advertisements

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಜುಲೈ 3ಕ್ಕೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಮಂತ್ರಿಮಂಡಲದ ಸಭೆ ಕರೆದಿದ್ದು, ಸಂಪುಟ ಪುನಾರಚನೆ ಆಗುವ ಸಾಧ್ಯತೆಯಿದೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಹತ್ವದ ಮಾತುಕತೆ ನಡೆಸಿದ್ದಾರೆ. ಸೆಪ್ಟೆಂಬರ್‌ನಲ್ಲಿ ಜಿ20 ಶೃಂಗಸಭೆಯನ್ನು ಆಯೋಜಿಸುವ ನವದೆಹಲಿಯ ಪ್ರಗತಿ ಮೈದಾನದಲ್ಲಿರುವ ಕನ್ವೆಷನ್‌ ಸಭಾಂಗಣದಲ್ಲಿ ಮಂತ್ರಿ ಮಂಡಲ ಸಭೆ ನಡೆಯಲಿದೆ. ಜುಲೈ 3ನೇ ವಾರದಿಂದ ಮಳೆಗಾಲದ ಅಧಿವೇಶನ ಆರಂಭಗೊಳ್ಳಲಿದೆ. ಇದಕ್ಕೂ ಮೊದಲು ಕೇಂದ್ರ ಸಂಪುಟ ಪುನಾರಚನೆ ಆಗುವ ಸಾಧ್ಯತೆ ಇದೆ.

ಚುನಾವಣೆ ದೃಷ್ಟಿಯಿಂದ ಕೆಲ ಪ್ರಮುಖ ನಾಯಕರಿಗೆ ಮಣೆಹಾಕಲು ಕೇಂದ್ರ ಮುಂದಾಗಿದೆ. ಹೀಗಾಗಿ ಯಾರಿಗೆ ಕೊಕ್, ಯಾರಿಗೆ ಸಚಿವನ ಸ್ಥಾನ ಸಿಗಲಿದೆ ಅನ್ನುವ ಚರ್ಚೆ ಕೂಡ ಪಕ್ಷದ ವಲಯದಲ್ಲಿ ಹರಿದಾಡುತ್ತಿದೆ. ಲೋಕಸಭಾ ಚುನಾವಣೆ ಜೊತೆಯಲ್ಲೇ ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸಘಡ ರಾಜ್ಯದ ವಿಧಾನಸಭಾ ಚುನಾವಣೆಗಳೂ ನಡೆಯಲಿದೆ. ಹೀಗಾಗಿ ಬಿಜೆಪಿ ಚುನಾವಣೆ ತಂತ್ರದ ಜೊತೆಗೆ ಸಂಪುಟ ವಿಸ್ತರಣೆಗೂ ಮುಂದಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಮುಂದಿನ ಪ್ರತಿಪಕ್ಷಗಳ ಮಹಾಸಭೆ ಬೆಂಗಳೂರಿನಲ್ಲಿ ಆಯೋಜನೆ: ಶರದ್‌ ಪವಾರ್

ಹಿಮಾಚಲ ಪ್ರದೇಶ ಹಾಗೂ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಬಿಜೆಪಿ, ಸಂಪುಟ ಪುನಾರಚನೆ ಮೂಲಕ ಎಚ್ಚರಿಕೆ ಹೆಜ್ಜೆಯಿಡಲು ಮುಂದಾಗಿದೆ.

ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಲೋಕಸಭೆ ಚುನಾವಣೆಗೂ ಮುನ್ನ ಏಕರೂಪ ನೀತಿ ಸಂಹಿತೆ ಜಾರಿಗೊಳಿಸುವ ಬಗ್ಗೆ ಪ್ರಸ್ತಾಪಿಸಿದ್ದರು. ಏಕರೂಪ ನಾಗರಿಕ ಸಂಹಿತೆ ಪರ ಸುಪ್ರೀಂ ಕೋರ್ಟು ಒಲವು ತೋರಿದೆ. ಆದರೆ ಮತ ಬ್ಯಾಂಕ್‌ ರಾಜಕೀಯದ ಕಾರಣ ವಿಪಕ್ಷಗಳು ಮುಸ್ಲಿಮರ ದಾರಿ ತಪ್ಪಿಸಿ ಪ್ರಚೋದಿಸುತ್ತಿವೆ ಎಂದು ಹೇಳಿದ್ದರು.

ಮೋದಿಯವರ ಧರ್ಮ ರಾಜಕಾರಣದ ನೀತಿಯನ್ನು ಕಾಂಗ್ರೆಸ್‌ ಸೇರಿದಂತೆ ಹಲವು ವಿರೋಧ ಪಕ್ಷಗಳು ಖಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X