ಉತ್ತರ ಪ್ರದೇಶ ಬಜೆಟ್‌ಗೂ ಬಿಜೆಪಿ ಪ್ರಣಾಳಿಕೆಗೂ ಸಂಬಂಧವೇ ಇಲ್ಲ: ಅಖಿಲೇಶ್ ಯಾದವ್

Date:

ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮಂಡಿಸಿದ ಉತ್ತರ ಪ್ರದೇಶ ಬಜೆಟ್ ಅನ್ನು ಗುರುವಾರ ಸಮಾಜವಾದಿ ಪಕ್ಷದ ಮುಖ್ಯಸ್ಥ, ಯುಪಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಿರಸ್ಕರಿಸಿದ್ದಾರೆ. ಇದು ರಾಜ್ಯದಲ್ಲಿ ಬಿಜೆಪಿಯ ‘ಎರಡನೇ ಕೊನೆಯ ಬಜೆಟ್’ ಎಂದು ಹೇಳಿರುವ ಅಖಿಲೇಶ್, ಉತ್ತರ ಪ್ರದೇಶ ಬಜೆಟ್‌ಗೂ ಬಿಜೆಪಿ ಪ್ರಣಾಳಿಕೆಗೂ ಸಂಬಂಧವೇ ಇಲ್ಲ ಎಂದಿದ್ದಾರೆ.

- Advertisement -

ಸರ್ಕಾರದ ವಿಧಾನವನ್ನು ಟೀಕಿಸಿದ ಯಾದವ್, “ಇತ್ತೀಚಿನ ಬಜೆಟ್ ಸೇರಿದಂತೆ ಬಿಜೆಪಿ ಸರ್ಕಾರದ ಯಾವುದೇ ಬಜೆಟ್‌ಗಳು ಉತ್ತರ ಪ್ರದೇಶಕ್ಕೆ ಸ್ಪಷ್ಟ ದೃಷ್ಟಿಕೋನ ಅಥವಾ ನಿರ್ದೇಶನವನ್ನು ಹೊಂದಿಲ್ಲ. ಇದು ಈ ಸರ್ಕಾರದ ಒಂಬತ್ತನೇ ಬಜೆಟ್, ಹಾಗೆಯೇ ಎರಡನೇ ಕೊನೆಯ ಬಜೆಟ್” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಯುಪಿ ಸಿಎಂ ನಿವಾಸದಡಿಯಲ್ಲಿ ಶಿವಲಿಂಗವಿದೆ: ಅಖಿಲೇಶ್ ಯಾದವ್

ಬಜೆಟ್‌ಗೂ ಬಿಜೆಪಿಯ ಪ್ರಣಾಳಿಕೆಗೂ ಯಾವುದೇ ಸಂಬಂಧವಿಲ್ಲ. ಈ ಬಜೆಟ್ ಬಳಿಕ ನಂತರ ಈ ಆಡಳಿತಾವಧಿಯ ಕೊನೆಯ ಬಜೆಟ್ ಅನ್ನು ಮಂಡಿಸಲಾಗುತ್ತದೆ. ಅದಾದ ಬಳಿಕ ಜನರಿಗೆ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಅವಕಾಶ ಸಿಗುತ್ತದೆ” ಎಂದರು.

“ರಾಜ್ಯವನ್ನು ಹೇಗೆ ಮುಂದಕ್ಕೆ ಕೊಂಡೊಯ್ಯುವುದು ಎಂಬುದರ ಕುರಿತು ಯಾವುದೇ ಮಾರ್ಗಸೂಚಿಯಿಲ್ಲದೆ ಸರ್ಕಾರ ಬಜೆಟ್‌ಗಳನ್ನು ಮಂಡಿಸಿದೆ. ಸಾಮಾನ್ಯ ಜನರ ಅಗತ್ಯಗಳನ್ನು ಹೇಗೆ ಪೂರೈಸಲಾಗುತ್ತದೆ ಎಂಬುದರ ಕುರಿತು ಸ್ಪಷ್ಟತೆ ಇಲ್ಲ” ಎಂದು ಅಖಿಲೇಶ್ ಬಜೆಟ್ ಅನ್ನು ಟೀಕಿಸಿದರು.

