ಮಾದಕ ವಸ್ತು ನಿಯಂತ್ರಣದ ತನಿಖಾ ಸ್ವರೂಪ ಬದಲಾಯಿಸಿಕೊಳ್ಳಿ: ರಾಜ್ಯಗಳಿಗೆ ಅಮಿತ್ ಶಾ ಕರೆ

Date:

  • ಬೆಂಗಳೂರಿನಲ್ಲಿ ದಕ್ಷಿಣ ಭಾರತದ ರಾಜ್ಯಗಳ ಸಮ್ಮೇಳನ
  • ಮಾದಕವಸ್ತುಗಳ ಪ್ರಸರಣ ತಡೆ ಕಾನೂನಿಗೆ ಮತ್ತಷ್ಟು ಬಲ

ಈ ಹಿಂದೆ ಆಡಳಿತದಲ್ಲಿದ್ದ ಸರ್ಕಾರಗಳು ದೇಶದಲ್ಲಿ ಮಾದಕ ವಸ್ತು ನಿಯಂತ್ರಿಸುವಲ್ಲಿ ವಿಫಲವಾಗಿದ್ದವು. ಆದರೆ ಈಗ ಕಾಲ ಬದಲಾಗಿದೆ. ದೇಶದಲ್ಲಿ ಮಾದಕ ವಸ್ತುಗಳ ಬಳಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅಮಿತ್ ಶಾ ಹೇಳಿದರು.

ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ, ನಿಯೋಜಿತ ಕಾರ್ಯಕ್ರಮದ ಭಾಗವಾಗಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ದಕ್ಷಿಣ ಭಾರತದ ರಾಜ್ಯಗಳ ಸಮ್ಮೇಳನದಲ್ಲಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಮಾದಕ ವಸ್ತುಗಳ ನಿಯಂತ್ರಣ ಇಲ್ಲಿಯವರೆಗೆ ಒಂದು ರೀತಿ ಸವಾಲಾಗಿತ್ತು. ಆದರೆ ಈಗ ಸುಧಾರಿತ ಕ್ರಮಗಳನ್ನು ಗೃಹ ಇಲಾಖೆ ತೆಗೆದುಕೊಳ್ಳುತ್ತಿದೆ. ಇದರ ಜೊತೆಗೆ ಮಾದಕ ವಸ್ತು ಮುಕ್ತ ಅಭಿಯಾನವನ್ನ ಕೇಂದ್ರ ಮಾಡುತ್ತಿದೆ. ಮಾದಕ ವಸ್ತು ಮುಕ್ತ ದೇಶವನ್ನಾಗಿಸುವ ಗುರಿಯನ್ನು ನಮ್ಮ ಸರ್ಕಾರ ಹೊಂದಿದೆ ಎಂದರು.

ನಶೆ ಮುಕ್ತ ಭಾರತಕ್ಕಾಗಿ ನಾವು ಶ್ರಮಿಸುತ್ತಿದ್ದೇವೆ. ದೇಶದ ಭದ್ರತೆ ಸಲುವಾಗಿ ಎಲ್ಲ ಇಲಾಖೆಗಳು ಒಟ್ಟಾಗಿ ಶ್ರಮಿಸಬೇಕು. ದಕ್ಷಿಣ ರಾಜ್ಯಗಳು ಡ್ರಗ್ಸ್ ತನಿಖೆಯ ಸ್ವರೂಪ ಬದಲಿಸಿಕೊಳ್ಳಬೇಕು. ಡ್ರಗ್ಸ್ ಸರಬರಾಜು ಮಾಡುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಗೃಹ ಸಚಿವರು ಕರೆ ನೀಡಿದರು.

ಹಾಲಿ ಇರುವ ಎನ್ ಡಿಪಿಎಸ್ (ನಾರ್ಕೋಟಿಕ್ ಡ್ರಗ್ಸ್ ಸೈಕ್ಯಾಟ್ರಿಕ್ ಸಬಸ್ಟನ್ಸ್) ಕಾನೂನನ್ನು ಮತ್ತಷ್ಟು ಬಲಪಡಿಸಲಾಗುವುದು. ಈ ವಿಚಾರದಲ್ಲಿ ಸುಧಾರಿತ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಕೇಂದ್ರದ ಅಭಿವೃದ್ಧಿ ಪರ ನೀತಿಯಿಂದ ಎಲ್ಲವೂ ಬದಲಾಗಲಿದೆ ಎಂದು ಅಮಿತ್ ಶಾ ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಡಿಜಿ ಮತ್ತು ಐಜಿ ಪ್ರವೀಣ್ ಸೂದ್ ಹಾಗೂ ಮತ್ತಿತರರು ಹಾಜರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಂಚಣಿದಾರರ ಮನೆ ಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣಪತ್ರ ಸಲ್ಲಿಸಲು ವ್ಯವಸ್ಥೆ

ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸುವ...

ತಹಶೀಲ್ದಾರ್ ಅಜಿತ್ ಕುಮಾರ್ ರೈ ಅನ್ನು ನ್ಯಾಯಾಲಯ ವಿಚಾರಣೆಗೆ ಒಳಪಡಿಸಲು ಆದೇಶ

ಅರಣ್ಯ ಜಮೀನನ್ನು ಕಂದಾಯ ಜಮೀನನ್ನಾಗಿ ಪರಿವರ್ತಿಸಿರುವ ಆರೋಪ ಅನುಕಂಪದಲ್ಲಿ ಸರ್ಕಾರಿ...

ಬೆಂಗಳೂರು ಟೆಕ್ ಸಮ್ಮಿಟ್ 2023 | ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡು ಬಿಡುಗಡೆ

ಬೆಂಗಳೂರು ಅರಮನೆಯಲ್ಲಿ 'ಬ್ರೇಕಿಂಗ್ ದಿ ಬೌಂಡರೀಸ್' ಘೋಷವಾಕ್ಯದ 26ನೇ ‘ಬೆಂಗಳೂರು ತಂತ್ರಜ್ಞಾನ...

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ, ಎಲ್ಲ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿದ್ದರಾಮಯ್ಯ

ಕನಕದಾಸರು ಜಾತಿ‌, ಅನಕ್ಷರತೆಯ ಅಸಮಾನತೆ ಹೋಗಲಾಡಿಸಲು ಹೋರಾಡಿದರು ಯಾವ ಧರ್ಮವೂ...