‘ಜವಾನ್’ ಸಿನಿಮಾಕ್ಕಾಗಿ ಶಾರೂಕ್‌ ಖಾನ್‌ಗೆ ಪತ್ರದ ಮೂಲಕ ‘ಥ್ಯಾಂಕ್ಯೂ’ ಎಂದ ಡಾ. ಕಫೀಲ್ ಖಾನ್

Date:

Advertisements

2017ರ ಗೋರಖ್‌ಪುರ ಆಸ್ಪತ್ರೆಯಲ್ಲಿ 63 ಮಕ್ಕಳ ಸಾವಿನ ಪ್ರಕರಣದಲ್ಲಿ ಬಲಿಪಶುವಾಗಿದ್ದ ಡಾ ಕಫೀಲ್ ಖಾನ್, ನಟ ಶಾರುಖ್ ಖಾನ್ ಅವರ ಇತ್ತೀಚಿನ ಹಿಟ್ ಸಿನಿಮಾವಾಗಿರುವ ‘ಜವಾನ್‌’ನಲ್ಲಿ ಅದೇ ರೀತಿಯ ಘಟನೆಯನ್ನು ಚಿತ್ರಿಸಿದ್ದಕ್ಕಾಗಿ ಪತ್ರ ಬರೆಯುವ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.

ಸನ್ಯಾ ಮಲ್ಹೋತ್ರಾ ಮಾಡಿರುವ ಪಾತ್ರ ಡಾ. ಖಾನ್‌ ಅನುಭವಿಸಿರುವ ಅನುಭವದಂತಿದೆ. ಅವರು ಆರಂಭದಲ್ಲಿ ಹೀರೋ ಎಂದು ಪ್ರಶಂಸಿಸಲ್ಪಟ್ಟಿರುತ್ತಾರೆ. ಆದರೆ ದುರಂತದಲ್ಲಿ ಅವರ ಪಾತ್ರಕ್ಕಾಗಿ ನಂತರ ಬಂಧಿಸಿ, ಜೈಲಿಗೆ ಹಾಕುವ ದೃಶ್ಯವು ‘ಜವಾನ್’ ಚಿತ್ರದಲ್ಲಿದೆ.

ಹೀಗಾಗಿ, ಸಿನಿಮಾ ನೋಡಿದ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೆ ಪತ್ರ ಬರೆದಿರುವ ಡಾ. ಕಫೀಲ್ ಖಾನ್, “ಜವಾನ್ ಸಿನಿಮಾ ಒಂದು ಕಾಲ್ಪನಿಕ ಘಟನೆಯನ್ನು ಉಲ್ಲೇಖಿಸಿದ್ದೀರಿ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಗೋರಖ್‌ಪುರ ದುರಂತಕ್ಕೆ ಅದು ಹೋಲಿಕೆಯಾಗಲಿದ್ದು, ವ್ಯವಸ್ಥಿತ ವೈಫಲ್ಯಗಳು, ನಿರಾಸಕ್ತಿ ಮತ್ತು ಮುಖ್ಯವಾಗಿ, ಕಳೆದುಹೋದ ಮುಗ್ಧ ಜೀವಗಳ ಪ್ರಬಲ ಜ್ಞಾಪನೆಯಾಗಿದೆ. ನಮ್ಮ ಆರೋಗ್ಯ ವ್ಯವಸ್ಥೆಯಲ್ಲಿ ಹೊಣೆಗಾರಿಕೆಯ ತುರ್ತು ಅಗತ್ಯವನ್ನು ಆ ದೃಶ್ಯಗಳು ಒತ್ತಿ ಹೇಳುತ್ತದೆ” ಎಂದು ಬರೆದಿದ್ದಾರೆ.