ಇನ್ನು ಅತಿ ದೊಡ್ಡ ಬಜೆಟ್ ಅನ್ನು ಮಂಡಿಸಲಾಗಿದೆ ಎಂಬ ಬಿಜೆಪಿಯ ಹೇಳಿಕೆಯನ್ನು ಟೀಕಿಸಿದ ಎಸ್‌ಪಿ ನಾಯಕ, ಪ್ರತಿ ಹೊಸ ಬಜೆಟ್ ಸ್ವಾಭಾವಿಕವಾಗಿ ಹಿಂದಿನದಕ್ಕಿಂತ ದೊಡ್ಡದಾಗಿರುತ್ತದೆ ಎಂದು ಹೇಳಿದರು. “ಪ್ರತಿ ಬಾರಿ ಬಜೆಟ್ ಮಂಡಿಸಿದಾಗಲೂ ಬಿಜೆಪಿಗರು ತಮ್ಮ ಬಜೆಟ್ ದೊಡ್ಡ ಬಜೆಟ್ ಎಂದು ಹೇಳಿಕೊಳ್ಳುತ್ತಾರೆ. ಈ ಹೇಳಿಕೆಯನ್ನು ಯಾವುದೇ ಸರ್ಕಾರ ನೀಡಬಹುದು. ಏಕೆಂದರೆ ಪ್ರತಿ ಬಜೆಟ್ ಹಿಂದಿನ ಬಜೆಟ್‌ಗಿಂತ ದೊಡ್ಡದಾಗಿರುತ್ತದೆ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನು ಓದಿದ್ದೀರಾ? ನಾವು ಅಧಿಕಾರಕ್ಕೆ ಬಂದ ತಕ್ಷಣ ಅಗ್ನಿವೀರ ಯೋಜನೆ ರದ್ದು ಮಾಡುತ್ತೇವೆ: ಅಖಿಲೇಶ್ ಯಾದವ್

“ಇದು ಬಜೆಟ್ ಅಲ್ಲ, ಇದು ಬಹಳಷ್ಟು ಶಬ್ದ ಮಾಡುವ, ಆದರೆ ಒಳಗೆ ಏನೂ ಇಲ್ಲದ ಖಾಲಿ ಡ್ರಮ್. ಜನರು ನಿಜವಾದ ಬಜೆಟ್ ಅನ್ನು ಮಂಡಿಸಿಲ್ಲ ಎಂದು ಭಾವಿಸುತ್ತಾರೆ. ಕೇವಲ ಧರ್ಮೋಪದೇಶಗಳನ್ನು ನೀಡಲಾಗಿದೆ. ಆದರೆ ನಿಜವಾದ ಬಜೆಟ್ ಯಾವಾಗ ಮಂಡಿಸಲಾಗುತ್ತದೆ ಎಂದು ಜನರು ಆಶ್ಚರ್ಯದಿಂದ ಕಾಯುತ್ತಿದ್ದರು” ಎಂದು ಯೋಗಿ ಸರ್ಕಾರವನ್ನು ಕುಟುಕಿದರು.

2025-2026ರ ಹಣಕಾಸು ವರ್ಷಕ್ಕೆ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಇಂದು ಬಜೆಟ್ ಮಂಡಿಸಲಾಗಿದೆ. ಹಣಕಾಸು ಸಚಿವ ಸುರೇಶ್ ಖನ್ನಾ 8.09 ಲಕ್ಷ ಕೋಟಿ (8,08,736 ಕೋಟಿ ರೂ.) ರೂ.ಗಳ ಬಜೆಟ್ ಅನ್ನು ಮಂಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...