ಉಡುಪಿ | ರಾ.ಹೆ. ಕಾಮಗಾರಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮೀನುಗಾರ ಮುಖಂಡರಿಂದ ತೀವ್ರ ತರಾಟೆ

Date:

Advertisements

ಉಡುಪಿಯ ಮಲ್ಪೆ ಬಂದರನ್ನು ಸಂಪರ್ಕಿಸುವ ಪ್ರಮುಖ ಕರಾವಳಿ ಬೈಪಾಸ್- ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮೀನುಗಾರ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ.

ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆಯಲ್ಲಿ ಕರೆಯಲಾದ ಸಭೆ ಆರಂಭವಾಗುತ್ತಿದ್ದಂತೆ ಮಾತು ಆರಂಭಿಸಿದ ಮೀನುಗಾರ ಮುಖಂಡ ಕಿಶೋರ್ ಡಿ.ಸುವರ್ಣ, “ಕೋಟ್ಯಂತರ ರೂ. ಆದಾಯ ಬರುವ ಮತ್ತು ಲಕ್ಷಾಂತರ ಮಂದಿಗೆ ಉದ್ಯೋಗ ನೀಡುವ ಕೇಂದ್ರವಾಗಿರುವ ಮಲ್ಪೆ ಬಂದರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತ ಸರ್ವೆ, ಅಗಲ, ಉದ್ದ ಮತ್ತು ಪರಿಹಾರದ ಬಗ್ಗೆ ಜನರಿಗೆ ಸಾಕಷ್ಟು ಗೊಂದಲಗಳಿವೆ. ಇದರ ವಿರುದ್ಧ ಹಲವು ಮಂದಿ ಕೋರ್ಟ್‌ಗೆ ಹೋಗಿದ್ದಾರೆ” ಎಂದರು.

“ಇಲ್ಲಿ ಪರಿಹಾರ ಕಾರ್ಯ ಕೂಡ ವೈಜ್ಞಾನಿಕ ನಡೆದಿಲ್ಲ. ಹಣಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಆದರೆ ಕೋಟ್ಯಂತ ರೂ. ಆದಾಯ ಇರುವ ಈ ರಸ್ತೆಗೆ ಸಂಬಂಧಿಸಿ ಪರಿಹಾರಕ್ಕೆ ಕೇವಲ 50 ಕೋಟಿ ರೂ. ಕೊಡಲು ಹಿಂದೇಟು ಹಾಕುವುದರಲ್ಲಿ ಅರ್ಥ ಇದೆಯೇ?” ಎಂದು ಅವರು ಸಂಸದೆ ವಿರುದ್ಧ ಕಿಡಿಕಾರಿದರು.

Advertisements

“ನಾವು ನಿಮ್ಮ ಮೇಲೆ ವಿಶ್ವಾಸ ಇಟ್ಟು ಮತ ಹಾಕಿ, ಗೆಲ್ಲಿಸಿದ್ದೇವೆ. ಆದರೆ ನೀವು ನಮ್ಮ ಮೇಲೆ ವಿಶ್ವಾಸ ಇಟ್ಟಿಲ್ಲ. ನಿಮಗೆ 10 ವರ್ಷಗಳಿಂದ ಮತ ಹಾಕಿದ್ದಕ್ಕೆ ನೀವು ನಮಗೆ ಏನು ಮಾಡಿದ್ದೀರಿ. ರಸ್ತೆಯಲ್ಲಿ ಭೂಮಿ ಕಳೆದುಕೊಳ್ಳುವವರನ್ನು ಸೇರಿಸಿ ಈವರೆಗೆ ಒಂದೇ ಒಂದು ಸಭೆ ಸಂಸದರಾಗಿ ನೀವು ಕರೆದಿಲ್ಲ. ನೀವು ನಮ್ಮ ಜನಪ್ರತಿನಿಧಿ ಅಲ್ಲವೇ? ನಿಮಗೆ ಕರ್ತವ್ಯ ಇಲ್ಲವೇ? ಜನರನ್ನು ಯಾಕೆ ನೀವು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ” ಎಂದು ಅವರು ಕಿಡಿಕಾರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದೆ, “ನೀವು Too Much ಮಾತನಾಡಬೇಡಿ, ವೈಯಕ್ತಿಕ ಸಮಸ್ಯೆ ಹೇಳಬೇಡಿ” ಎಂದರು. ಇದರಿಂದ ಮತ್ತಷ್ಟು ಕೆರಳಿದ ಕಿಶೋರ್ ಅವರು,  “ನಾನು ಜನರಿಗಾಗಿರುವ ಸಮಸ್ಯೆ ಹೇಳಿದರೆ, ಅದರಲ್ಲಿ ವೈಯಕ್ತಿಕ ಏನು? ಇಲ್ಲಿ ಕುಳಿತಿರುವವರು ಎಲ್ಲರೂ ಸಾಕ್ಷಿ ಇದ್ದಾರೆ” ಎಂದರು. ಈ ನಡುವೆ ವಾಗ್ವಾದ ಜೋರಾಗಿದ್ದರಿಂದ ಮೀನುಗಾರ ಮುಖಂಡನನ್ನು ಪೊಲೀಸರು ಸಮಾಧಾನಿಸುತ್ತಿರುವುದು ಕಂಡು ಬಂತು. ಈ ಎಲ್ಲ ಬೆಳವಣಿಗೆ ಅಲ್ಲಿದ್ದವರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲಾಗಿದೆ.

ಕೇಂದ್ರ ಸಚಿವೆ ಹಾಗೂ ಮೀನುಗಾರ ಮುಖಂಡರ ನಡುವೆ ವಾಗ್ವಾದ ನಡೆಯುತ್ತಿರುವಾಗ ಉಡುಪಿಯ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಕೂಡ ಸಭೆಯಲ್ಲಿದ್ದರು. ಅವರು ಕೂಡ ಕಕ್ಕಾಬಿಕ್ಕಿಯಾಗಿ, ಸುಮ್ಮನೆ ಕುಳಿತಿದ್ದರು. ಈ ನಡುವೆ ಮೀನುಗಾರ ಮುಖಂಡ ಕಿಶೋರ್ ಅವರ ಹೆಸರೆತ್ತಿ, ಕುಳಿತಲ್ಲಿಂದಲೇ ಸಮಾಧಾನಿಸಲು ಕೂಡ ಯತ್ನಿಸಿದರು. ಮಾತಿನ ಮಧ್ಯೆ ಕೆಲವೊಂದು ತಾಂತ್ರಿಕ ಕಾರಣಗಳಿರುವುದಾಗಿಯೂ ಶಾಸಕ ಯಶ್ಪಾಲ್ ಸುವರ್ಣ ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X