ಉತ್ತರ ಪ್ರದೇಶ ಬಜೆಟ್‌ಗೂ ಬಿಜೆಪಿ ಪ್ರಣಾಳಿಕೆಗೂ ಸಂಬಂಧವೇ ಇಲ್ಲ: ಅಖಿಲೇಶ್ ಯಾದವ್

Date:

Advertisements

ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮಂಡಿಸಿದ ಉತ್ತರ ಪ್ರದೇಶ ಬಜೆಟ್ ಅನ್ನು ಗುರುವಾರ ಸಮಾಜವಾದಿ ಪಕ್ಷದ ಮುಖ್ಯಸ್ಥ, ಯುಪಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಿರಸ್ಕರಿಸಿದ್ದಾರೆ. ಇದು ರಾಜ್ಯದಲ್ಲಿ ಬಿಜೆಪಿಯ ‘ಎರಡನೇ ಕೊನೆಯ ಬಜೆಟ್’ ಎಂದು ಹೇಳಿರುವ ಅಖಿಲೇಶ್, ಉತ್ತರ ಪ್ರದೇಶ ಬಜೆಟ್‌ಗೂ ಬಿಜೆಪಿ ಪ್ರಣಾಳಿಕೆಗೂ ಸಂಬಂಧವೇ ಇಲ್ಲ ಎಂದಿದ್ದಾರೆ.

ಸರ್ಕಾರದ ವಿಧಾನವನ್ನು ಟೀಕಿಸಿದ ಯಾದವ್, “ಇತ್ತೀಚಿನ ಬಜೆಟ್ ಸೇರಿದಂತೆ ಬಿಜೆಪಿ ಸರ್ಕಾರದ ಯಾವುದೇ ಬಜೆಟ್‌ಗಳು ಉತ್ತರ ಪ್ರದೇಶಕ್ಕೆ ಸ್ಪಷ್ಟ ದೃಷ್ಟಿಕೋನ ಅಥವಾ ನಿರ್ದೇಶನವನ್ನು ಹೊಂದಿಲ್ಲ. ಇದು ಈ ಸರ್ಕಾರದ ಒಂಬತ್ತನೇ ಬಜೆಟ್, ಹಾಗೆಯೇ ಎರಡನೇ ಕೊನೆಯ ಬಜೆಟ್” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಯುಪಿ ಸಿಎಂ ನಿವಾಸದಡಿಯಲ್ಲಿ ಶಿವಲಿಂಗವಿದೆ: ಅಖಿಲೇಶ್ ಯಾದವ್

Advertisements

ಬಜೆಟ್‌ಗೂ ಬಿಜೆಪಿಯ ಪ್ರಣಾಳಿಕೆಗೂ ಯಾವುದೇ ಸಂಬಂಧವಿಲ್ಲ. ಈ ಬಜೆಟ್ ಬಳಿಕ ನಂತರ ಈ ಆಡಳಿತಾವಧಿಯ ಕೊನೆಯ ಬಜೆಟ್ ಅನ್ನು ಮಂಡಿಸಲಾಗುತ್ತದೆ. ಅದಾದ ಬಳಿಕ ಜನರಿಗೆ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಅವಕಾಶ ಸಿಗುತ್ತದೆ” ಎಂದರು.

“ರಾಜ್ಯವನ್ನು ಹೇಗೆ ಮುಂದಕ್ಕೆ ಕೊಂಡೊಯ್ಯುವುದು ಎಂಬುದರ ಕುರಿತು ಯಾವುದೇ ಮಾರ್ಗಸೂಚಿಯಿಲ್ಲದೆ ಸರ್ಕಾರ ಬಜೆಟ್‌ಗಳನ್ನು ಮಂಡಿಸಿದೆ. ಸಾಮಾನ್ಯ ಜನರ ಅಗತ್ಯಗಳನ್ನು ಹೇಗೆ ಪೂರೈಸಲಾಗುತ್ತದೆ ಎಂಬುದರ ಕುರಿತು ಸ್ಪಷ್ಟತೆ ಇಲ್ಲ” ಎಂದು ಅಖಿಲೇಶ್ ಬಜೆಟ್ ಅನ್ನು ಟೀಕಿಸಿದರು.