Advertisements

“ಸನ್ಯಾ ಮಲ್ಹೋತ್ರಾ ಮಾಡಿರುವ ಪಾತ್ರ ನನ್ನನ್ನು ನೇರವಾಗಿ ಉಲ್ಲೇಖಿಸದಿದ್ದರೂ, ನಾನು ಎದುರಿಸಿದ ಅನುಭವಗಳನ್ನು ಒಳಗೊಂಡಿದೆ. ಸಿನಿಮಾದಲ್ಲಿ ತೋರಿಸಿರುವ ಆಸ್ಪತ್ರೆ ದುರಂತದ ನಿಜವಾದ ಅಪರಾಧಿ ಸಿಕ್ಕಿಬೀಳುವ ದೃಶ್ಯ ನೋಡುವಾಗ ಖುಷಿಯಾಗುತ್ತದೆ. ಆದರೆ ನಿಜ ಜೀವನದಲ್ಲಿ ನಡೆದ ಗೋರಖ್‌ಪುರ ಘಟನೆಯ ನಿಜವಾದ ಅಪರಾಧಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ. ಇಷ್ಟು ವರ್ಷಗಳಾದರೂ ನಾನು ಇನ್ನೂ ಕೂಡ ನನ್ನ ವೃತ್ತಿಯನ್ನು ಮರಳಿ ಪಡೆಯಲು ಹೆಣಗಾಡುತ್ತಿದ್ದೇನೆ. ಜೊತೆಗೆ, ತಮ್ಮ ಮಕ್ಕಳನ್ನು ಕಳೆದುಕೊಂಡ 63 ಪೋಷಕರು ಇನ್ನೂ ಕೂಡ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ” ಎಂದು ಶಾರೂಖ್‌ ಖಾನ್‌ಗೆ ಪತ್ರದಲ್ಲಿ ಹೇಳಿದ್ದಾರೆ.

2017ರ ಆಗಸ್ಟ್‌ನಲ್ಲಿ ನಡೆದಿದ್ದ ಗೋರಖ್‌ಪುರ ದುರಂತವು ರಾಷ್ಟ್ರವ್ಯಾಪಿ ಗಮನ ಸೆಳೆದಿತ್ತು. ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರ್ಕಾರವಿರುವ ಉತ್ತರ ಪ್ರದೇಶದ ಗೋರಖ್‌ಪುರದ ಸರ್ಕಾರಿ ಬಿಆರ್‌ಡಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 63 ಮಕ್ಕಳು ಸಾವನ್ನಪ್ಪಿದರು. ಆಕ್ಸಿಜನ್ ಪೂರೈಕೆದಾರರಿಗೆ ಬಾಕಿ ಪಾವತಿಸದೆ ಪೂರೈಕೆ ಸ್ಥಗಿತಗೊಂಡಿತ್ತು ಎಂದು ಆಸ್ಪತ್ರೆಯ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು ಎಂದು ವರದಿಯಾಗಿತ್ತು.

ಜೀವ ಉಳಿಸುವ ಪ್ರಯತ್ನದಲ್ಲಿ ಆಮ್ಲಜನಕ ಸಿಲಿಂಡರ್‌ಗಳನ್ನು ವ್ಯವಸ್ಥೆ ಮಾಡಲು ಡಾ. ಕಫೀಲ್ ಖಾನ್ ತಮ್ಮ ಸ್ವಂತ ಹಣವನ್ನು ಖರ್ಚು ಮಾಡಿದ್ದರು. ಅವರ ಧೀರ ಪ್ರಯತ್ನಗಳು ದೇಶಾದ್ಯಂತ ಪ್ರಶಂಸಿಸಲ್ಪಟ್ಟಾಗ, ಯೋಗಿ ಸರ್ಕಾರವು ಅವರನ್ನೇ ಕರ್ತವ್ಯ ಲೋಪದ ಆರೋಪದ ಮೇಲೆ ಅವರನ್ನು ನೋಡಲ್ ಅಧಿಕಾರಿ ಹುದ್ದೆಯಿಂದ ಕಿತ್ತುಹಾಕಿತ್ತು. ಬಳಿಕ ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಲಾಗಿತ್ತು. ಆದರೆ ಆ ಬಳಿಕ 2019ರಲ್ಲಿ ಅವರನ್ನು ಆರೋಪ ಮುಕ್ತಗೊಳಿಸಿ ನ್ಯಾಯಾಲಯವು ಬಿಡುಗಡೆಗೊಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X