‘ಗೋ ಬ್ಯಾಕ್’ ಎಂದ ಬಿಜೆಪಿ ಕಾರ್ಯಕರ್ತರು: ಸ್ವಕ್ಷೇತ್ರದಲ್ಲೇ ಮುಜುಗರಕ್ಕೀಡಾದ ಕೇಂದ್ರ ಸಚಿವ ಗಿರಿರಾಜ್ ಸಿಂಗ್!

Date:

Advertisements

ಲೋಕಸಭೆ ಚುನಾವಣೆಯ ದಿನಾಂಕ ಇನ್ನೂ ಅಧಿಕೃತವಾಗಿ ಘೋಷಣೆಯಾಗಿಲ್ಲದಿದ್ದರೂ, ದಿನಾಂಕ ಹತ್ತಿರ ಬರುತ್ತಿದ್ದಂತೆಯೇ ದೇಶದ ಎಲ್ಲ ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದೆ. ಈಗಾಗಲೇ ಕೆಲವು ಬಿಜೆಪಿ ಹಾಗೂ ಕಾಂಗ್ರೆಸ್ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ನಡುವೆ ಆಡಳಿತಾರೂಢ ಬಿಜೆಪಿ ಮುಖಂಡರ ವಿರುದ್ಧವೇ ಪಕ್ಷದ ಕಾರ್ಯಕರ್ತರು ರೊಚ್ಚಿಗೇಳುತ್ತಿರುವ ಘಟನೆಗಳು ವರದಿಯಾಗುತ್ತಿದೆ.

ಇತ್ತೀಚೆಗೆ ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರಿಯಾಗಿ ಕೆಲಸ ಮಾಡಿಲ್ಲ ಎಂದು ಅವರ ವಿರುದ್ಧ ಪಕ್ಷದ ಕಾರ್ಯಕರ್ತರೇ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ಮಾಡಿದ್ದಲ್ಲದೇ, ಅಭ್ಯರ್ಥಿ ಬದಲಾಯಿಸುವಂತೆ ಹೈಕಮಾಂಡ್‌ಗೆ ಒತ್ತಡ ಹೇರಿದ್ದರು. ಈ ನಡುವೆ ಬಿಹಾರದ ಬೇಗುಸರಾಯ್‌ನಲ್ಲೂ ಕೂಡ ಇಂಥದ್ದೇ ಬೆಳವಣಿಗೆ ಇಂದು ನಡೆದಿದ್ದು, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸ್ವಕ್ಷೇತ್ರದಲ್ಲೇ ಮುಜುಗರಕ್ಕೀಡಾಗಿದ್ದಾರೆ.

ಸಿಂಗ್ ಅವರು ಬಚ್ವಾಡಾದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ, ಬೇಗುಸರಾಯ್‌ನ ಬಿಜೆಪಿ ಸಂಸದ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ತಮ್ಮ ಸ್ವಂತ ಲೋಕಸಭಾ ಕ್ಷೇತ್ರ ಬೇಗುಸರಾಯ್‌ನಲ್ಲಿ ಪಕ್ಷದ ಕಾರ್ಯಕರ್ತರಿಂದ ತೀವ್ರ ವಿರೋಧವನ್ನು ಎದುರಿಸಬೇಕಾಯಿತು.

Advertisements

ಬಚ್ವಾಡಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಣಿ ಗ್ರಾಮದ ಬಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಒಂದು ಕೈಯ್ಯಲ್ಲಿ ಪಕ್ಷದ ಬಾವುಟ ಹಾಗೂ ಇನ್ನೊಂದು ಕೈಯ್ಯಲ್ಲಿ ಕಪ್ಪು ಬಾವುಟಗಳನ್ನು ಪ್ರದರ್ಶಿಸಿ, ಮುರ್ದಾಬಾದ್, ಗೋ ಬ್ಯಾಕ್ ಘೋಷಣೆಗಳನ್ನು ಕೂಗಿದರು. ಇದರಿಂದಾಗಿ ಕೆಲಹೊತ್ತು ಕೇಂದ್ರ ಸಚಿವ ಕಾರಿನಲ್ಲೇ ಕುಳಿತುಕೊಳ್ಳಬೇಕಾಯಿತು. ಆ ನಂತರ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ  ಕಪ್ಪು ಬಾವುಟ ತೋರಿಸಿದವರನ್ನು ಸರಿಸಿ, ಮುಂದೆ ತೆರಳಲು ನೆರವಾದರು. ಈ ಬೆಳವಣಿಗೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್‌ಗೆ ಆಹಾರವಾಗಿದೆ.

ಬೇಗುಸರಾಯ್‌ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಪೆಪ್ಸಿ ಕಂಪೆನಿಯ ಹೊಸ ಸ್ಥಾವರದಲ್ಲಿ ಬೇಗುಸರಾಯ್‌ನ ಸ್ಥಳೀಯರಿಗೆ ಯಾವುದೇ ಪ್ರಾತಿನಿದ್ಯ ನೀಡಿಲ್ಲ. ಯಾರೊಬ್ಬರಿಗೂ ಉದ್ಯೋಗ ನೀಡಿಲ್ಲ. ಗಿರಿರಾಜ್ ಸಿಂಗ್ ಅವರಿಗೆ ಐದರಿಂದ ಹತ್ತು ಲಕ್ಷ ರೂಪಾಯಿ ಲಂಚ ನೀಡಿದವರಿಗೆ ಮಾತ್ರ ಉದ್ಯೋಗ ನೀಡಲಾಗಿದೆ. ಅರ್ಹರಿದ್ದವರಿಗೆ ವಂಚಿಸಲಾಗಿದೆ ಎಂದು ಕಪ್ಪು ಬಾವುಟ ಪ್ರದರ್ಶಿಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.

“ಈವರೆಗೆ ಕ್ಷೇತ್ರದಲ್ಲಿ ಸರಿಯಾದ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಆದರೆ, ಗಿರಿರಾಜ್ ಸಿಂಗ್ ಅವರು ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಾಕಷ್ಟು ಸಕ್ರಿಯರಾಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಗಿಟ್ಟಿಸಲು ಈಗ ಜನರ ಬಳಿಗೆ ತಲುಪುತ್ತಿದ್ದಾರೆ. ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X