ಇನ್ನು ಅತಿ ದೊಡ್ಡ ಬಜೆಟ್ ಅನ್ನು ಮಂಡಿಸಲಾಗಿದೆ ಎಂಬ ಬಿಜೆಪಿಯ ಹೇಳಿಕೆಯನ್ನು ಟೀಕಿಸಿದ ಎಸ್‌ಪಿ ನಾಯಕ, ಪ್ರತಿ ಹೊಸ ಬಜೆಟ್ ಸ್ವಾಭಾವಿಕವಾಗಿ ಹಿಂದಿನದಕ್ಕಿಂತ ದೊಡ್ಡದಾಗಿರುತ್ತದೆ ಎಂದು ಹೇಳಿದರು. “ಪ್ರತಿ ಬಾರಿ ಬಜೆಟ್ ಮಂಡಿಸಿದಾಗಲೂ ಬಿಜೆಪಿಗರು ತಮ್ಮ ಬಜೆಟ್ ದೊಡ್ಡ ಬಜೆಟ್ ಎಂದು ಹೇಳಿಕೊಳ್ಳುತ್ತಾರೆ. ಈ ಹೇಳಿಕೆಯನ್ನು ಯಾವುದೇ ಸರ್ಕಾರ ನೀಡಬಹುದು. ಏಕೆಂದರೆ ಪ್ರತಿ ಬಜೆಟ್ ಹಿಂದಿನ ಬಜೆಟ್‌ಗಿಂತ ದೊಡ್ಡದಾಗಿರುತ್ತದೆ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನು ಓದಿದ್ದೀರಾ? ನಾವು ಅಧಿಕಾರಕ್ಕೆ ಬಂದ ತಕ್ಷಣ ಅಗ್ನಿವೀರ ಯೋಜನೆ ರದ್ದು ಮಾಡುತ್ತೇವೆ: ಅಖಿಲೇಶ್ ಯಾದವ್

“ಇದು ಬಜೆಟ್ ಅಲ್ಲ, ಇದು ಬಹಳಷ್ಟು ಶಬ್ದ ಮಾಡುವ, ಆದರೆ ಒಳಗೆ ಏನೂ ಇಲ್ಲದ ಖಾಲಿ ಡ್ರಮ್. ಜನರು ನಿಜವಾದ ಬಜೆಟ್ ಅನ್ನು ಮಂಡಿಸಿಲ್ಲ ಎಂದು ಭಾವಿಸುತ್ತಾರೆ. ಕೇವಲ ಧರ್ಮೋಪದೇಶಗಳನ್ನು ನೀಡಲಾಗಿದೆ. ಆದರೆ ನಿಜವಾದ ಬಜೆಟ್ ಯಾವಾಗ ಮಂಡಿಸಲಾಗುತ್ತದೆ ಎಂದು ಜನರು ಆಶ್ಚರ್ಯದಿಂದ ಕಾಯುತ್ತಿದ್ದರು” ಎಂದು ಯೋಗಿ ಸರ್ಕಾರವನ್ನು ಕುಟುಕಿದರು.

2025-2026ರ ಹಣಕಾಸು ವರ್ಷಕ್ಕೆ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಇಂದು ಬಜೆಟ್ ಮಂಡಿಸಲಾಗಿದೆ. ಹಣಕಾಸು ಸಚಿವ ಸುರೇಶ್ ಖನ್ನಾ 8.09 ಲಕ್ಷ ಕೋಟಿ (8,08,736 ಕೋಟಿ ರೂ.) ರೂ.ಗಳ ಬಜೆಟ್ ಅನ್ನು ಮಂಡಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X